Connect with us

Dvgsuddi Kannada | online news portal | Kannada news online

ದಾವಣಗೆರೆ: ಟೆಂಡರ್ ಮೂಲಕ ಭತ್ತ, ಮಕ್ಕೆಜೋಳ ಖರೀದಿಗೆ ಮನವಿ

davangere apmc 1

ದಾವಣಗೆರೆ

ದಾವಣಗೆರೆ: ಟೆಂಡರ್ ಮೂಲಕ ಭತ್ತ, ಮಕ್ಕೆಜೋಳ ಖರೀದಿಗೆ ಮನವಿ

ದಾವಣಗೆರೆ: ಎಪಿಎಂಸಿ ಮೂಲಕ ಭತ್ತ, ಮೆಕ್ಕೆಜೋಳ ಖರೀದಿ ಮಾಡಬೇಕು, ಬೆಂಬಲ ಬೆಲೆಯಡಿ ಖರೀದಿ ಕೇಂದ್ರ ತೆರೆಯುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರೈತ ಒಕ್ಕೂಟ ನಿಯೋಗ ಎಪಿಎಂಸಿ ಮಾರುಕಟ್ಟೆಗೆ ಮನವಿ ಸಲ್ಲಿಸಿದೆ.

ಎಪಿಎಂಸಿ ಮಾರುಕಟ್ಟೆ ಸಮಿತಿ ಕಾರ್ಯದರ್ಶಿಗೆ ಒಕ್ಕೂಟದ ಮುಖಂಡರು ಮನವಿ ಸಲ್ಲಿಸಿದರು. ಜಿಲ್ಲಾದ್ಯಂತ ಮುಂಗಾರು ಹಂಗಾಮಿನಲ್ಲಿ ಉತ್ತಮ ಮಳೆಯಾಗಿ, ಉತ್ತಮ ಬೆಳೆ ಬಂದಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ, ಎಪಿಎಂಸಿ ಮಾರುಕಟ್ಟೆ ಸಮಿತಿ ರೈತರಿಗೆ ಸ್ಪಂದಿಸಬೇಕು. ಭತ್ತ, ಮೆಕ್ಕೆಜೋಳ ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಬೇಕು ಎಂದು ಒತ್ತಾಯಿಸಿದರು.

  • ಇತರೆ ಬೇಡಿಕೆಗಳು
  • ಎಪಿಎಂಸಿಯಲ್ಲಿ ವ್ಯಾಪಾರವಾದ ತಕ್ಷಣ ಲೆಕ್ಕ ಮಾಡಿ, ರೈತರಿಗೆ ಹಣ ಕೊಡುವ ವ್ಯವಸ್ಥೆಗೆ ಕ್ರಮ ಕೈಗೊಳ್ಳಬೇಕು
  • ದಲಾಲರು ದಲಾಲಿ ಪಡೆಯುವುದು, ತೂಕದಲ್ಲಿ ವಂಚನೆ, ಹಮಾಲರು ಸ್ಯಾಂಪಲ್‌, ತಳಗಾಳು ಪಡೆಯೋದು ಸ್ಥಗಿತಗೊಳ್ಳಬೇಕು
  • ಎಪಿಎಂಸಿ ಪ್ರಾಂಗಣದ ಮಂಡಿಗಳಲ್ಲಿ ರೈತರು ಕುಳಿತುಕೊಳ್ಳಲು, ಸೂಕ್ತ ವ್ಯವಸ್ಥೆ ಮಾಡಬೇಕು
  • ಶುದ್ಧ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಬೇಕು. ಸೂಕ್ತ ಭದ್ರತೆ ಒದಗಿಸಬೇಕು

ಒಕ್ಕೂಟದ ಮುಖಂಡ, ಎಪಿಎಂಸಿ ಮಾಜಿ ಅಧ್ಯಕ್ಷ ಬಿ.ಎಂ.ಸತೀಶ ಕೊಳೇನಹಳ್ಳಿ ಮಾತನಾಡಿ, ಜಿಲ್ಲೆಯಲ್ಲಿ 1.5 ಲಕ್ಷ ಎಕರೆ ಪ್ರದೇಶದಲ್ಲಿ ಭತ್ತ ಬೆಳೆಯಲಾಗಿದೆ. ಬೆಳೆ ಚೆನ್ನಾಗಿದ್ದು ಉತ್ತಮ ಇಳುವರಿ ನಿರೀಕ್ಷಿಸಿದೆ. ಆದರೆ, ಭತ್ತದ ದರ ಕುಸಿತದಿಂದಾಗಿ ರೈತರ ಪಾಲಿಗೆ ಕೈಗೆ ಬಂದ ತುತ್ತು ಬಾಯಿಗೆ ಬಾರದಂಥ ಸ್ಥಿತಿ ಇದೆ. ನ.15ರಂದು ಜಿಲ್ಲಾಧಿಕಾರಿ ಅವರನ್ನು ಭೇಟಿಯಾಗಿ, ಜಿಲ್ಲೆಯಲ್ಲಿ ಬತ್ತ ಖರೀದಿ ಕೇಂದ್ರ ಸ್ಥಾಪಿಸುವಂತೆ ಮನವಿ ಮಾಡಿದ್ದೇವೆ ಎಂದರು.

