Connect with us

Dvgsuddi Kannada | online news portal | Kannada news online

ದಾವಣಗೆರೆ: ಮತ್ತೆ ಕುಸಿತ ಕಂಡ ರಾಶಿ ಅಡಿಕೆ ದರ…!!!

ಪ್ರಮುಖ ಸುದ್ದಿ

ದಾವಣಗೆರೆ: ಮತ್ತೆ ಕುಸಿತ ಕಂಡ ರಾಶಿ ಅಡಿಕೆ ದರ…!!!

ದಾವಣಗೆರೆ: ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ದರ (arecanut rate) ಮಾರ್ಚ್ ಆರಂಭದಿಂದಲೂ ಸತತ ಏರಿಕೆಯಲ್ಲಿತ್ತು. ಈಗ, ಎರಡು ದಿನದಿಂದ 600 ರೂ.ಗಳಷ್ಟು ದಿಢೀರ್ ಕುಸಿತ ಕಂಡಿದೆ. ಸ್ವಲ್ಪ‌ ದಿನ ಇಟ್ಟು ಮಾರಾಟ ಮಾಡುವವರಿಗೆ‌ ಮುಂದೆ ಒಳ್ಳೆಯ ರೇಟ್ ಸಿಗುವ ಸಾಧ್ಯತೆ ಇದೆ. ಕಳೆದ ವರ್ಷ (2023) ಜುಲೈ ತಿಂಗಳಲ್ಲಿ ಗರಿಷ್ಠ 57 ಸಾವಿರ ತಲುಪಿತ್ತು. ಮಾ.‌27ರಂದು ರಾಶಿ ಅಡಿಕೆ ಗರಿಷ್ಠ‌ ಬೆಲೆ ಕ್ವಿಂಟಲ್ ಗೆ 48,899 ರೂ.ಗಳಿದ್ದು, ಕನಿಷ್ಠ ಬೆಲೆ 45,699 ರೂ.ಗಳಾಗಿದೆ. ಕಳೆದ ಎರಡು ದಿನದ ಹಿಂದೆ 49,500 ರೂಪಾಯಿ ಇತ್ತು.

ಇನ್ನೂ ಜಿಲ್ಲೆಯಲ್ಲಿ ಅಂತರ್ಜಲ‌‌‌ ಮಟ್ಟ ತೀವ್ರ ಕುಸಿದಿದ್ದು, ಹೇಗಾದ್ರೂ ಮಾಡಿ ಏಪ್ರಿಲ್, ಮೇ ತಿಂಗಳಲ್ಲಿ ಅಡಿಕೆ ತೋಟ ಬದುಕಿಸಿಕೊಂಡರೆ ಸಾಕು ಎನ್ನುತ್ತಿದ್ದಾರೆ ದಾವಣಗೆರೆ ಜಿಲ್ಲೆಯ ರೈತರು. ಹೊಸ ವರ್ಷ 2024ರ ಆರಂಭದಿಂದಲೂ ಏರಿಮುಖದಲ್ಲಿದ್ದ ಅಡಿಕೆ ದರ ಜ. 15ರ ನಂತರ ಕುಸಿತ ಕಂಡಿತ್ತು. ಒಂದು ತಿಂಗಳಲ್ಲಿ 2,300 ರೂ.ಗಳಷ್ಟು ಕುಸಿತ ಕಂಡಿತ್ತು. ಈಗ ಸ್ವಲ್ಪ ಪ್ರಮಾಣದಲ್ಲಿ ದರ ಚೇತರಿಕೆ ಹಾದಿಗೆ ಮರಳಿದೆ.

