ದಾವಣಗೆರೆ: ಅಡಿಕೆ ಬೆಲೆಯಲ್ಲಿ 300 ರೂ.‌ಇಳಿಕೆ; ಜ‌.31ರ ಕನಿಷ್ಠ, ಗರಿಷ್ಠ ರೇಟ್ ಎಷ್ಟು..?

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ದಾವಣಗೆರೆ: ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ (Commercial crop)  ಅಡಿಕೆ ದರಲ್ಲಿ (arecanut rate) ಸ್ವಲ್ಪ ಇಳಿಕೆ ಕಂಡಿದೆ. ಕಳೆದ ಒಂದು ವಾರದಿಂದ 52 ಸಾವಿರ ಗಡಿ ದಾಟಿದ್ದ ಬೆಲೆ,‌ ಈಗ 52 ಸಾವಿರ ಒಳಗೆ ಬಂದಿದೆ.

ಜ.31ರ ಚನ್ನಗಿರಿ ರಾಶಿ ಅಡಿಕೆ ಧಾರಣೆ (ಪ್ರತಿ ಕ್ವಿಂಟಲ್ ದರ)

  • ಗರಿಷ್ಠ ಬೆಲೆ 51,900
  • ಕನಿಷ್ಠ ಬೆಲೆ 36,000
  • ಸರಾಸರಿ ಬೆಲೆ 47, 763

ಬೆಟ್ಟೆ ಅಡಿಕೆ ದರ

  • ಗರಿಷ್ಠ ಬೆಲೆ 22,187
  • ಕನಿಷ್ಠ ಬೆಲೆ 25,187
  • ಸರಾಸರಿ ಬೆಲೆ 23,687

ಜಿಲ್ಲೆಯ ಪ್ರಮುಖ ಮಾರುಕಟ್ಟೆಯಾದ ಚನ್ನಗಿರಿ ವಹಿವಾಟಿನಲ್ಲಿ ಜ.31ರಂದು ರಾಶಿ ಅಡಿಕೆ ಗರಿಷ್ಠ‌ ಬೆಲೆ ಕ್ವಿಂಟಲ್ ಗೆ 51,900 ರೂ. ಇದ್ದು, ಕನಿಷ್ಠ ಬೆಲೆ 36,000 ರೂ., ಸರಾಸರಿ ಬೆಲೆ 47, 763 ರೂ.‌ಇದೆ.

ಜಿಲ್ಲೆಯ ಚನ್ನಗಿರಿ, ಹೊನ್ನಾಳಿ, ದಾವಣಗೆರೆ, ಹರಿಹರ, ಜಗಳೂರು ತಾಲ್ಲೂಕಿನಲ್ಲಿ ಅಡಿಕೆ ಮುಖ್ಯ ಬೆಳೆಯಾಗಿದೆ. ಈಗಾಗಲೇ ಅಡಿಕೆ ಕೊಯ್ಲು ಸಂಪೂರ್ಣ ಮುಗಿದಿದೆ. ಚಳಿಗಾಲ ಸಹ ಕೊನೆಯ ಹಂತಕ್ಕೆ ಬಂದಿದ್ದು, ಸಂಕ್ರಾಂತಿ ನಂತರ ಸೂರ್ಯ ತನ್ನ ಪಥ ಬದಲಿಸಲಿದ್ದೇನೆ. ದಿನದಿಂದ ದಿನಕ್ಕೆ ಬಿಸಿಲು ಏರಿಕೆಯಾಗುತ್ತಿದೆ. ಬೇಸಿಗೆ ಬಿಸಿಲಿನಿಂದ ಅಡಿಕೆ ತೋಟ ರಕ್ಷಣೆಗೆ ರೈತರು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಿದೆ.

ಸುಣ್ಣಕ್ಕೆ ಹೆಚ್ಚಿದ ಬೇಡಿಕೆ: ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ರೈತರು ಬಿಸಿಲಿನ ಶಾಖದಿಂದ ಅಡಿಕೆ ಮರ ರಕ್ಷಣೆ ಮಾಡಲು ಮರಕ್ಕೆ ಸುಣ್ಣ ಬಳಿಯುವುದು ವಾಡಿಕೆ. ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತರಣೆ ಸಹ ಹೆಚ್ಚಾದಂತೆ‌ ಇದೀಗ ಸುಣ್ಣಕ್ಕೆ ಭಾರೀ ಬೇಡಿಕೆ ಬಂದಿದೆ. ಬೇಡಿಕೆ ಕಳೆದುಕೊಂಡಿದ್ದ ಸುಣ್ಣಕ್ಕೆ ಮತ್ತೆ ಬೇಡಿಕೆ ಬಂದಿದ್ದು, ಸುಣ್ಣ ತಯಾರಿಕರು ಸಹ ಖಿಷಿಯಲ್ಲಿದ್ದಾರೆ‌.

2024ರ ನವೆಂಬರ್‌ ಮೊದಲ ವಾರ ಕುಸಿದಿತ್ತು. ಈಗ ಡಿಸೆಂಬರ್ ನಲ್ಲಿ 51 ಸಾವಿರ ಗಡಿದಾಟಿ ಮತ್ತೆ ಕುಸಿತ ಕಂಡಿತ್ತು. ವರ್ಷದ ಕೊನೆಯಲ್ಲಿ‌ ದಿಢೀರ್ ಚೇತರಿಕೆ ಕಂಡಿತ್ತು. ಹೊಸ ವರ್ಷದಲ್ಲಿ ಸ್ವಲ್ಪ ಚೇತರಿಕೆ ಕಂಡಿದೆ‌. ಪ್ರಸ್ತುತ ಜನವರಿ ಕೊನೆಯಲ್ಲಿ 52 ಸಾವಿರ ಗಡಿದಾಟಿ ಇಳಿಕೆಯಾಗಿದೆ. 2023 ಜುಲೈ ತಿಂಗಳಲ್ಲಿ ಗರಿಷ್ಠ ಬೆಲೆ 57 ಸಾವಿರ ತಲುಪಿತ್ತು. ಕಳೆದ ವರ್ಷ 2024ರ ಮೇ ತಿಂಗಳಲ್ಲಿ ಗರಿಷ್ಠ 55 ಸಾವಿರ ತಲುಪಿತ್ತು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *