ದಾವಣಗೆರೆ: ಕರ್ನಾಟಕ ಗ್ರಾಮೀಣ ಬ್ಯಾಂಕ್ ವತಿಯಿಂದ ಬೃಹತ್ ರಿಟೇಲ್ ಸಾಲ ಮೇಳವನ್ನು ನ. 20ರಂದು ಕುವೆಂಪು ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆ ವರೆಗೆ ದಾವಣಗೆರೆ ಪ್ರಾದೇಶಿಕ ವ್ಯವಸ್ಥಾಪಕ ಪ್ರವೀಣ್ಕುಮಾರ್ ಪ್ರಭಾಕರ್ ಅಧ್ಯಕ್ಷತೆಯಲ್ಲಿ ಮೇಳ ನಡೆಯಲಿದೆ. ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕರಾದ ಎಸ್.ಕೆ. ಭಾಗ್ಯರೇಖಾ, ನಿಂಗೇಗೌಡ, ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ವ್ಯವಸ್ಥಾಪಕ ಜಿ.ಸಿ. ಪ್ರಕಾಶ್ ಹಾಗೂ
ಇಂಡಿಯನ್ ಕಾಂಕ್ರೀಟ್ ಇನ್ಸ್ಟಿಟ್ಯೂಟ್ನ ಕಾರ್ಯದರ್ಶಿ ಜಿ.ಬಿ. ಸುರೇಶ ಸೇರಿ ಇತರರು ಭಾಗವಹಿಸುವರು.
ನಗರದ ಪ್ರತಿಷ್ಠಿತ ವಾಹನ ಹಾಗೂ ಕಟ್ಟಡ ನಿರ್ಮಾಣ ಕಂಪನಿಗಳು ಭಾಗವಹಿಸಲಿದ್ದು, ಬ್ಯಾ೦ಕಿನ ಗ್ರಾಹಕರು, ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಹಿರಿಯ ವ್ಯವಸ್ಥಾಪಕರು ತಿಳಿಸಿದ್ದಾರೆ.