ಟೆಂಡರ್‌ ಪದ್ಧತಿ ಮೂಲಕ ಖರೀದಿಸಿ: ಮೆಕ್ಕೇಜೋಳದ ರೀತಿಯೇ ಭತ್ತ ಖರೀದಿ ವಹಿವಾಟನ್ನು ಟೆಂಡರ್ ಪದ್ಧತಿ ಮೂಲಕ ಖರೀದಿ ಮಾಡಬೇಕು. ಎಪಿಎಂಸಿ ಪ್ರತಿ ಮಂಡಿಯಲ್ಲಿ ರಾಶಿಗೆ ಟೆಂಡರ್ ಮೂಲಕ ಖರೀದಿ ವಹಿವಾಟು ಮಾಡುವ ನಿಯಮವಿದೆ. ಇಲ್ಲಿ ನಿಯಮ ಗಾಳಿಗೆ ತೂರಿ, ಮನಬಂದಂತೆ ಖರೀದಿ ನಡೆಸಲಾಗಿದೆ. ಖರೀದಿದಾರರು, ವ್ಯಾಪಾರಸ್ಥರು ಒಳಸಂಚು ನಡೆಸಿ ಭತ್ತದ ಬೆಲೆ ನಿಯಂತ್ರಿಸುತ್ತಿದ್ದಾರೆ. ಹೀಗಾಗಿ ಟೆಂಡರ್ ಪದ್ಧತಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ಮನವಿ ಸ್ವೀಕರಿಸಿದ ಎಪಿಎಂಸಿ ಕಾರ್ಯದರ್ಶಿ ಎಚ್.ಸಿ.ಎಂ. ರಾಣಿ ಅವರು, ನ.22ರಿಂದಲೇ ಭತ್ತ ಖರೀದಿ ವಹಿವಾಟನ್ನು ಟೆಂಡರ್ ಪದ್ಧತಿ ಮೂಲಕ ಮಾಡಲಾಗುವುದು. ರೈತರಿಗೆ ಸೂಕ್ತ ಭದ್ರತೆ, ಮೂಲಸೌಕರ್ಯ ಕಲ್ಪಿಸಲಾಗುವುದು. ದಲಾಲಿ ಪಡೆಯುವುದು, ತೂಕದಲ್ಲಿ ವಂಚನೆ, ಹಮಾಲರು ಸ್ಯಾಂಪಲ್‌, ತಳಗಾಳು ಪಡೆಯುವುದೂ ಸೇರಿದಂತೆ ರೈತರ ಶೋಷಣೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವುದಾಗಿ ಭರವಸೆ ನೀಡಿದರು.

ರೈತ ಮುಖಂಡರಾದ ಬೆಳವನೂರು ಬಿ.ನಾಗೇಶ್ವರ ರಾವ್, ಲೋಕಿಕೆರೆ ನಾಗರಾಜ, ಆಲೂರು ನಿಂಗರಾಜ, ಕರಿಲಕ್ಕೇನಳ್ಳಿ ಜಿ.ಬಿ.ಓಂಕಾರಗೌಡ, ಆರನೇ ಕಲ್ಲು ವಿಜಯಕುಮಾರ, ಶಿವನಹಳ್ಳಿ ರಮೇಶ, ಎಚ್.ಎನ್. ಶಿವಕುಮಾರ, ಶಿವರಾಜ ಪಾಟೀಲ್, ಎಚ್.ಎನ್. ಗುರುನಾಥ, ಆರುಂಡಿ ಪುನೀತ್, ಎನ್.ಎಚ್. ಹಾಲೇಶ, ಅನಿಲ ಕುಮಾರ ನಾಯ್ಕ, ರಮೇಶ ನಾಯ್ಕ, ಆನೆಕೊಂಡ ರೇವಣಸಿದ್ದಪ್ಪ, ಗುಮ್ಮನೂರು ಬಸವರಾಜು, ಚಿಕ್ಕಬೂದಿಹಾಳ ಭಗತ್‌ ಸಿಂಹ, ಅಣಜಿ ಗುಡ್ಡೇಶ, ಹೆಬ್ಬಾಳ್ ಮಹೇಂದ್ರ, ಕುಂದುವಾಡದ ಮಹೇಶಪ್ಪ, ಜಿಮ್ಮಿ ಹನುಮಂತಪ್ಪ, ಹೊಸಹಳ್ಳಿ ಶಿವಮೂರ್ತ, ಎಪಿಎಂಸಿ ಸಹಾಯಕ ನಿರ್ದೇಶಕ ಜೆ.ಪ್ರಭು ಇದ್ದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top