Connect with us

Dvgsuddi Kannada | online news portal | Kannada news online

ದಾವಣಗೆರೆ: ಮತ್ತಷ್ಟು ಏರಿಕೆಯಾದ ಅಡಿಕೆ ದರ; ನ.20ರ ಕನಿಷ್ಠ, ಗರಿಷ್ಠ ಬೆಲೆ ಎಷ್ಟು ..?

arecanut

ದಾವಣಗೆರೆ

ದಾವಣಗೆರೆ: ಮತ್ತಷ್ಟು ಏರಿಕೆಯಾದ ಅಡಿಕೆ ದರ; ನ.20ರ ಕನಿಷ್ಠ, ಗರಿಷ್ಠ ಬೆಲೆ ಎಷ್ಟು ..?

ದಾವಣಗೆರೆ: ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ದರಲ್ಲಿ (arecanut rate) ಮತ್ತಷ್ಟು ಚೇತರಿಕೆ ಕಂಡಿದೆ. ನಾಲ್ಕೈದು ದಿನದಿಂದ ಚೇತರಿಕೆ ಕಾಣುತ್ತಿದೆ. ಇಂದು (ನ.20) ಸಹ 150 ರೂ.ಯಷ್ಟು ಏರಿಕೆ ಕಂಡಿದೆ. ಈ ಮೂಲಕ ಸಾವಿರ ಗಡಿದಾಟಿದ್ದು, ರೈತರಿಗೆ ಖುಷಿ ನೀಡಿದೆ. ಜಿಲ್ಲೆಯ ಚನ್ನಗಿರಿ, ಹೊನ್ನಾಳಿ, ದಾವಣಗೆರೆ, ಹರಿಹರ, ಜಗಳೂರು ತಾಲ್ಲೂಕಿನಲ್ಲಿ ಅಡಕೆ ಮುಖ್ಯ ಬೆಳೆಯಾಗಿದೆ.

ನ.20 ಚನ್ನಗಿರಿ ರಾಶಿ ಅಡಿಕೆ ಧಾರಣೆ (ಪ್ರತಿ ಕ್ವಿಂಟಲ್ ದರ)

  • ಗರಿಷ್ಠ ಬೆಲೆ 50,555
  • ಕನಿಷ್ಠ ಬೆಲೆ 37,000
  • ಸರಾಸರಿ ಬೆಲೆ 49,152

ಪ್ರತಿ ವರ್ಷಕ್ಕೆ ಹೋಲಿಸಿದ್ರೆ ಈ ವರ್ಷ ಸ್ವಲ್ಪ ಇಳುವರಿ ಕಡಿಮೆ. ಏಕೆಂದ್ರೆ ಕಳೆದ ವರ್ಷದ ತೀವ್ರ ಮಳೆ ಕೊರತೆಯಿಂದ ಈ ವರ್ಷದ ಇಳುವರಿಯಲ್ಲಿ ಕುಸಿತ ಕಂಡಿದೆ. ಇಂದು (ನ.20)ಜಿಲ್ಲೆಯ ಪ್ರಮುಖ ಮಾರುಕಟ್ಟೆಯಾದ ಚನ್ನಗಿರಿ ವಹಿವಾಟಿನಲ್ಲಿ ರಾಶಿ ಅಡಿಕೆ ಗರಿಷ್ಠ‌ ಬೆಲೆ ಕ್ವಿಂಟಲ್ ಗೆ 50,555 ರೂ. ಇದ್ದು, ಕನಿಷ್ಠ ಬೆಲೆ 37,000 ರೂ., ಸರಾಸರಿ ಬೆಲೆ 49,152. ರೂ.‌ಇದೆ. ಬೆಟ್ಟೆ ಅಡಿಕೆ ಗರಿಷ್ಠ 30,786 ರೂ. ದಾಖಲಾಗಿದೆ.

