ದಾವಣಗೆರೆ: ವಿಮಾನ ಕೆಳಗಡೆ ಹಾರಿದ ಅನುಭವ ನಿಮಗೂ ಆಗಿದೆಯಾ..? ಇದಕ್ಕೆ ಕಾರಣ ಏನು..?

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಕಳೆದ ಎರಡ್ಮೂರು ದಿನದ ಹಿಂದೆ ವಿಮಾನ ಕಡಿಮೆ ಎತ್ತರದಲ್ಲಿ ಹಾರಿದ ಅನುಭವ‌ ನಿಮಗೂ ಆಗಿದೆಯಾ..? ಇದಕ್ಕೆ ಕಾರಣ ಏನು ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಿದ್ದು ಸಹಜ. ಒಂದೆಡೆ ಇರಾನ್- ಇಸ್ರೇಲ್ ಯುದ್ಧ ಭೀತಿಯಲ್ಲಿರುವ ಜನ, ಈ ರೀತಿ ವಿಮಾನ ಕೆಳ‌ ಹಂತದಲ್ಲಿ ಹಾರಾಟ ನಡೆಸಿದ್ದಕ್ಕೆ ಆತಂಕಗೊಂಡಿದ್ದರು.

ದಾವಣಗೆರೆ: ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಕೆ; ಬಿಜೆಪಿಯಲ್ಲಿ ಒಗ್ಗಟ್ಟು ಪ್ರದರ್ಶನ

ಇದಕ್ಕೆ ದಾವಣಗೆರೆ ಜಿಲ್ಲಾಡಳಿತ ಸ್ಪಷ್ಟನೆ ನೀಡಿದ್ದು, ಜಿಲ್ಲೆಯ ವಿವಿಧ ಭಾಗಗಳಲ್ಲಿ ಜಿಯಾಲಜಿಕಲ್ ಸರ್ವೆ ಆಫ್ ಇಂಡಿಯಾ (ಜಿಎಸ್‌ಐ) ವತಿಯಿಂದ ವೈಮಾನಿಕ ಸಮೀಕ್ಷೆ ನಡೆಯುತ್ತಿದ್ದು, ಲಘು ವಿಮಾನಗಳು ಕಡಿಮೆ ಎತ್ತರದಲ್ಲಿ ಹಾರಾಡುತ್ತಿವೆ. ಈ ಬಗ್ಗೆ ಸಾರ್ವಜನಿಕರಲ್ಲಿ ಸಮರ್ಪಕ ಮಾಹಿತಿ ನೀಡದಿದ್ದರಿಂದ ಜನರಲ್ಲಿ ಆತಂಕ‌ ಮತ್ತು ಕುತೂಹಲ ಮೂಡಿಸಿತ್ತು.

ಬಿ ಫಾರಂ ಸಿಗುವ‌ ಮುನ್ನವೇ ನಾಮಪತ್ರ ಸಲ್ಪಿಸಿದ ಶಾಮನೂರು ಶಿವಶಂಕರಪ್ಪ ಮೊಮ್ಮಗ; ಕಾಂಗ್ರೆಸ್ ಪಕ್ಷ ಕಟ್ಟಿದವರೇ ನಮ್ಮ ತಾತ ಎಂದ ಸಮರ್ಥ್

ಕಡಿಮೆ ಎತ್ತರದಲ್ಲಿ ಲಘು ವಿಮಾನ ಹಾರಾಟಮಾಡುತಿರುವುದನ್ನು ಗ್ರಾಮೀಣ ಪ್ರದೇಶದ. ಗಮನಿಸಿದ್ದಾರೆ. ಇದು ವೈಮಾನಿಕ
ಸಮೀಕ್ಷೆಯಾಗಿದ್ದು, ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾಡಳಿತ‌ ಸಷ್ಟಪಡಿಸಿದೆ.

ಜಿಐಎಸ್ ಸಂಸ್ಥೆ‌ವೈಮಾನಿಕ ಸಮೀಕ್ಷೆಯ ಮೂಲಕ ಅರಣ್ಯ, ಕೃಷಿಭೂಮಿ, ರಸ್ತೆ, ಜನವಸತಿ ಪ್ರದೇಶ ಸೇರಿದಂತೆ ಅಂತರ್ಜಲಮಟ್ಟ, ಖನಿಜ ಸಂಪತ್ತು. ಭೂಗರ್ಭದ ರಚನೆಗಳ ಕುರಿತು ಅಧ್ಯಯನ ಕೈಗೊಳ್ಳುತ್ತಿದೆ ಎಂದು ಮೂಲಗಳು
ಮಾಹಿತಿ ನೀಡಿವೆ.

ದಾವಣಗೆರೆ: ಸರಗಳ್ಳತನ ಮಾಡುತ್ತಿದ್ದ 5 ಆರೋಪಿಗಳ ಬಂಧನ;‌ 22.12 ಲಕ್ಷ ಮೌಲ್ಯದ ಬಂಗಾರದ ಆಭರಣ,ಕಾರು, ಬೈಕ್ ವಶ

ಹಾವೇರಿ ಜಿಲ್ಲೆಯಲ್ಲಿ ನಡೆಯುತ್ತಿದ್ದ ವೈಮಾನಿಕ ಸಮೀಕ್ಷೆ ದಾವಣಗೆರೆ‌ ಜಿಲ್ಲೆ ಪ್ರವೇಶಿಸಿದಂತೆ ಕಾಣುತ್ತಿದೆ. ಇದರಿಂದ ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲಎಂದುಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *