ದಾವಣಗೆರೆ: ಆ.16ರ ರಾಶಿ ಅಡಿಕೆ ಧಾರಣೆ; ಹೊಸ ಅಡಿಕೆ ದರ 43 ಸಾವಿರಕ್ಕೆ ಕುಸಿತ; ಹಳೆ ಅಡಿಕೆ ದರ ಎಷ್ಟಿದೆ…?

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ದಾವಣಗೆರೆ: ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ದರ (arecanut rate) ತೀವ್ರ ಕುಸಿತ ಕಂಡಿದೆ.‌ ಇಂದು (ಆ.16) ರಾಶಿ ಅಡಿಕೆ ಧಾರಣೆಯಲ್ಲಿ ಗರಿಷ್ಠ‌ ಬೆಲೆ ಕ್ವಿಂಟಲ್ ಗೆ ( ಹಳೆದು) 49,180 ರೂ.ಗೆ ಕುಸಿದಿದೆ.‌ ಕನಿಷ್ಠ ಬೆಲೆ 37,299 ರೂ.ಗಳಾಗಿದೆ. ಇನ್ನೂ ಹೊಸ ಅಡಿಕೆ ದರ ಮತ್ತಷ್ಟು ಇಳಿಕೆ ಕಂಡಿದೆ. ಗರಿಷ್ಠ 43,025, ಕನಿಷ್ಠ 36,299 ಇದೆ.

ಜೂನ್ ಮೊದಲ ವಾರ 54 ಸಾವಿರ ಗಡಿ ದಾಟಿದ್ದ ಬೆಲೆ, ಜೂ.20ರಿಂದ ದಿನದಿಂದ ದಿನಕ್ಕೆ ಕುಸಿಯುತ್ತಲೇ ಬಂದಿತ್ತು. ಈ ಬಾರಿಯ ಉತ್ತಮ ಮುಂಗಾರು ಕೃಪೆಯಿಂದ ಜಿಲ್ಲೆಯ ರೈತರ ಜೀವನಾಡಿ ಭದ್ರಾ ಜಲಾಶಯ ತುಂಬಿದ್ದು, ಅಡಿಕೆ ಬೆಳೆಗೆ ಬೇಸಿಗೆಯಲ್ಲಿ ನೀರು ಸಿಗುವ ಖಾತ್ರಿಯಾಗಿದೆ. ಕಳೆದ ವರ್ಷ (2023) ಜುಲೈ ತಿಂಗಳಲ್ಲಿ ಗರಿಷ್ಠ ಬೆಲೆ 57 ಸಾವಿರ ತಲುಪಿತ್ತು. ಈ ವರ್ಷ ಮೇ ತಿಂಗಳಲ್ಲಿ ಗರಿಷ್ಠ ಈಗ 55 ಸಾವಿರ ತಲುಪಿತ್ತು. ಹೀಗಾಗಿ ಇನ್ಮುಂದೆ ಒಳ್ಳೆ ರೇಟ್ ಸಿಗುವ ಸಾಧ್ಯತೆ ಕಡಿಮೆ. ಯಾಕೆಂದರೆ ಮಾರುಕಟ್ಟೆಗೆ ಹೊಸ ಅಡಿಕೆ ಬಂದಿದೆ. ಹೀಗಾಗಿ ಇದೇ ಒಳ್ಳೆ ರೇಟ್ ಎಂದುಕೊಂಡು ಮಾರಾಟ ಮಾಡುವುದು ಉತ್ತಮ. ಜಿಲ್ಲೆಯಲ್ಲಿ ಈ ವರ್ಷ ಮುಂಗಾರು ಮಳೆ ಉತ್ತಮವಾಗಿದೆ.

ಕಳೆದ ಬಾರಿಯ ತೀವ್ರ ಬರದಿಂದ ಬೋರ್ ವೆಲ್ ಗಳಲ್ಲಿ ಅಂತರ್ಜಲ ಮಟ್ಟ ತೀವ್ರ ಕುಸಿದಿತ್ತು. ಈಗ ಜೋರು ಮಳೆಯಿಂದ ಬೋರ್ ವೆಲ್ ಗಳು ಚೇತರಿಕೆ ಕಾಣುತ್ತಿವೆ. ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

2024 ಜನವರಿ 15ರಂದು ರಾಶಿ ಅಡಿಕೆ ಗರಿಷ್ಠ ದರ 50,500 ರೂಪಾಯಿ ಗಡಿ ತಲುಪಿತ್ತು. ಫೆಬ್ರವರಿ ತಿಂಗಳಲ್ಲಿ‌ ಏಕಾಏಕಿ 48 ಸಾವಿರಕ್ಕೆ ಕುಸಿದಿತ್ತು. ಮಾರ್ಚ್ ತಿಂಗಳಲ್ಲಿ ಸ್ವಲ್ಪ ಚೇತರಿಕೆ ಕಂಡು 50 ಸಾವಿರ ತಲುಪಿತ್ತು. ಏಪ್ರಿಲ್ ನಲ್ಲಿ ಗರಿಷ್ಠ 54 ಸಾವಿರ ಗಡಿ ತಲುಪಿತ್ತು. ಮೇ ತಿಂಗಳಲ್ಲಿ ಗರಿಷ್ಠ ಈಗ 55 ಸಾವಿರ ತಲುಪಿ, ಕುಸಿತ ಕಂಡಿತ್ತು. ಜೂನ್ ತಿಂಗಳ ಎರಡನೇ ವಾರದಿಂದ ಮತ್ತೆ ಕುಸಿತ ಕಂಡು, ಜುಲೈನಲ್ಲಿ 51 ಸಾವಿರ ಇತ್ತು. ಆಗಸ್ಟ್ ನಲ್ಲಿ 43 ಸಾವಿರಕ್ಕೆ ಕುದಿಸಿದೆ.

ಜಿಲ್ಲೆಯ ಪ್ರಮುಖ ಮಾರುಕಟ್ಟೆಯಾದ ಚನ್ನಗಿರಿ ವಹಿವಾಟಿನಲ್ಲಿ ಆ.16ರಂದು ಪ್ರತಿ ಕ್ವಿಂಟಾಲ್ ಉತ್ತಮ ರಾಶಿ ಅಡಿಕೆ ಕನಿಷ್ಠ ಬೆಲೆ (ಹೊಸದು) 37,299 ರೂ., ಗರಿಷ್ಠ ಬೆಲೆ 49,180 ಹಾಗೂ ಸರಾಸರಿ ಬೆಲೆ 45,519ರೂ.ಗೆ ಮಾರಾಟವಾಗಿದೆ. ಹೊಸ ಅಡಿಕೆ ಗರಿಷ್ಠ 43,025 ಕನಿಷ್ಠ, 36,299 ಹಾಗೂ ಸರಾಸರಿ ಬೆಲೆ 41,074 ರೂ ಇದೆ.

 

 

 

 

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *