ನಾಳೆ ದಾವಣಗೆರೆ ಬಂದ್ ; ಬಲವಂತವಾಗಿ ಶಾಲಾ, ಕಾಲೇಜು, ಸರ್ಕಾರಿ, ಖಾಸಗಿ ಸಂಸ್ಥೆ ಅಂಗಡಿ ಮುಂಗಟ್ಟು ಮುಚ್ಚಿಸುವಂತಿಲ್ಲ; ಜಿಲ್ಲಾ ಪೊಲೀಸ್

ದಾವಣಗೆರೆ: ದಾವಣಗೆರೆ ಜಿಲ್ಲೆ ರೈತರ ಜೀವನಾಡಿ ಭದ್ರಾ ಜಲಾಶಯ (Bhadra dam) ಬಲ ದಂಡೆ ನಾಲೆ ಸೀಳಿ ಚಿತ್ರದುರ್ಗ, ಚಿಕ್ಕ‌ಮಗಳೂರು ಜಿಲ್ಲೆಯ ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆ ವಿರೋಧಿಸಿ ಬಿಜೆಪಿ ಮತ್ತು ರೈತಪರ ಸಂಘನೆಗಳು ನಾಳೆ (ಜೂ.28) ದಾವಣಗೆರೆ ಬಂದ್ ಗೆ (Davangere bandh) ಕರೆ ನೀಡಿದ್ದಾರೆ.

ಬೆಳಗ್ಗೆ 6ರಿಂದ ದಾವಣಗೆರೆ ಬಂದ್

ಭದ್ರಾ ಬಲದಂಡೆ ನಾಲೆಯ ಅವೈಜ್ಞಾನಿಕ ಕಾಮಗಾರಿ ವಿರೋಧಿಸಿ ಇಂದು (ಜೂ.27) ಬಿಜೆಪಿ ನಾಯಕರು ಬೃಹತ್ ಬೈಕ್ ರ‍್ಯಾಲಿ ನಡೆಸಿದರು. ನಾಳೆ (ಶನಿವಾರ) ಬೆಳಗ್ಗೆ 6:00 ಗಂಟೆ ಯಿಂದ ಸ್ವಯಂ ಪ್ರೇರಿತರಾಗಿ ದಾವಣಗೆರೆ ಬಂದ್ ಮಾಡಿ ರೈತ ಬಾಂಧವರಿಗೆ ಬೆಂಬಲಿಸಲು ಕರೆ ನೀಡಿದರು.

ಬಂದ್ ಗೆ ಕಾರಣ ಏನು..?

ಶನಿವಾರದಂದು ಬೆಳಗ್ಗೆ 06.00 ಗಂಟೆಯಿಂದ ಬಿಜೆಪಿ ರೈತ ಮೋರ್ಚಾ ದಾವಣಗೆರೆ ಜಿಲ್ಲೆ ಹಾಗೂ ಜಿಲ್ಲಾ ರೈತ ಒಕ್ಕೂಟದ ವತಿಯಿಂದ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಹಾಗೂ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಹಳ್ಳಿಗಳಿಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮುಖಾಂತರ ನೀರು ಬಿಡಲು ಭದ್ರಾ ಬಲದಂಡೆ ನಾಲೆ ಸೀಳಿ ಪೈಪ್ ಲೈನ್ ಕಾಮಗಾರಿ ನಡೆಯುತಗತಿದೆ. ಇದರಿಂದ ದಾವಣಗೆರೆ ಜಿಲ್ಲೆಯ ನಾಲೆಯ ಕೊನೆಭಾಗದ ರೈತರಿಗೆ ತೊಂದರೆಯಾಗುತ್ತದೆ. ಹಾಗಾಗಿ ಕೂಡಲೇ ಕಾಮಗಾರಿ ನಿಲ್ಲಿಸಿ ಯೋಜನೆಯನ್ನು ಕೈಬಿಡಬೇಕೆಂದು ಒತ್ತಾಯಿಸಿ ದಾವಣಗೆರೆ ನಗರ ಬಂದ್ ಗೆ ಕರೆ ನೀಡಲಾಗಿದೆ.

ಪೊಲೀಸ್ ಇಲಾಖೆ ನೀಡಿದ ಸೂಚನೆ ಏನು..?

ಬಂದ್ ಹಿನ್ನೆಲೆ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಬಂದ್ ಕರೆ ನೀಡಿದ ಆಯೋಜಕರು ಈ ಕೆಳಕಂಡ ಸೂಚನೆಗಳನ್ನು ಪಾಲಿಸುವುದು

