ದಾವಣಗೆರೆ: ಇತ್ತೀಚೆಗಷ್ಟೇ ಬೋರಗೊಂಡನಹಳ್ಳಿಯಲ್ಲಿ ಸಾವಿರಾರು ಅಡಿಕೆ ಮರ ಕಡಿದ ಹಾಕಿದ ಪ್ರಕರಣ ಮಾಸುವ ಮುನ್ನವೇ, ತಾಲ್ಲೂಕಿನಲ್ಲಿ ಮತ್ತೊಂದು ಇಂತಹದ್ದೇ ಘಟನೆ ಮರುಕಳಿಸಿದೆ. ಹಳೆಯ ದ್ವೇಷಕ್ಕೆ ಫಲಕ್ಕೆ ಬಂದ ಅಡಿಕೆ ಮರವನ್ನು ಕಡಿದು ಹಾಕಿದ ದುಷ್ಕರ್ಮಿಗಳು ವಿಕೃತಿ ಮೆರೆದಿದ್ದಾರೆ.
ದಾವಣಗೆರೆ ತಾಲೂಕಿನ ಗುಮ್ಮನೂರಲ್ಲಿ ಈ ಕೃತ್ಯ ನಡೆದಿದೆ. ಪ್ರಕಾಶ್ ಎಂಬುವವರಿಗೆ ಸೇರಿದ ತೋಟದಲ್ಲಿ ಫಸಲಿಗೆ ಬಂದ ಸುಮಾರು 25ಕ್ಕೂ ಅಧಿಕ ಅಡಿಕೆ ಗಿಡಗಳನ್ನು ಕಡಿದು ಹಾಕಲಾಗಿದೆ.ಹಳೆಯ ದ್ವೇಷಕ್ಕೆ ದುಷ್ಕರ್ಮಿಗಳು ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಗ್ರಾಮಾಂತರ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರ. ತೋಟದ ಮಾಲೀಕ ಪ್ರಕಾಶ್ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.



