Connect with us

Dvgsuddi Kannada | online news portal | Kannada news online

ಅಡಿಕೆ ದರದಲ್ಲಿ ಕುಸಿತ: ಎರಡೇ ದಿನಕ್ಕೆ 800 ರೂ. ಇಳಿಕೆ; ದಾವಣಗೆರೆಯಲ್ಲಿ ಇಂದಿನ ರಾಶಿ ಅಡಿಕೆ ಬೆಲೆ ಎಷ್ಟಿದೆ..?

IMG 20231230 090141

ದಾವಣಗೆರೆ

ಅಡಿಕೆ ದರದಲ್ಲಿ ಕುಸಿತ: ಎರಡೇ ದಿನಕ್ಕೆ 800 ರೂ. ಇಳಿಕೆ; ದಾವಣಗೆರೆಯಲ್ಲಿ ಇಂದಿನ ರಾಶಿ ಅಡಿಕೆ ಬೆಲೆ ಎಷ್ಟಿದೆ..?

ದಾವಣಗೆರೆ: ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ದರಕ್ಕೆ (arecanut rate) ಏಪ್ರಿಲ್ ತಿಂಗಳಲ್ಲಿ ಬಂಪರ್ ಬೆಲೆ ಬಂದಿತ್ತು.‌ ಕಳೆದ 25 ದಿನದಿಂದ ಸತತ ಏರಿಕೆ ಕಾಣುತ್ತಿದ್ದ ಬೆಲೆಯಲ್ಲೀಗ ಕುಸಿತ ಕಂಡಿದೆ. ಎರಡೇ ದಿನದಲ್ಲಿ 800 ರೂ. ಇಳಿಕೆಯಾಗಿದೆ. ಸಾಕಷ್ಟು ಏರಿಳಿತ ಬಳಿಕ ಈಗ 54 ಸಾವಿರ ಗಡಿಯತ್ತ ಮುನ್ನುಗ್ಗುತ್ತಿತ್ತು. ಇಂದು (ಏ.28) ರಾಶಿ ಅಡಿಕೆ ಗರಿಷ್ಠ‌ ಬೆಲೆ ಕ್ವಿಂಟಲ್ ಗೆ 52,900ರೂ.ಗಳಿದ್ದು, ಕನಿಷ್ಠ ಬೆಲೆ 49,099 ರೂ.ಗಳಾಗಿದೆ. ಎರಡು ದಿನದ ಹಿಂದೆ ಗರಿಷ್ಠ ಬೆಲೆ 53,769 ರೂಪಾಯಿ ಇತ್ತು.

ಲೋಕಸಭಾ ಚುನಾವಣೆ ಘೋಷಣೆಯಾದ ನಂತರ ಅಡಿಕೆ ಅಡಿಕೆ ದರ ಸತತ ಏರಿಕೆಯಾಗಿತ್ತು. ಆಮದು ಸಂಪೂರ್ಣ ಸ್ಥಗಿತಗೊಂಡಿರುವುದು, ಚೆಕ್ ಪೋಸ್ಟ್ ಮೂಲಕ 50 ಸಾವಿರಕ್ಕಿಂತ ಹೆಚ್ಚಿನ ಹಣ ತೆಗೆದುಕೊಂಡು ಹೋಗುವಂತಿಲ್ಲ ಎಂಬ ನಿರ್ಬಂಧದಿಂದ ಚಿಲ್ಲರೆ ಮಾರಾಟ ಸ್ಥಗಿತವಾಗಿತ್ತು. ಇದಲ್ಲದೆ, ಚಳಿಗಾಲದಲ್ಲಿ ಪಾನ್ ಮಸಾಲ ಹಾಳಾಗುತ್ತದೆ ಎಂಬ ಕಾರಣಕ್ಕೆ ಪಾನ್ ಮಸಾಲ ಕಂಪನಿಗಳು ಉತ್ಪಾದನೆ ನಿಲ್ಲಿಸಿದ್ದು, ಬೇಸಿಗೆಯಲ್ಲಿ ಉತ್ಪಾದನೆ ಹೆಚ್ವಿಸಿದ್ದರಿಂದ ಅಡಿಕೆ ದರ ಏರಿಕೆಗೆ ಪ್ರಮುಖ‌ ಕಾರಣವಾಗಿತ್ತು.