1. ಬಂದ್ ಕರೆ ಸಂಬಂಧ ಘನ ಸರ್ವೋಚ್ಚ ನ್ಯಾಯಾಲಯದ ಆದೇಶಗಳನ್ನು ಉಲ್ಲಂಘನೆ ಮಾಡುವಂತಿಲ್ಲ

2. ಒತ್ತಾಯಪೂರ್ವಕವಾಗಿ ಅಥವಾ ಬಲವಂತವಾಗಿ ಯಾವುದೇ ಶಾಲಾ-ಕಾಲೇಜು, ಸರ್ಕಾರಿ/ಖಾಸಗಿ ಸಂಸ್ಥೇಗಳನ್ನು ಮತ್ತು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸುವಂತಿಲ್ಲ, ಒಂದು ವೇಳೆ ಪ್ರಯತ್ನಿಸಿದ್ದಲ್ಲಿ ಕಾನೂನು ರೀತ್ಯ ಕ್ರಮವಹಿಸಲಾಗುವುದು

3. ಬಂದ್ ಸಂಬಂಧ ಸಾರ್ವಜನಿಕರ ಜನ-ಜೀವನಕ್ಕೆ, ವಾಹನ ಮತ್ತು ಆಸ್ತಿ-ಪಾಸ್ತಿ ನಾಶ ಮಾಡುವಂತಿಲ್ಲ

4. ಯಾವುದೇ ರಸ್ತೆ ತಡೆಗೆ ಹಾಗೂ ವಾಹನ ಅಡ್ಡಗಟ್ಟುವುದಕ್ಕೆ ಅವಕಾಶ ಇಲ್ಲ ಮತ್ತು ಸಾರ್ವಜನಿಕ ಸಂಚಾರಕ್ಕೆ ಅಡ್ಡಿಪಡಿಸುವಂತಿಲ್ಲ ಒಂದು ವೇಳೆ ಪ್ರಯತ್ನಿಸಿದ್ದಲ್ಲಿ ಕಾನೂನು ರೀತ್ಯ ಕ್ರಮವಹಿಸಲಾಗುವುದು

5. ಯಾವುದೇ ಕಾರಣಕ್ಕೂ ತುರ್ತು ಸೇವೆಗಳಿಗೆ ಮತ್ತು ಅಗತ್ಯ ವಸ್ತುಗಳ ಸಾಗಾಣಿಕೆ ಅಡ್ಡಿಪಡಿಸುವಂತಿಲ್ಲ

6. ಬಂದ್ ಸಂಬಂಧ ರಸ್ತೆ / ಸಾರ್ವಜನಿಕ ಸ್ಥಳಗಳಲ್ಲಿ ಟಯರ್ಗಳನ್ನು ಹಾಕಿ ಹಚ್ಚಲು ಮತ್ತು ಯಾವುದೇ ಪ್ರತಿಕೃತಿಗಳನ್ನು ದಹನ ಮಾಡಲು ಅವಕಾಶವಿರುವುದಿಲ್ಲ

7. ಬಂದ್ ಹೆಸರಿನಲ್ಲಿ ಯಾರೇ ಆಗಲಿ ಕಾನೂನು ಕೈಗೆ ತೆಗೆದುಕೊಂಡರೆ ಅವರ ವಿರುದ್ಧ ಪೊಲೀಸ್ ಇಲಾಖೆ ಕಾನೂನು ರೀತ್ಯ ಕ್ರಮಕೈಗೊಳ್ಳಲಾಗುವುದಾಗಿ ತಿಳಿಸಿದೆ

8. ಬಂದ್ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳುಸುದ್ದಿ ಹರಡುವುದು, ಕಾನೂನು ಸುವ್ಯವಸ್ಥೆಗೆ ದಕ್ಕೆ ಬರುವಂತಹ ಪೋಸ್ಟ್ಗಳನ್ನು ಹಾಕುವುದಾಗಲೀ ಹಾಗು ಶೇರ್ ಮಾಡುವುದಾಗಲೀ ಕಂಡು ಬಂದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಾಲಾಗುವುದು

9. ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದೇ ಶಾಂತಿಯುತವಾಗಿ ಹಾಗೂ ಸೌಹಾರ್ಧಯುತವಾಗಿ ಪ್ರತಿಭಟನೆ ನಡೆಸುವುದು, ಯಾವುದೇ ಅಹಿತಕರ ಘಟನೆಗಳು ಕಂಡುಬಂದರೆ ತುರ್ತು ಸಹಾಯವಣಿ 112 ಗೆ ಕರೆ ಮಾಡುವುದು ಹಾಗೂ ಸ್ಥಳೀಯ ಪೊಲೀಸ್ ಠಾಣೆ/ಪೊಲೀಸ್ ಅಧಿಕಾರಿ ಸಿಬ್ಬಂದಿಗಳಿಗೆ ಮಾಹಿತಿ ನೀಡುವುದು

ದಾವಣಗೆರೆ ಬಂದ್ ಸಂಬಂಧ ಮುನ್ನೇಚ್ಚರಿಕಾ ಕ್ರಮವಾಗಿ ಜಿಲ್ಲಾ ಪೊಲೀಸ್ ವತಿಯಿಂದ, ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಅಧಿಕಾರಿ, ಸಿಬ್ಬಂದಿ, ಸಶಸ್ತ್ರ ತುಕಡಿಗಳನ್ನು ನಿಯೋಜಿಸಲಾಗಿರುತ್ತದೆ.

Dvgsuddi: ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Recent Posts