ದಾವಣಗೆರೆ; ಕಳ್ಳತನವಾಗಿದ್ದ 5 ಲಕ್ಷ ಮೌಲ್ಯದ ಅಡಿಕೆ ವಶ;  ಒಬ್ಬ ಬಾಲಪರಾಧಿ ಸೇರಿ 4 ಆರೋಪಿಗಳ ಬಂಧನ..!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ನ್ಯಾಮತಿ ತಾಲ್ಲೂಕಿನ ಮಾದಪುರ ಗ್ರಾಮದಲ್ಲಿ ಕಳ್ಳತನವಾಗಿದ್ದ ಅಡಿಕೆ ಕಳ್ಳರನ್ನು  ಜಿಲ್ಲಾ ಪೊಲೀಸರು ಪತ್ತೆ ಮಾಡಿದ್ದಾರೆ.  ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಬಾಲಪರಾಧಿ  ಸೇರಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ 5 ಲಕ್ಷ  ಮೌಲ್ಯದ ಅಡಿಕೆ ವಶಕ್ಕೆ ಪಡೆಯಲಾಗಿದೆ.

ನ್ಯಾಮತಿ ತಾಲೂಕಿನ ಮಾದಪುರ ಗ್ರಾಮದ ಬಸವಗೌಡ ಎಂಬುವರ ಗೋಡಾನ್ ನಲ್ಲಿ ಸಂಗ್ರಹಿಸಿದ್ದ 65 ಚೀಲ ಅಡಿಕೆಯಲ್ಲಿ 15 ಚೀಲ ಕಳ್ಳತನವಾಗಿದ್ದವು.  ಈ ಬಗ್ಗೆ ಬಸವಗೌಡ ಅವರು ನ್ಯಾಮತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರು ಅನ್ವಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ , ಹೆಚ್ಚುವರಿ ವರಿಷ್ಠಾಧಿಕಾರಿ ರಾಜೀವ್ ಎಂ ಹಾಗೂ ಚನ್ನಗಿರಿ ಉಪಾಧೀಕ್ಷಕ ಬಸವರಾಜ ಬಿ.ಎಸ್ ಮಾರ್ಗದರ್ಶನದಲ್ಲಿ ಹೊನ್ನಾಳಿ ವೃತ್ತ ನಿರೀಕ್ಷಕ ಟಿ.ವಿ. ದೇವರಾಜ್ ನೃತೃತ್ವದಲ್ಲಿ ತಂಡ ರಚಿಸಲಾಗಿತ್ತು.

ಟಿ.ವಿ. ದೇವರಾಜ್ ನೃತೃತ್ವದಲ್ಲಿ ತಂಡ ಸವಳಂಗ ಕಡೆಯಿಂದ ಬರುತ್ತಿದ್ದ ವಾಹನ ತಪಾಸಣೆ ನಡೆಸುತ್ತಿದ್ದಾಗ ಆಯನೂರಿನಿಂದ ಸವಳಂಗ ಕಡೆಗೆ ಒಂದು ಓಮಿನಿ ವ್ಯಾನ್ ಬರುತ್ತಿದ್ದನ್ನು ಕಂಡ ಸಿಬ್ಬಂದಿ, ಪರಿಶೀಲನೆ ನಡೆಸಿದಾಗ 04 ಅಡಿಕೆ ಚೀಲ ಹಾಗೂ ನಾಲ್ಕು ಜನ ರನ್ನು ಅನುಮಾನದ ಮೇಲೆ ವಶಕ್ಕೆ ಪಡೆಯಲಾಗುತ್ತದೆ. ಆರೋಪಿಗಳಾದ ಅಬ್ದುಲ್ ಮಜೀದ್ (24), ಒಬ್ಬ ಬಾಲಪರಾಧಿ, ಮಹ್ಮದ್ ತೌಸೀಫ್ (24)  ಹಾಗೂ ನಾಗರಾಜ್ (24) ಬಂಧಿಸಿ ವಿಚಾರಣೆ ನಡೆಸಿದಾಗ ನ್ಯಾಮತಿಯ ತಾಲ್ಲೂಕಿನ ಮಾದಪುರ ಹಾಗೂ ಶಿವಮೊಗ್ಗ ತಾಲೂಕಿನ ಮುದುವಾಲ ಗ್ರಾಮದಲ್ಲಿ ಅಡಿಕೆ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ಧಾರೆ.

ಬಂಧಿತರಿಂದ ಕೆಎ-03ಪಿ-0498 ನಂಬರಿನ ಓಮಿನಿ, 50 ಕೆಜಿ ತೂಕದ 04 ಚೀಲ ಹಾಗೂ 62 ಕೆ.ಜಿ ತೂಕದ 15 ಅಡಿಕೆ ಚೀಲಗಳನ್ನು ವಶಪಡೆಯಲಾಗಿದೆ. ಇದರ ಅಂದಾಜು ಮೊತ್ತ 5 ಲಕ್ಷ ರೂಪಾಯಿ ಆಗಿದೆ. ಪ್ರಕರಣವನ್ನು ಬೇಧಿಸಿದ ತಂಡಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *