ದಾವಣಗೆರೆ: ಅಂತೂ ಅಶೋಕ ಚಿತ್ರಮಂದಿರ ರೈಲ್ವೆ ಗೇಟ್ ಸಮಸ್ಯೆಗೆ ಪರಿಹಾರ ಸಿಕ್ತು; ಅಂಡರ್ ಪಾಸ್ ಸಾರ್ವಜನಿಕ ಸೇವೆಗೆ ಮುಕ್ತ; ಬಹು ದಶಕಗಳ ಕನಸು ನನಸು..!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ; ಬಹು ವರ್ಷಗಳಿಂದ ಸಮಸ್ಯೆಯಾಗಿ ಉಳಿದಿದ್ದ ದಾವಣಗೆರೆ ನಗರದ ಅಶೋಕ ಟಾಕೀಸ್ ಬಳಿಯ ರೈಲ್ವೆ ಗೇಟ್ ಸಮಸ್ಯೆಗೆ ಇದೀಗ ಪರಿಹಾರ ಸಿಕ್ಕಾಂತಾಗಿದೆ.

ಸದಾ ಟ್ರಾಫಿಕ್ ಕಿರಿಕ್ ನಿಂದ ಕೂಡಿರುತ್ತಿದ್ದ ಅಶೋಕ ರಸ್ತೆ ಹಳೆ ಮತ್ತು ಹೊಸ ದಾವಣಗೆರೆ ಸಂಪರ್ಕ ಕೊಂಡಿಯಾಗಿದೆ. ಈ ರಸ್ತೆಯಲ್ಲಿ ರೈಲ್ವೆ ಗೇಟ್ ಹಾಕಿದರಂತೂ ಪ್ರಯಾಣಿಕರು ಜನ ಪ್ರತಿನಿಧಿಗಳಿಗೆ ಹಿಡಿ ಶಾಪ ಹಾಕುತ್ತಿದ್ದರು. ಇಂತಹ ಬಹು ದಶಕಗಳ ಬೇಡಿಕೆಯಾಗಿದ್ದ ನಗರದ ಅಶೋಕ ಚಿತ್ರಮಂದಿರ ಬಳಿಯ ರೈಲ್ವೆ ಅಂಡರ್ ಪಾಸ್ ಕನಸು ನನಸಾಗಿದ್ದು, ಇಂದು ಸಾರ್ವಜನಿಕ ಸೇವೆಗೆ ಮುಕ್ತವಾಗಿದೆ.

ರೈಲ್ವೆ ಕೆಳಸೇತುವೆ ನಿರ್ಮಾಣ ಹಾಗೂ ರಸ್ತೆಯನ್ನು 60 ಅಡಿ ರಸ್ತೆಯಾಗಿ ಅಭಿವೃದ್ಧಿಪಡಿಸಲಾಗಿದೆ. ದಾವಣಗೆರೆ ನಗರದ ಪ್ರಮುಖ ಜನನಿಬಿಡ ರಸ್ತೆಯಾಗಿರುವ ಅಶೋಕ ಟಾಕೀಸ್ ಬಳಿಯ ರೈಲ್ವೆ ಗೇಟ್‍ಗೆ ಪರ್ಯಾಯವಾಗಿ ಎರಡು ಮಾರ್ಗದ ಕೆಳ ಸೇತುವೆ ನಿರ್ಮಾಣ ಹಾಗೂ ಇಲ್ಲಿಂದ ಈರುಳ್ಳಿ ಮಾರ್ಕೆಟ್‍ಗೆ ಸಂಪರ್ಕ ಕಲ್ಪಿಸಲು ರೈಲ್ವೆ ಇಲಾಖೆ ಯೋಜನೆ ರೂಪಿಸಿತ್ತು.

ಇದೀಗ ಕಾಮಗಾರಿ ರೈಲ್ವೆ ಅಂಡರ್ ಪಾಸ್ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು, ಇಂದಿನಿಂದ ಸಾರ್ವಜನಿಕ ಸೇವೆಗೆ ಮುಕ್ತವಾಗಿದೆ. ಇಂದು ನೂರಾರು ವಾಹನ ಸವಾರರು ಅಂಡರ್ ಪಾಸ್ ಮಾರ್ಗವಾಗಿ ಸಂಚರಿಸಿದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *