ದಾವಣಗೆರೆ: ಮಧ್ಯ ಕರ್ನಾಟಕ ದಾವಣಗೆರೆ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ಧಾರಣೆಯಲ್ಲಿ ಅಲ್ಪ ಪ್ರಮಾಣದಲ್ಲಿ ಏರಿಳಿತ ಕಾಣುತ್ತಿದೆ. ಇಂದಿನ ಬೆಲೆಯಲ್ಲಿ 300 ರೂಪಾಯಿಯಷ್ಟು ಇಳಿಕೆ ಕಂಡಿದೆ. ಜಿಲ್ಲೆಯ ಪ್ರಮುಖ ಮಾರುಕಟ್ಟೆಯಾದ ಚನ್ನಗಿರಿಯಲ್ಲಿ ಉತ್ತಮ ರಾಶಿ ಕ್ವಿಂಟಾಲ್ ಗೆ 46,499 ರೂ. ಗರಿಷ್ಠ ಬೆಲೆ ದಾಖಲಾಗಿದೆ. ನಿನ್ನೆ ಕ್ವಿಂಟಾಲ್ ಗೆ 46,499 ರೂ. ದಾಖಲಾಗಿತ್ತು. ಇಂದು 300 ರೂ.ಯಷ್ಟು ಅಲ್ಪ ಪ್ರಮಾಣದಲ್ಲಿ ಇಳಿಕೆ ಕಂಡಿದೆ.
ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ, ದಾವಣಗೆರೆ, ಜಗಳೂರು, ಹರಿಹರ, ನ್ಯಾಮತಿ, ಮಾಯಕೊಂಡ ಸೇರಿದಂತೆ ಎಲ್ಲ ಕಡೆ ಅಧಿಕ ಪ್ರಮಾಣದಲ್ಲಿ ಅಡಿಕೆ ಬೆಳೆಯಲಾಗುತ್ತಿದೆ.ಕಳೆದ ಡಿಸೆಂಬರ್ ತಿಂಗಳಲ್ಲಿ ಅಡಿಕೆ ಬೆಲೆ 39 ಸಾವಿರಕ್ಕೆ ಕುಸಿದು ಆತಂಕ ಉಂಟು ಮಾಡಿತ್ತು. ಇದೀಗ ಸ್ವಲ್ಪ ಚೇತರಿಕೆ ಕಂಡಿದ್ದರೂ ನೂರು, ಇನ್ನೂರು ರೂಪಾಯಿ ಏರಿಳಿತ ಕಾಣುತ್ತಿದೆ. ಜನವರಿಯಲ್ಲಿ ಏರಿಕೆ ಕಾಣುತ್ತಿರುವುದು ರೈತರ ಮೊಗದಲ್ಲಿ ಸಂತಸ ಮೂಡುವಂತೆ ಮಾಡಿದೆ. ಮುಂಬರುವ ದಿನಗಳಲ್ಲಿ ಅಡಿಕೆ ಧಾರಣೆ ಮತ್ತಷ್ಟು ಚೇತರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.