ಜೂನ್ ಮೊದಲ ವಾರ 54 ಸಾವಿರ ಗಡಿ ದಾಟಿದ್ದ ಬೆಲೆ, ಜೂ.20ರಿಂದ ದಿನದಿಂದ ದಿನಕ್ಕೆ ಕುಸಿಯುತ್ತ ಬಂದಿದ್ದು, ಸೆಪ್ಟೆಂಬರ್ ನಲ್ಲಿ ಹೊಸ ಅಡಿಕೆ 46 ಸಾವಿರ ಗಡಿ ತಲುಪಿತ್ತು. ಈಗ ಅಕ್ಟೋಬರ್ ಪ್ರಾರಂಭದಲ್ಲಿ ಚೇತರಿಕೆ ಕಂಡು 50 ಸಾವಿರ ಗಡಿ ಸಮೀಪ ಬಂದಿತ್ತು. ತಿಂಗಳ ಕೊನೆಯಲ್ಲಿ 51 ಸಾವಿರ ಗಡಿ ತಲುಪಿತ್ತು. ಆದರೆ, ಈಗ ನವೆಂಬರ್ ಮೊದಲ ವಾರ ಕುಸಿತ ಕಂಡು, ಮತ್ತೆ ಚೇತರಿಕೆ ಕಂಡಿದೆ.

ಕಳೆದ ವರ್ಷ (2023) ಜುಲೈ ತಿಂಗಳಲ್ಲಿ ಗರಿಷ್ಠ ಬೆಲೆ 57 ಸಾವಿರ ತಲುಪಿತ್ತು. ಈ ವರ್ಷ ಮೇ ತಿಂಗಳಲ್ಲಿ ಗರಿಷ್ಠ 55 ಸಾವಿರ ತಲುಪಿತ್ತು. ಈ ಬಾರಿಯ ಉತ್ತಮ ಮುಂಗಾರು ಕೃಪೆಯಿಂದ ಜಿಲ್ಲೆಯ ರೈತರ ಜೀವನಾಡಿ ಭದ್ರಾ ಜಲಾಶಯ ತುಂಬಿದ್ದು, ಅಡಿಕೆ ಬೆಳೆಗೆ ಬೇಸಿಗೆಯಲ್ಲಿ ನೀರು ಸಿಗುವ ಖಾತ್ರಿಯಾಗಿದೆ. ಕಳೆದ ಬಾರಿಯ ತೀವ್ರ ಬರದಿಂದ ಬೋರ್ ವೆಲ್ ಗಳಲ್ಲಿ ಅಂತರ್ಜಲ ಮಟ್ಟ ತೀವ್ರ ಕುಸಿದಿತ್ತು. ಈಗ ಜೋರು ಮಳೆಯಿಂದ ಬೋರ್ ವೆಲ್ ಗಳು ಚೇತರಿಕೆ ಕಂಡಿವೆ. ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಇನ್ನೂ ಹಿಂಗಾರು ಮಳೆ ಸಹ ಸಾಕಷ್ಟು ಸುರಿದಿದೆ.

2024 ಜನವರಿ 15ರಂದು ರಾಶಿ ಅಡಿಕೆ ಗರಿಷ್ಠ ದರ 50,500 ರೂಪಾಯಿ ಗಡಿ ತಲುಪಿತ್ತು. ಫೆಬ್ರವರಿ ತಿಂಗಳಲ್ಲಿ‌ ಏಕಾಏಕಿ 48 ಸಾವಿರಕ್ಕೆ ಕುಸಿದಿತ್ತು. ಮಾರ್ಚ್ ತಿಂಗಳಲ್ಲಿ ಸ್ವಲ್ಪ ಚೇತರಿಕೆ ಕಂಡು 50 ಸಾವಿರ ತಲುಪಿತ್ತು. ಏಪ್ರಿಲ್ ನಲ್ಲಿ ಗರಿಷ್ಠ 54 ಸಾವಿರ ಗಡಿ ತಲುಪಿತ್ತು. ಮೇ ತಿಂಗಳಲ್ಲಿ ಗರಿಷ್ಠ 55 ಸಾವಿರ ತಲುಪಿ ಕುಸಿತ ಕಂಡಿತ್ತು. ಜೂನ್ ತಿಂಗಳ ಎರಡನೇ ವಾರದಿಂದ ಮತ್ತೆ ಕುಸಿತ ಕಂಡು, ಜುಲೈನಲ್ಲಿ 51 ಸಾವಿರ ಇತ್ತು. ಆಗಸ್ಟ್ ನಲ್ಲಿ ಹೊಸ ಅಡಿಕೆ 42 ಸಾವಿರಕ್ಕೆ ಕುಸಿದಿತ್ತು.‌ಸೆಪ್ಟಂಬರ್, ಅಕ್ಟೋಬರ್ ನಲ್ಲಿ ಮತ್ತಷ್ಟು ಚೇತರಿಕೆ ಕಾಣುತ್ತಿದೆ.

 

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top