ದಾವಣಗೆರೆ: ಹೊಸ ವರ್ಷದ ಮೊದಲ ದಿನವೇ ಅಡಿಕೆ ದರಲ್ಲಿ ಭರ್ಜರಿ ಏರಿಕೆ; ಜ.1ರ ಅಡಿಕೆ ಕನಿಷ್ಠ, ಗರಿಷ್ಠ ಬೆಲೆ ಎಷ್ಟು..?

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ದಾವಣಗೆರೆ: ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ದರಲ್ಲಿ (arecanut rate) ಹೊಸ ವರ್ಷ (2025) ಮೊದಲ ದಿನವೇ ಭರ್ಜರಿ ಏರಿಕೆ ಕಂಡಿದೆ. ಕಳೆದ ದಿನದ ಮಾರುಕಟ್ಟೆಗೆ ಹೋಲಿಸಿದ್ರೆ ಇಂದು (ಜ‌.01) 200 ರೂಪಾಯಿಯಷ್ಟು ಏರಿಕೆಯಾಗಿದೆ. ಕಳೆದ ಒಂದು ವಾರದಿಂದ ಸತತ 1200 ರೂ.ಏರಿಕೆ ಕಂಡಿದೆ. ಹೊಸ ವರ್ಷದಲ್ಲಿ 51 ಸಾವಿರ ಗಡಿ ದಾಟಿದೆ.

  • ಜ.1ರ ಚನ್ನಗಿರಿ ರಾಶಿ ಅಡಿಕೆ ಧಾರಣೆ (ಪ್ರತಿ ಕ್ವಿಂಟಲ್ ದರ)
  • ಗರಿಷ್ಠ ಬೆಲೆ 51,385
  • ಕನಿಷ್ಠ ಬೆಲೆ 45,319
  • ಸರಾಸರಿ ಬೆಲೆ 50,102

ಇಂದು (ಜ.1) ಜಿಲ್ಲೆಯ ಪ್ರಮುಖ ಮಾರುಕಟ್ಟೆಯಾದ ಚನ್ನಗಿರಿ ವಹಿವಾಟಿನಲ್ಲಿ ರಾಶಿ ಅಡಿಕೆ ಗರಿಷ್ಠ‌ ಬೆಲೆ ಕ್ವಿಂಟಲ್ ಗೆ 51,385 ರೂ. ಇದ್ದು, ಕನಿಷ್ಠ ಬೆಲೆ 45,319 ರೂ., ಸರಾಸರಿ ಬೆಲೆ 50,102 ರೂ.‌ಇದೆ. ಬೆಟ್ಟೆ ಅಡಿಕೆ ಗರಿಷ್ಠ 29,587 ರೂ. ದಾಖಲಾಗಿದೆ.

ಜಿಲ್ಲೆಯ ಚನ್ನಗಿರಿ, ಹೊನ್ನಾಳಿ, ದಾವಣಗೆರೆ, ಹರಿಹರ, ಜಗಳೂರು ತಾಲ್ಲೂಕಿನಲ್ಲಿ ಅಡಿಕೆ ಮುಖ್ಯ ಬೆಳೆಯಾಗಿದೆ. ಪ್ರತಿ ವರ್ಷಕ್ಕೆ ಹೋಲಿಸಿದ್ರೆ ಈ ವರ್ಷ ಸ್ವಲ್ಪ ಇಳುವರಿ ಕಡಿಮೆ. ಏಕೆಂದ್ರೆ 2023 ವರ್ಷದ ತೀವ್ರ ಮಳೆ ಕೊರತೆಯಿಂದ ಉಷ್ಣಾಂಶ ಏರಿಕೆಯಾಗಿ ಇಳುವರಿ ಕುಸಿತ ಕಂಡಿದೆ. ಈಗಾಗಲೇ ಅಡಿಕೆ ಕೊಯ್ಲು ಬಹುತೇಕ ಮುಗಿದಿದೆ. ಚಳಿಗಾಲ ಸಹ ಕೊನೆಯ ಹಂತಕ್ಕೆ ಬಂದಿದ್ದು, ಸಂಕ್ರಾಂತಿ ನಂತರ ಸೂರ್ಯ ತನ್ನ ಪಥ ಬದಲಿಸಲಿದ್ದೇನೆ. ಇನ್ನೇನು ಬೇಸಿಗೆ ಶುರುವಾಗಲಿದೆ. ಈ ಬಾರಿಯ ಬೇಸಿಗೆ ಬಿಸಿಲಿನಿಂದ ಅಡಿಕೆ ತೋಟ ರಕ್ಷಿಸಲು ರೈತರು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಿದೆ.

2024ರ ಜೂನ್ ಮೊದಲ ವಾರ 54 ಸಾವಿರ ಗಡಿ ದಾಟಿದ್ದ ಬೆಲೆ, ಜೂ.20ರಿಂದ ದಿನದಿಂದ ದಿನಕ್ಕೆ ಕುಸಿಯುತ್ತ ಬಂದಿದ್ದು, ಸೆಪ್ಟೆಂಬರ್ ನಲ್ಲಿ ಹೊಸ ಅಡಿಕೆ 46 ಸಾವಿರ ಗಡಿ ತಲುಪಿತ್ತು. ಅಕ್ಟೋಬರ್ ಪ್ರಾರಂಭದಲ್ಲಿ ಚೇತರಿಕೆ ಕಂಡು 50 ಸಾವಿರ ಗಡಿ ಸಮೀಪ ಬಂದಿತ್ತು. ನವೆಂಬರ್‌ ಮೊದಲ ವಾರ ಕುಸಿದು ಕೊನೆಯಲ್ಲಿ 50 ಸಾವಿರ ಗಡಿ ತಲುಪಿತ್ತು. ಈಗ ಡಿಸೆಂಬರ್ ನಲ್ಲಿ 51 ಸಾವಿರ ಗಡಿದಾಟಿ ಮತ್ತೆ ಕುಸಿತ ಕಂಡಿತ್ತು. ವರ್ಷದ ಕೊನೆಯಲ್ಲಿ‌ ದಿಢೀರ್ ಚೇತರಿಕೆ ಕಂಡಿದೆ. ಇದೀಗ 2025 ಹೊಸ ವರ್ಷ ಶುರುವಾಗಿದ್ದು, ದರ ಚೇತರಿಕೆ ಮುಂದುವರೆದಿದೆ. 2023 ಜುಲೈ ತಿಂಗಳಲ್ಲಿ ಗರಿಷ್ಠ ಬೆಲೆ 57 ಸಾವಿರ ತಲುಪಿತ್ತು. 2024ರ ವರ್ಷ ಮೇ ತಿಂಗಳಲ್ಲಿ ಗರಿಷ್ಠ 55 ಸಾವಿರ ತಲುಪಿತ್ತು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *