ಬಿಜೆಪಿ ಕರೆ ನೀಡಿದ್ದ ದಾವಣಗೆರೆ ಬಂದ್ ಗೆ ಮಿಶ್ರ‌ ಪ್ರತಿಕ್ರಿಯೆ; ಕಾಂಗ್ರೆಸ್ ನಿಂದಲೂ ಪ್ರತಿಭಟನೆ

ದಾವಣಗೆರೆ: ಭದ್ರಾ ಜಲಾಶಯ (bhadra dam) ಬಲದಂಡೆ ನಾಲೆ ಸೀಳಿ ಚಿತ್ರದುರ್ಗ, ಚಿಕ್ಕಮಗಳೂರು ಜಿಲ್ಲೆ ಗ್ರಾಮಗಳಿಗೆ ನೀರು ಪೂರೈಸುವ ಯೋಜನೆ ವಿರೋಧಿಸಿ ಜಿಲ್ಲಾ ಬಿಜೆಪಿ ರೈತ‌ ಮೋರ್ಚಾ ಹಾಗೂ ಜಿಲ್ಲಾ ರೈತ ಒಕ್ಕೂಟದ ನೇತೃತ್ವದಲ್ಲಿ ಇಂದು (ಜೂ.28) ಕರೆ ನೀಡಿದ್ದ ದಾವಣಗೆರೆ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬಿಜೆಪಿ ನಾಯಕರು ಬೆಳಗ್ಗೆಯಿಂದಲೇ ಪ್ರಮುಖ ರಸ್ತೆಯಲ್ಲಿ ತೆರಳಿ ಟೈರ್ ಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ನೆರೆಯ ಜಿಲ್ಲೆಗೆ ಕುಡಿಯುವ ನೀರು ಕೊಂಡ್ಯೊಯಲು ನಮ್ಮ ವಿರೋಧವಿಲ್ಲ. ಆದರೆ,‌ ಭದ್ರಾ ನಾಲೆ ಸೀಳಿ ನೀರು ತೆಗೆದುಕೊಂಡು‌ ಹೋಗುವುದಕ್ಕೆ ನಮ್ಮ ವಿರೋಧವಿದೆ. ಈ ಕಾಮಗಾರಿಯಿಂದ ನಾಲೆ ನೀರು ಸಹಜ ಹರಿವಿನಲ್ಲಿ ತಡೆ ಉಂಟಾಗಿ ಕೊನೆ ಭಾಗದ ರೈತರಿಗೆ ನೀರು ತಲುಪುವುದಿಲ್ಲ. ಹೀಗಾಗಿ ಸರ್ಕಾರ ಕೂಡಲೇ ಕಾಮಗಾರಿಗೆ ತಡೆ ನೀಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿ ಮೆರವಣಿಗೆ ನಡೆಸಿ, ಕೆಲ ಅಂಗಡಿಗಳನ್ನು ಮುಚ್ಚಿಸಿದರು. ಸಚಿವ ಎಂಪಿ ರೇಣುಕಾಚಾರ್ಯ, ಲೋಕಿಕೆರೆ ನಾಗರಾಜ್, ಅಜಯ್ ಕುಮಾರ್ , ಮಾಡಾಳ್ ಮಲ್ಲಿಕಾರ್ಜುನ, ಚಂದ್ರಶೇಖರ್ ಪೂಜಾರ್, ರೈತ‌ ಮುಖಂಡ ಸತೀಶ್ ಸೇರಿದಂತೆ ರೈತರು, ಬಿಜೆಪಿ ಕಾರ್ಯಕರ್ತರು ಬಂದ್ ಗೆ ಸಹಕರಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಶನಿವಾರ ಆಗಿದ್ದರಿಂದ ಶಾಲೆ,‌ಕಾಲೇಜ್ ಗಳು ಎಂದಿನಂತೆ ಬೆಳಗ್ಗೆಯೇ ಓಪನ್ ಆಗಿದ್ದವು. ಇನ್ನೂ ಅಂಗಡಿ-ಮುಂಗಟ್ಟುಗಳು, ಬಸ್ ಸಂಚಾರ ಬೆಳಗ್ಗೆ ವಿರಳವಾಗಿದ್ದವು. ಮಧ್ಯಾಹ್ನದ ನಂತರ ಸಹಜ ಸ್ಥಿತಿಯಲ್ಲಿತ್ತು. ಮಾರುಕಟ್ಟೆ, ವ್ಯಾಪಾರ ವ್ಯವಹಾರ ಮಧ್ಯಾಹ್ನದ ನಂತರ ಶುರುವಾಗಿತ್ತು.

ಬಿಜೆಪಿ ಬಂದ್ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಬಿಜೆಪಿ ಕರೆ ನೀಡಿದ್ದ ದಾವಣಗೆರೆ ಬಂದ್ ಗೆ ಪ್ರತಿಯಾಗಿ ಕಾಂಗ್ರೆಸ್ ಪಕ್ಷದ ನಾಯಕರು ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.ಬಿಜೆಪಿ ಅಧಿಕಾರಾವಧಿಯಲ್ಲಿಯೇ ಕಾಮಗಾರಿಗೆ ಅನುಮೋದನೆ ನೀಡಿದೆ. ಬಿಜೆಪಿ ನಾಯಕರು ಜನರಿಗೆ ತಪ್ಪು ಮಾಹಿತಿ ನೀಡಲು ಬಂದ್ ಕರೆ ನೀಡಿದ್ದಾರೆ ಎಂದರು.

ಪ್ರತಿಭಟನೆ ನಂತರವಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರಿಗೆ ಅಶೋಕ ರಸ್ತೆಯಲ್ಲೇ ತಡೆದ ಪೋಲಿಸರು, ವಶಕ್ಕೆ ಪಡೆದರು.

Dvgsuddi: ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Recent Posts