ದಾವಣಗೆರೆ: ಭಾರತ್ ಬಂದ್ ಗೆ ನೀರಸ ಪ್ರತಿಕ್ರಿಯೆ; ರೈತ ಪರ ಸಂಘಟನೆಗಳು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ..!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ದಾವಣಗೆರೆ:  ಕೇಂದ್ರ ಸರ್ಕಾರದ ಕೃಷಿ ಕಾಯ್ದೆ  ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ರೈತರ ಸಂಘಟನೆಗಳು ಕರೆದಿದ್ದ ಭಾರತ್ ಬಂದ್ ಗೆ ದಾವಣಗೆರೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ, ರೈತಪರ ಸಂಘಟನೆಗಳು, ಎಡ ಪಕ್ಷ, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಕಾರ್ಮಿಕ ಸಂಘಟನೆಗಳು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಮಿಕ ಹಾಗೂ ರೈತ ಸಂಘಟನೆಗಳು ಭಾರತ್  ಬಂದ್ ಗೆ ಬೆಂಬಲಿಸುವಂತೆ ಒತ್ತಾಯಿಸಿ  ಬೈಕ್ ರ‍ರ್ಯಾಲಿ ನಡೆಸಿದವು. ಬೆಳ್ಳಂಬೆಳ್ಳಗೆ  ಜಯದೇವ ಸರ್ಕಲ್‍ ಬಳಿ  ರೈತ ಮುಖಂಡ ಹುಚ್ಚವ್ವನಹಳ್ಳಿ ಮಂಜುನಾಥ್ ನೇತೃತ್ವದಲ್ಲಿ ರಸ್ತೆಗೆ ತರಕಾರಿ ಸುರಿದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.   ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಆದರೆ ರೈತರ ಬೆಳೆಗೆ ಸರಿಯಾದ ಬೆಲೆ ಸಿಗುತ್ತಿಲ್ಲ ಎಂದು ಹೇಳಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಲವಂತವಾಗಿ  ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿಸುವಂತಿಲ್ಲ ಎಂದು ಜಿಲ್ಲಾ ಪೊಲೀಸ್ ಆದೇಶಿಸಿದ್ರೂ,  ರೈತಪರ ಸಂಘಟನೆಗಳು  ಪಿಬಿ ರಸ್ತೆಯಲ್ಲಿ ಬಲವಂತವಾಗಿ ಅಂಗಡಿ ಮುಚ್ಚಿಸಲು ಯತ್ನಿಸಿದರು. ಈ ವೇಳ ಪೊಲೀಸರು ಮಧ್ಯೆ ಪ್ರವೇಶಿಸಿ ಪ್ರತಿಭನೆ ನಿರತರನ್ನು ವಶಕ್ಕೆಪಡೆದರು.

ಬಸ್ ನಿಲ್ದಾಣ್ಕಕೆ ಆಗಮಿಸಿದ ರೈತ ಹಾಗೂ ಕಾರ್ಮಿಕ ಸಂಘಟನೆಗಳು, ಪ್ರಯಾಣಿಕರು ಬಂದ್‍ಗೆ ಬೆಂಬಲಿಸುವಂತೆ ಬಸ್ ಚಾಲಕರಿಗೆ ಹಾಗೂ ಪ್ರಯಣಿಕರಿಗೆ ಮನವಿ ಮಾಡಿದರು. ಬಸ್ ನಿಲ್ದಾಣದ ಎರಡು ಕಡೆ ನಿಂತ ರೈತ ಸಂಘಟನೆಗಳು ಬಸ್‍ಗಳ ಸಂಚಾರಿಸದಂತೆ ನೋಡಿಕೊಂಡರು. ಇದರಿಂದ ಪ್ರಯಾಣಿಕರು ಸ್ವಲ್ಪ ಹೊತ್ತು ಪರದಾಡಿದರು.

bandh5

ಹೆದ್ದಾರಿ ತಡೆ ನಡೆಸಲು ಮುಂದಾದ ರೈತರ ಬಂಧನ: ಬೆಲೆ ಏರಿಕೆ ಖಂಡಿಸಿ ದೇಶವ್ಯಾಪಿ ಕರೆದಿರುವ ಬಂದ್‍ಗೆ ದಾವಣಗೆರೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಎಂದಿನಂತೆ ಬಸ್, ಆಟೋ ಸಂಚಾರ ಆರಂಭವಾಗಿದ್ದವು. ಇದಲ್ಲದೆ ಹೆದ್ದಾರಿ ತಡೆ ನಡೆಸಲು ಮುಂದಾದ ರೈತರನ್ನು ಪೊಲೀಸರು ಬಂಸಿದ್ದಾರೆ. ದಾವಣಗೆರೆ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ 4ನ್ನು ತಡೆದ ರೈತ ಸಂಘಟನೆಗಳು ಕೇಂದ್ರ ಸರ್ಕಾರದ ವಿರುದ್ಧ ಬೆಲೆ ಏರಿಕೆ ಖಂಡಿಸಿ ಆಕ್ರೋಶ ಹೊರಹಾಕಲಾಯಿತು.

ಮೂರು ಕೃಷಿ  ಕಾಯ್ದೆ ರದ್ದುಪಡಿಸಿಬೇಕು. ಬೆಂಬಲ ಬೆಲೆ ಖಾತ್ರಿ ಕಾನೂನು ಜಾರಿಗೆ ತರಬೇಕು. ವಿದ್ಯುತ್ ಖಾಸಗಿಕರಣ ನಿಲ್ಲಿಸಬೇಕು. ಕಬ್ಬಿಗೆ ಮೌಲ್ಯಾಧಾರಿತ ಬೆಲೆ ನೀಡಬೇಕು. ಇದಲ್ಲದೆ ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ಬೆಲೆ ಏರಿಕೆ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಮೊಳಗಿಸಿದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *