Connect with us

Dvgsuddi Kannada | online news portal | Kannada news online

ದಾವಣಗೆರೆ: ಮತ್ತೆ 52 ಸಾವಿರ ಗಡಿ ತಪುಪಿದ ಅಡಿಕೆ; ಜ.22ರ ಕನಿಷ್ಠ, ಗರಿಷ್ಠ ದರ ಎಷ್ಟು..?

ಪ್ರಮುಖ ಸುದ್ದಿ

ದಾವಣಗೆರೆ: ಮತ್ತೆ 52 ಸಾವಿರ ಗಡಿ ತಪುಪಿದ ಅಡಿಕೆ; ಜ.22ರ ಕನಿಷ್ಠ, ಗರಿಷ್ಠ ದರ ಎಷ್ಟು..?

ದಾವಣಗೆರೆ: ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ದರಲ್ಲಿ (arecanut rate) ಮತ್ತೆ ಏರಿಕೆ ಕಂಡಿದೆ. ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಪ್ರತಿ ಕ್ವಿಂಟಾಲ್ ರಾಶಿ ಅಡಿಕೆ ದರ 52 ಸಾವಿರ ಗಡಿ ತಲುಪಿದೆ.

  • ಜ.22 ರ ಚನ್ನಗಿರಿ ರಾಶಿ ಅಡಿಕೆ ಧಾರಣೆ (ಪ್ರತಿ ಕ್ವಿಂಟಲ್ ದರ)
  • ಗರಿಷ್ಠ ಬೆಲೆ 51,899
  • ಕನಿಷ್ಠ ಬೆಲೆ 40,000
  • ಸರಾಸರಿ ಬೆಲೆ 50,588
  • ಬೆಟ್ಟೆ ಅಡಿಕೆ ದರ
  • ಗರಿಷ್ಠ ಬೆಲೆ 20,587
  • ಕನಿಷ್ಠ ಬೆಲೆ 24,187
  • ಸರಾಸರಿ ಬೆಲೆ 22,320

ಜಿಲ್ಲೆಯ ಪ್ರಮುಖ ಮಾರುಕಟ್ಟೆಯಾದ ಚನ್ನಗಿರಿ ವಹಿವಾಟಿನಲ್ಲಿ ಜ.22ರಂದು ರಾಶಿ ಅಡಿಕೆ ಗರಿಷ್ಠ‌ ಬೆಲೆ ಕ್ವಿಂಟಲ್ ಗೆ 51,899 ರೂ. ಇದ್ದು, ಕನಿಷ್ಠ ಬೆಲೆ 40,000 ರೂ., ಸರಾಸರಿ ಬೆಲೆ 50,588 ರೂ.‌ಇದೆ. ಇನ್ನೂ ಬೆಟ್ಟೆ ಅಡಿಕೆ ದರ ಗರಿಷ್ಠ 20,587 ರೂ ಇದೆ.

ಜಿಲ್ಲೆಯ ಚನ್ನಗಿರಿ, ಹೊನ್ನಾಳಿ, ದಾವಣಗೆರೆ, ಹರಿಹರ, ಜಗಳೂರು ತಾಲ್ಲೂಕಿನಲ್ಲಿ ಅಡಿಕೆ ಮುಖ್ಯ ಬೆಳೆಯಾಗಿದೆ. ಪ್ರತಿ ವರ್ಷಕ್ಕೆ ಹೋಲಿಸಿದ್ರೆ ಈ ವರ್ಷ ಸ್ವಲ್ಪ ಇಳುವರಿ ಕಡಿಮೆ. ಏಕೆಂದ್ರೆ 2023 ವರ್ಷದ ತೀವ್ರ ಮಳೆ ಕೊರತೆಯಿಂದ ಉಷ್ಣಾಂಶ ಏರಿಕೆಯಾಗಿ ಇಳುವರಿ ಕುಸಿತ ಕಂಡಿದೆ. ಈಗಾಗಲೇ ಅಡಿಕೆ ಕೊಯ್ಲು ಸಂಪೂರ್ಣ ಮುಗಿದಿದೆ. ಚಳಿಗಾಲ ಸಹ ಕೊನೆಯ ಹಂತಕ್ಕೆ ಬಂದಿದ್ದು, ಸಂಕ್ರಾಂತಿ ನಂತರ ಸೂರ್ಯ ತನ್ನ ಪಥ ಬದಲಿಸಲಿದ್ದೇನೆ. ದಿನದಿಂದ ದಿನಕ್ಕೆ ಬಿಸಿಲು ಏರಿಕೆಯಾಗುತ್ತಿದೆ. ಬೇಸಿಗೆ ಬಿಸಿಲಿನಿಂದ ಅಡಿಕೆ ತೋಟ ರಕ್ಷಣೆಗೆ ರೈತರು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಿದೆ.

2024ರ ಜೂನ್ ಮೊದಲ ವಾರ 54 ಸಾವಿರ ಗಡಿ ದಾಟಿದ್ದ ಬೆಲೆ, ಜೂ.20ರಿಂದ ದಿನದಿಂದ ದಿನಕ್ಕೆ ಕುಸಿಯುತ್ತ ಬಂದಿದ್ದು, ಸೆಪ್ಟೆಂಬರ್ ನಲ್ಲಿ ಹೊಸ ಅಡಿಕೆ 46 ಸಾವಿರ ಗಡಿ ತಲುಪಿತ್ತು. ಅಕ್ಟೋಬರ್ ಪ್ರಾರಂಭದಲ್ಲಿ ಚೇತರಿಕೆ ಕಂಡು 50 ಸಾವಿರ ಗಡಿ ಸಮೀಪ ಬಂದಿತ್ತು. ನವೆಂಬರ್‌ ಮೊದಲ ವಾರ ಕುಸಿದು ಕೊನೆಯಲ್ಲಿ 50 ಸಾವಿರ ಗಡಿ ತಲುಪಿತ್ತು. ಈಗ ಡಿಸೆಂಬರ್ ನಲ್ಲಿ 51 ಸಾವಿರ ಗಡಿದಾಟಿ ಮತ್ತೆ ಕುಸಿತ ಕಂಡಿತ್ತು. ವರ್ಷದ ಕೊನೆಯಲ್ಲಿ‌ ದಿಢೀರ್ ಚೇತರಿಕೆ ಕಂಡಿತ್ತು. ಹೊಸ ವರ್ಷದಲ್ಲಿ ಸ್ವಲ್ಪ ಚೇತರಿಕೆ ಕಂಡಿದೆ‌. ಪ್ರಸ್ತುತ ಜನವರಿ ಮಧ್ಯದಲ್ಲಿ 52 ಸಾವಿರ ಸಮೀಪ ಬಂದಿದೆ. 2023 ಜುಲೈ ತಿಂಗಳಲ್ಲಿ ಗರಿಷ್ಠ ಬೆಲೆ 57 ಸಾವಿರ ತಲುಪಿತ್ತು. ಕಳೆದ ವರ್ಷ 2024ರ ಮೇ ತಿಂಗಳಲ್ಲಿ ಗರಿಷ್ಠ 55 ಸಾವಿರ ತಲುಪಿತ್ತು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top