Connect with us

Dvgsuddi Kannada | online news portal | Kannada news online

ದಾವಣಗೆರೆ: ಆಸ್ತಿಯಲ್ಲಿ ಪಾಲು ಕೊಡದಕ್ಕೆ ಮೂರು ವರ್ಷದ 40ಕ್ಕೂ ಹೆಚ್ಚು ಅಡಿಕೆ ಮರ ಕಡಿದು ಹಾಕಿದ ಸೊಸೆ.!!!

ದಾವಣಗೆರೆ

ದಾವಣಗೆರೆ: ಆಸ್ತಿಯಲ್ಲಿ ಪಾಲು ಕೊಡದಕ್ಕೆ ಮೂರು ವರ್ಷದ 40ಕ್ಕೂ ಹೆಚ್ಚು ಅಡಿಕೆ ಮರ ಕಡಿದು ಹಾಕಿದ ಸೊಸೆ.!!!

ದಾವಣಗೆರೆ: ಆಸ್ತಿಯಲ್ಲಿ ಪಾಲು ಕೊಡದಕ್ಕೆ ಮೂರು ವರ್ಷದ ಅಡಿಕೆ ಮರವನ್ನು ಸೊಸೆ ಕಡಿದು ಹಾಕಿದ್ದಾರೆ. ಅತ್ತೆ-ಮಾವನ ಮೇಲಿನ‌ ಸಿಟ್ಟಿಗೆ 40ಕ್ಕೂ ಹೆಚ್ಚು ಅಡಿಕೆ ಮರ ನಾಶ ಮಾಡಲಾಗಿದೆ.

ಈ ಘಟನೆ ದಾವಣಗೆರೆ ತಾಲೂಕಿನ ಅವರಗೊಳ್ಳ ಗ್ರಾಮದಲ್ಲಿ ನಡೆದಿದೆ. ಚಿದಾನಂದಸ್ವಾಮಿ, ಶಿವನಾಗಮ್ಮ ಅವರ ಪುತ್ರ ಕುಮಾರಸ್ವಾಮಿಯ ಪತ್ನಿ ರೂಪಾ ಕೆಲ ವರ್ಷಗಳಿಂದ ಆಸ್ತಿಯಲ್ಲಿ ಪಾಲು ಕೇಳುತ್ತಿದ್ದಳು. ಆದರೆ ಅತ್ತೆ-ಮಾವ ಆಸ್ತಿಯಲ್ಲಿ ಪಾಲು ಕೊಡಲು ಹಿಂದೇಟು ಹಾಕುತ್ತಿದ್ದರು. ಇದರಿಂದ ಕೋಪಗೊಂಡ ಸೊಸೆ ರೂಪಾ 3 ವರ್ಷದ 40 ಕ್ಕೂ ಹೆಚ್ಚು ಅಡಿಕೆ ಮರಗಳನ್ನ ಕಡಿದು ಹಾಕಿದ್ದಾಳೆ.

ಸೊಸೆ ರೂಪಾ ನಮ್ಮನ್ನು ಸರಿಯಾಗಿ ನೋಡಿಕೊಳ್ಳತ್ತಿರಲಿಲ್ಲ. ನಮ್ಮ ಮೇಲೆ ಹಲ್ಲೆ ಮಾಡುತ್ತಿದ್ದಾಳೆ. ಮನೆ ಕಟ್ಟಿಸಲು ನಮ್ಮ ಬಳಿಯೇ 8 ಲಕ್ಷ ರೂಪಾಯಿ ‌ಪಡೆದಿದ್ದಾಳೆಂದು ಮಾವ ಚಿದಾನಂದಪ್ಪ ದಾವಣಗೆರೆ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಆರೋಪಿ ರೂಪಾ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top