ಕಳೆದ ವರ್ಷ (2023) ಜುಲೈ ತಿಂಗಳಲ್ಲಿ ಗರಿಷ್ಠ ಬೆಲೆ 57 ಸಾವಿರ ತಲುಪಿತ್ತು. ಹೀಗಾಗಿ ಇನ್ನೂ ಸ್ವಲ್ಪ‌ ದಿನ ಇಟ್ಟು ಮಾರಾಟ ಮಾಡುವವರಿಗೆ‌ ಮುಂದೆ ಒಳ್ಳೆಯ ರೇಟ್ ಸಿಗುವ ಸಾಧ್ಯತೆ ಇದೆ. ಏಪ್ರಿಲ್ ತಿಂಗಳಲ್ಲಿ ಅಸಲಿ ಬೇಸಿಗೆ ಈಗ ಶುರುವಾಗಿದೆ. ಬೋರ್ ವೆಲ್ ಗಳಲ್ಲಿ ಅಂತರ್ಜಲ ಮಟ್ಟ ತೀವ್ರ ಕುಸಿತವಾಗಿದೆ. ವಾತಾವರಣದಲ್ಲಿ ಬಿಸಿಗಾಳಿ ಹೆಚ್ಚಿದ್ದು, ಅಡಿಕೆ ಬೆಳೆ ಒಣಗುತ್ತಿವೆ. ಹೇಗಾದ್ರೂ ಮಾಡಿ ಏಪ್ರಿಲ್, ಮೇ ತಿಂಗಳಲ್ಲಿ ಅಡಿಕೆ ತೋಟ ಬದುಕಿಸಿಕೊಂಡರೆ ಸಾಕು ಎಂದು ರೈತರು ಹರಸಾಹಸ ಪಡುತ್ತಿದ್ದಾರೆ. ಬಿಸಿಲಿನ ತಾಪಮಾನಕ್ಕೆ ಹರಳು ಉದುರುತ್ತಿವೆ. ಬೋರ್ ವೆಲ್ ಗಳು ಬತ್ತಿದ್ದು ರೈತರು ಟ್ಯಾಂಕರ್ ಮೊರೆ ಹೋಗಿದ್ದಾರೆ.

2024 ಜನವರಿ 15ರಂದು ಗರಿಷ್ಠ ದರ 50,500 ರೂಪಾಯಿ ಗಡಿ ತಲುಪಿತ್ತು. ಫೆಬ್ರವರಿ ತಿಂಗಳಲ್ಲಿ‌ ಏಕಾಏಕಿ 48 ಸಾವಿರಕ್ಕೆ ಕುಸಿದಿತ್ತು. ಮಾರ್ಚ್ ತಿಂಗಳಳಲ್ಲಿ ಸ್ವಲ್ಪ ಚೇತರಿಕೆ ಕಂಡು 50 ಸಾವಿರ ತಲುಪಿತ್ತು. ಈಗ ಏಪ್ರಿಲ್ ನಲ್ಲಿ ಗರಿಷ್ಠ 54 ಗಡಿ ಮುಟ್ಟಿ, ಪುನಃ 32 ಸಾವಿರ ಒಳಗೆ ಬಮಧಿದೆ.

ಜಿಲ್ಲೆಯ ಪ್ರಮುಖ ಮಾರುಕಟ್ಟೆಯಾದ ಚನ್ನಗಿರಿ ವಹಿವಾಟಿನಲ್ಲಿ ಏಪ್ರಿಲ್ 28ರಂದು ಪ್ರತಿ ಕ್ವಿಂಟಲ್ ಉತ್ತಮ ರಾಶಿ ಅಡಿಕೆ ಕನಿಷ್ಠ ಬೆಲೆ 49,099 ರೂ., ಗರಿಷ್ಠ ಬೆಲೆ 52,900 ಹಾಗೂ ಸರಾಸರಿ ಬೆಲೆ 51,648ರೂ.ಗೆ ಮಾರಾಟವಾಗಿದೆ. ಬೆಟ್ಟೆ ಅಡಿಕೆ ಗರಿಷ್ಠ 35,021 ರೂ. ಇದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top