Connect with us

Dvgsuddi Kannada | online news portal | Kannada news online

ದಾವಣಗೆರೆ: ಅಡಿಕೆ ದರ ಸ್ಥಿರ; ಜು.15ರ ಅಡಿಕೆ ಧಾರಣೆಯ ಕನಿಷ್ಠ, ಗರಿಷ್ಠ ಬೆಲೆ ಎಷ್ಟಿದೆ..?

ದಾವಣಗೆರೆ

ದಾವಣಗೆರೆ: ಅಡಿಕೆ ದರ ಸ್ಥಿರ; ಜು.15ರ ಅಡಿಕೆ ಧಾರಣೆಯ ಕನಿಷ್ಠ, ಗರಿಷ್ಠ ಬೆಲೆ ಎಷ್ಟಿದೆ..?

ದಾವಣಗೆರೆ: ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ದರ (arecanut rate) ಸ್ಥಿರವಾಗಿದೆ. ಇಂದು (ಜು.15) ರಾಶಿ ಅಡಿಕೆ ಧಾರಣೆಯಲ್ಲಿ ಗರಿಷ್ಠ‌ ಬೆಲೆ ಕ್ವಿಂಟಲ್ ಗೆ 51,400 ರೂ.ಗಳಿದ್ದು, ಕನಿಷ್ಠ ಬೆಲೆ 44,269ರೂ.ಗಳಾಗಿದೆ. ಹಿಂದಿನ ದಿನದ ಮಾರುಕಟ್ಟೆಗೆ ಹೋಲಿಸಿದ್ರೆ ಯಾವುದೇ ಏರಿಕೆಯಾಗದೇ ಸ್ಥಿರವಾಗಿದೆ. ಜೂನ್ ಮೊದಲ ವಾರ 54 ಸಾವಿರ ಗಡಿ ದಾಟಿದ್ದ ಬೆಲೆ, ಜೂ.20ರಿಂದ ದಿನದಿಂದ ದಿನಕ್ಕೆ ಕುಸಿಯುತ್ತಲೇ ಬಂದಿತ್ತು.

ಕಳೆದ ವರ್ಷ (2023) ಜುಲೈ ತಿಂಗಳಲ್ಲಿ ಗರಿಷ್ಠ ಬೆಲೆ 57 ಸಾವಿರ ತಲುಪಿತ್ತು. ಈ ವರ್ಷ ಮೇ ತಿಂಗಳಲ್ಲಿ ಗರಿಷ್ಠ ಈಗ 55 ಸಾವಿರ ತಲುಪಿತ್ತು. ಹೀಗಾಗಿ ಇನ್ಮುಂದೆ ಒಳ್ಳೆ ರೇಟ್ ಸಿಗುವ ಸಾಧ್ಯತೆ ಕಡಿಮೆ. ಯಾಕೆಂದರೆ ಮಾರುಕಟ್ಟೆಗೆ ಹೊಸ ಅಡಿಕೆ ಬರುವುದು ಶುರುವಾಗುತ್ತದೆ. ಹೀಗಾಗಿ ಇದೇ ಒಳ್ಳೆ ರೇಟ್ ಎಂದುಕೊಂಡು ಮಾರಾಟ ಮಾಡುವುದು ಉತ್ತಮ. ಜಿಲ್ಲೆಯಲ್ಲಿ ಮುಂಗಾರು ಮಳೆ ಉತ್ತಮವಾಗಿ ಆಗುತ್ತಿದೆ. ಇನ್ನೂ ಎರಡ್ಮೂರು ದಿನ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಬಿಸಿ ಗಾಳಿಯ ಅಲೆ ತಗ್ಗಿದ್ದು, ತಂಪಾದ ವಾತಾವರಣ ನಿರ್ಮಾಣವಾಗಿದೆ. ಕಳೆದ ಬಾರಿಯ ತೀವ್ರ ಬರದಿಂದ ಬೋರ್ ವೆಲ್ ಗಳಲ್ಲಿ ಅಂತರ್ಜಲ ಮಟ್ಟ ತೀವ್ರ ಕುಸಿದಿತ್ತು. ಇದೀಗ ಸ್ವಲ್ಪ ಚೇತರಿಕೆ ಕಾಣುತ್ತಿವೆ. ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

2024 ಜನವರಿ 15ರಂದು ರಾಶಿ ಅಡಿಕೆ ಗರಿಷ್ಠ ದರ 50,500 ರೂಪಾಯಿ ಗಡಿ ತಲುಪಿತ್ತು. ಫೆಬ್ರವರಿ ತಿಂಗಳಲ್ಲಿ‌ ಏಕಾಏಕಿ 48 ಸಾವಿರಕ್ಕೆ ಕುಸಿದಿತ್ತು. ಮಾರ್ಚ್ ತಿಂಗಳಲ್ಲಿ ಸ್ವಲ್ಪ ಚೇತರಿಕೆ ಕಂಡು 50 ಸಾವಿರ ತಲುಪಿತ್ತು. ಏಪ್ರಿಲ್ ನಲ್ಲಿ ಗರಿಷ್ಠ 54 ಸಾವಿರ ಗಡಿ ತಲುಪಿತ್ತು. ಮೇ ತಿಂಗಳಲ್ಲಿ ಗರಿಷ್ಠ ಈಗ 55 ಸಾವಿರ ತಲುಪಿ, ಕುಸಿತ ಕಂಡಿತ್ತು. ಜೂನ್ ತಿಂಗಳ ಎರಡನೇ ವಾರದಿಂದ ಮತ್ತೆ ಕುಸಿತ ಕಂಡು, ಜುಲೈನಲ್ಲಿ 51 ಸಾವಿರಕ್ಕೆ ಬಂದು ನಿಂತಿದೆ.

ಜಿಲ್ಲೆಯ ಪ್ರಮುಖ ಮಾರುಕಟ್ಟೆಯಾದ ಚನ್ನಗಿರಿ ವಹಿವಾಟಿನಲ್ಲಿ ಜು.15ರಂದು ಪ್ರತಿ ಕ್ವಿಂಟಾಲ್ ಉತ್ತಮ ರಾಶಿ ಅಡಿಕೆ ಕನಿಷ್ಠ ಬೆಲೆ 44,269 ರೂ., ಗರಿಷ್ಠ ಬೆಲೆ 51,400 ಹಾಗೂ ಸರಾಸರಿ ಬೆಲೆ 49,390ರೂ.ಗೆ ಮಾರಾಟವಾಗಿದೆ.

 

 

 

 

 

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top