ದಾವಣಗೆರೆ: ಸೆ.19, 20 ರಂದು ಅಡಿಕೆ ಕೃಷಿ ಯಂತ್ರಗಳ ಮೇಳ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ದಾವಣಗೆರೆ ಅಡಕೆ ಅಭಿವೃದ್ಧಿ ಪರಿಷ್ಕರಣಾ ಮತ್ತು ಮಾರಾಟ ಸಹಕಾರ ಸಂಘ ಹಾಗೂ ಕುಣಿಗಲ್‌ನ ಟೆಂಡರ್ ಟುಡೇ ಸಂಸ್ಥೆ ಸಹಯೋಗದೊಂದಿಗೆ ಅಡಕೆ ಕೃಷಿ ಯಂತ್ರ ಮೇಳನ್ನು ಸೆ.19, 20ರಂದು ಆಯೋಜಿಸಲಾಗಿದೆ.

ಸಂಘದ ಸಂಸ್ಥಾಪಕ ಅಧ್ಯಕ್ಷ ಎಚ್.ಜಯಣ್ಣ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಗರದ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಕಲ್ಯಾಣ ಮಂಟಪದಲ್ಲಿ ಮೇಳ ನಡೆಯಲಿದೆ. ಅಡಿಕೆ ಕೃಷಿಗೆ ಸಬಂಧಿಸಿದಂತೆ ಯಂತ್ರಗಳ ಪ್ರದರ್ಶನ, ವಿಚಾರಗೋಷ್ಠಿ, ಪ್ರಾತ್ಯಕ್ಷಿ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ರೈತರು ಅಡಿಕೆ ಕೃಷಿಯಲ್ಲಿ ನವ ತಾಂತ್ರಿಕತೆ ಅಳವಡಿಸಿಕೊಳ್ಳಲು ಉಪಯುಕ್ತ ಮಾಹಿತಿ ದೊರೆಯಲಿದೆ. 40ಕ್ಕೂ ಅಧಿಕ ಕಂಪನಿಗಳು ಮೇಳದಲ್ಲಿ ಭಾಗವಹಿಸಲಿವೆ. ಅಡಕೆ ಒಣಗಿಸುವ ಯಂತ್ರ, ಡ್ರೋಣ್ ಮೂಲಕ ಔಷಧ ಸಿಂಪಡಿಸುವ, ಅಡಕೆ ಒಣಗಿಸುವ ಯಂತ್ರಗಳು ಪ್ರದರ್ಶನ ನಡೆಯಲಿದೆ.

ಪ್ರವೇಶ ಉಚಿತವಾಗಿದ್ದು ಹೆಚ್ಚು ರೈತರು ಈ ಮೇಳದಲ್ಲಿ ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳಬೇಕು ಎಂದರು. ಸಂಘದ ನಿರ್ದೇಶಕ ಎಚ್.ಜಿ.ಮಲ್ಲಿಕಾರ್ಜುನ, ಕಾರ್ಯದರ್ಶಿ ಡಿ.ಎಚ್.ಶಿವಕುಮಾರ್, ಟೆಂಡರ್ ಟುಡೇ ಸಮೂಹದ ಶಿವಾನಂದ ‌ಇದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *