Connect with us

Dvgsuddi Kannada | online news portal | Kannada news online

ದಾವಣಗೆರೆ: ರಾಶಿ ಅಡಿಕೆ ದರದಲ್ಲಿ ಮತ್ತೆ ಚೇತರಿಕೆ; ಜು.26ರ ಅಡಿಕೆ ಧಾರಣೆ ವಿವರ ಇಲ್ಲಿದೆ..!!

ದಾವಣಗೆರೆ

ದಾವಣಗೆರೆ: ರಾಶಿ ಅಡಿಕೆ ದರದಲ್ಲಿ ಮತ್ತೆ ಚೇತರಿಕೆ; ಜು.26ರ ಅಡಿಕೆ ಧಾರಣೆ ವಿವರ ಇಲ್ಲಿದೆ..!!

ದಾವಣಗೆರೆ: ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ದರ (arecanut rate) ಮತ್ತೆ ಚೇತರಿಕೆ ಹಾದಿಗೆ ಮರಳಿದೆ. ಇಂದು (ಜು.26) ರಾಶಿ ಅಡಿಕೆ ಧಾರಣೆಯಲ್ಲಿ ಗರಿಷ್ಠ‌ ಬೆಲೆ ಕ್ವಿಂಟಲ್ ಗೆ 51,900 ರೂ.ಗಳಿದ್ದು, ಕನಿಷ್ಠ ಬೆಲೆ 42,100 ರೂ.ಗಳಾಗಿದೆ. ಹಿಂದಿನ ದಿನದ ಮಾರುಕಟ್ಟೆಗೆ ಹೋಲಿಸಿದ್ರೆ ಬೆಲೆಯಲ್ಲಿ 300 ರೂ. ಏರಿಕೆಯಾಗಿದೆ. ಜೂನ್ ಮೊದಲ ವಾರ 54 ಸಾವಿರ ಗಡಿ ದಾಟಿದ್ದ ಬೆಲೆ, ಜೂ.20ರಿಂದ ದಿನದಿಂದ ದಿನಕ್ಕೆ ಕುಸಿಯುತ್ತಲೇ ಬಂದಿತ್ತು.

ಕಳೆದ ವರ್ಷ (2023) ಜುಲೈ ತಿಂಗಳಲ್ಲಿ ಗರಿಷ್ಠ ಬೆಲೆ 57 ಸಾವಿರ ತಲುಪಿತ್ತು. ಈ ವರ್ಷ ಮೇ ತಿಂಗಳಲ್ಲಿ ಗರಿಷ್ಠ ಈಗ 55 ಸಾವಿರ ತಲುಪಿತ್ತು. ಹೀಗಾಗಿ ಇನ್ಮುಂದೆ ಒಳ್ಳೆ ರೇಟ್ ಸಿಗುವ ಸಾಧ್ಯತೆ ಕಡಿಮೆ. ಯಾಕೆಂದರೆ ಮಾರುಕಟ್ಟೆಗೆ ಹೊಸ ಅಡಿಕೆ ಬರುವುದು ಶುರುವಾಗುತ್ತದೆ. ಹೀಗಾಗಿ ಇದೇ ಒಳ್ಳೆ ರೇಟ್ ಎಂದುಕೊಂಡು ಮಾರಾಟ ಮಾಡುವುದು ಉತ್ತಮ. ಜಿಲ್ಲೆಯಲ್ಲಿ ಮುಂಗಾರು ಮಳೆ ಉತ್ತಮವಾಗಿ ಆಗುತ್ತಿದೆ. ಇನ್ನೂ ಎರಡ್ಮೂರು ದಿನ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಕಳೆದ ಬಾರಿಯ ತೀವ್ರ ಬರದಿಂದ ಬೋರ್ ವೆಲ್ ಗಳಲ್ಲಿ ಅಂತರ್ಜಲ ಮಟ್ಟ ತೀವ್ರ ಕುಸಿದಿತ್ತು. ಈಗ ಜೋರು ಮಳೆಯಿಂದ ಬೋರ್ ವೆಲ್ ಗಳು ಚೇತರಿಕೆ ಕಾಣುತ್ತಿವೆ. ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜಿಲ್ಲೆಯ ರೈತರ ಜೀವನಾಡಿಯಾದ ಭದ್ರಾ ಜಲಾಶಯ ಕಳೆದ ಒಂದು ವಾರದಿಂದ ಅಧಿಕ ಪ್ರಮಾಣದ ನೀರು ಹರಿದು ಬರುತ್ತಿದೆ. ಸದ್ಯ ಇವತ್ತು (ಜು.26) 174.3 ಅಡಿ‌ ನೀರು ಸಂಗ್ರಹವಾಗಿದೆ. ಎರಡ್ಮೂರು ದಿನದಲ್ಲಿ ನಾಲೆಗೆ ನೀರು ಬಿಡುವ ಸಾಧ್ಯತೆ ಇದೆ. ಈ ಮೂಲಕ ಬೇಸಿಗೆಯಲ್ಲಿ  ಅಡಿಕೆ ಬೆಳೆಗೆ ನೀರು ಸಂಗ್ರಹವಾಗಿದೆ‌.

2024 ಜನವರಿ 15ರಂದು ರಾಶಿ ಅಡಿಕೆ ಗರಿಷ್ಠ ದರ 50,500 ರೂಪಾಯಿ ಗಡಿ ತಲುಪಿತ್ತು. ಫೆಬ್ರವರಿ ತಿಂಗಳಲ್ಲಿ‌ ಏಕಾಏಕಿ 48 ಸಾವಿರಕ್ಕೆ ಕುಸಿದಿತ್ತು. ಮಾರ್ಚ್ ತಿಂಗಳಲ್ಲಿ ಸ್ವಲ್ಪ ಚೇತರಿಕೆ ಕಂಡು 50 ಸಾವಿರ ತಲುಪಿತ್ತು. ಏಪ್ರಿಲ್ ನಲ್ಲಿ ಗರಿಷ್ಠ 54 ಸಾವಿರ ಗಡಿ ತಲುಪಿತ್ತು. ಮೇ ತಿಂಗಳಲ್ಲಿ ಗರಿಷ್ಠ ಈಗ 55 ಸಾವಿರ ತಲುಪಿ, ಕುಸಿತ ಕಂಡಿತ್ತು. ಜೂನ್ ತಿಂಗಳ ಎರಡನೇ ವಾರದಿಂದ ಮತ್ತೆ ಕುಸಿತ ಕಂಡು, ಜುಲೈನಲ್ಲಿ 51 ಸಾವಿರಕ್ಕೆ ಬಂದು ನಿಂತಿದೆ.

ಜಿಲ್ಲೆಯ ಪ್ರಮುಖ ಮಾರುಕಟ್ಟೆಯಾದ ಚನ್ನಗಿರಿ ವಹಿವಾಟಿನಲ್ಲಿ ಜು.26ರಂದು ಪ್ರತಿ ಕ್ವಿಂಟಾಲ್ ಉತ್ತಮ ರಾಶಿ ಅಡಿಕೆ ಕನಿಷ್ಠ ಬೆಲೆ 42,100 ರೂ., ಗರಿಷ್ಠ ಬೆಲೆ 51,9000 ಹಾಗೂ ಸರಾಸರಿ ಬೆಲೆ 49,116 ರೂ.ಗೆ ಮಾರಾಟವಾಗಿದೆ.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top