ಅಡಿಕೆ ತೋಟದಲ್ಲಿ ಅಡಿಕೆ ಕಾಯಿ ಕಟ್ಟುವ ಕಾರ್ಯ ಶುರುವಾಗಿದೆ. ಆದರೆ, ಜಿಲ್ಲೆಯಲ್ಲಿ ಬರದ ವಾತಾವರಣ ನಿರ್ಮಾಣವಾಗಿದ್ದು, ಬಿಸಿಲಿನ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗಿದೆ. ತಾಪಮಾನಕ್ಕೆ ಹರಳು ಉದುರುತ್ತಿವೆ. ಅಂತರ್ಜಲ ಮಟ್ಟ ತೀವ್ರ ಕುಸಿತ ಕಂಡಿದ್ದು, ಬೋರ್ ವೆಲ್ ಗಳು ಬತ್ತಿ‌ ಹೋಗಿವೆ. ಇನ್ನೂ ಕೆಲವು ಕಡೆ ರೈತರು ಟ್ಯಾಂಕರ್ ಮೊರೆ ಹೋಗಿದ್ದಾರೆ.

2023ರ ಏಪ್ರಿಲ್ ನಲ್ಲಿ 48 ಸಾವಿರವಿದ್ದ ಬೆಲೆ, ಮೇನಲ್ಲಿ 49 ಸಾವಿರ ಗಡಿ ದಾಟಿತ್ತು. ಜೂನ್ ನಲ್ಲಿ 50 ಸಾವಿರ ಗಡಿ ದಾಟಿದ್ದ ಬೆಲೆ, ಜುಲೈನಲ್ಲಿ ವರ್ಷದಲ್ಲಿಯೇ ಗರಿಷ್ಠ 57 ಸಾವಿರ ತಲುಪಿತ್ತು. ಆಗಸ್ಟ್ ತಿಂಗಳಲ್ಲಿ ಸತತ ಇಳಿಕೆ ಕಂಡು 48 ಸಾವಿರ ತಲುಪಿತ್ತು. ಸೆಪ್ಟೆಂಬರ್‌ ಮೊದಲ 15 ದಿನ ‌46 ಸಾವಿರಕ್ಕೆ ಕುಸಿದು ಆತಂಕ ಉಂಟು ಮಾಡಿತ್ತು. ಆದರೆ, ಅಕ್ಟೋಬರ್ ‌ಕೊನೆಯ ವಾರ ಮತ್ತೆ 47,800 ರೂ.ಗೆ ಏರಿಕೆ ಕಂಡಿತ್ತು. ನವೆಂಬರ್ ನಲ್ಲಿ 47 ಸಾವಿರಕ್ಕೆ ತಲುಪಿ ಸ್ಥಿರವಾಗಿತ್ತು. ಡಿಸೆಂಬರ್ ನಲ್ಲಿ 48 ಸಾವಿರ ಗಡಿ ದಾಟಿತ್ತು.ಇದೀಗ 2024 ಜನವರಿ 15ರಂದು ಗರಿಷ್ಠ ದರ 50,500 ರೂಪಾಯಿ ಗಡಿ ತಲುಪಿತ್ತು. ಫೆಬ್ರವರಿ ತಿಂಗಳಿಂದ ಸತತ ಕುಸಿತ ಕಂಡು ಈಗ 48ಸಾವಿರದಿಂದ 49 ಸಾವಿರ ಗಡಿ ಸಮೀಪ ಬಂದಿದೆ.

ಜಿಲ್ಲೆಯ ಪ್ರಮುಖ ಮಾರುಕಟ್ಟೆಯಾದ ಚನ್ನಗಿರಿ ವಹಿವಾಟಿನಲ್ಲಿ ಮಾ.27ರಂದು ಪ್ರತಿ ಕ್ವಿಂಟಲ್ ಉತ್ತಮ ರಾಶಿ ಅಡಿಕೆ ಕನಿಷ್ಠ ಬೆಲೆ 45,699 ರೂ, ಗರಿಷ್ಠ ಬೆಲೆ 49,899 ಹಾಗೂ ಸರಾಸರಿ ಬೆಲೆ 46,860 ರೂ.ಗೆ ಮಾರಾಟವಾಗಿದೆ. ಇನ್ನೂ ಬೆಟ್ಟೆ ಅಡಿಕೆ ಗರಿಷ್ಠ 34,636 ರೂ‌.ಗೆ ಮಾರಾಟವಾಗಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top