ದಾವಣಗೆರೆ: ಸರಸ್ವತಿ ನಗರದಲ್ಲಿನ ಸಮಾಜ ಕಲ್ಯಾಣ ಇಲಾಖೆಯ ಬಾಲಕರ ವಿದ್ಯಾರ್ಥಿನಿಲಯ ಅವ್ಯವಸ್ಥೆ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ವಾರ್ಡನ್ ವಿರುದ್ಧ ಆಕ್ರೋಶ ಹೊರ ಹಾಕಿದ ವಿದ್ಯಾರ್ಥಿಗಳು, ಊಟ ಸರಿಯಾಗಿ ಕೊಡುತ್ತಿಲ್ಲ. ಈ ಬಗ್ಗೆ ದೂರು ನೀಡಿದ್ರೆ ವಾರ್ಡನ್ ಸ್ಥಳೀಯರನ್ನು ಕರೆಸಿ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿದರು.
ಹಾಸ್ಟೆಲ್ನಲ್ಲಿನ ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ಊಟ ನೀಡುತ್ತಿಲ್ಲ. ಇದನ್ನು ಕೇಳಿದ್ರೆ ಸ್ಥಳೀಯರನ್ನು ಕರೆಸಿ ಬೆದರಿಕೆ ಹಾಕುತ್ತಿದ್ದಾರೆ. ವಾರ್ಡನ್ ಅವರನ್ನು ವರ್ಗಾವಣೆ ಒತ್ತಾಯಿಸಿ ಘೋಷಣೆ ಕೂಗಿದರು.
ಕೆಲ ವಿದ್ಯಾರ್ಥಿಗಳು ಹಾಸ್ಟೆಲ್ಗೆ ಸೇರದ ಹೊರಗಿನ ವಿದ್ಯಾರ್ಥಿಗಳನ್ನು ಕರೆತಂದು ತಮ್ಮ ರೂಂನಲ್ಲಿ ವಸತಿ ನೀಡಿದ್ದಾರೆ. ಅಲ್ಲದೇ 5–6 ಜನ ಹೊರಗಿನ ವಿದ್ಯಾರ್ಥಿಗಳಿಗೆ ಊಟ ನೀಡಬೇಕು ಎಂದು ಒತ್ತಾಯ ಮಾಡುತ್ತಿದ್ದಾರೆ. ಹಾಸ್ಟೆಲ್ನಲ್ಲಿರುವ ವಿದ್ಯಾರ್ಥಿಗಳಿಗೆ ಊಟ, ವಸತಿ ನೀಡಬಹುದು. ಆದರೆ ಹೊರಗಿನವರಿಗೆ ಹೇಗೆ ನೀಡುವುದು. ಅಧಿಕ ಸಂಖ್ಯೆಯ ವಿದ್ಯಾರ್ಥಿಗಳಿಗೆ ಊಟ ನೀಡಲು ಅವಕಾಶ ಇಲ್ಲ. ಇದನ್ನು ತಿಳಿಸಿದರೆ ನನ್ನ ಮೇಲೆಯೇ ಹರಿಹಾಯುತ್ತಾರೆ. ಊಟ ಸರಿ ಇಲ್ಲ ಎಂಬ ನೆಪ ಮಾಡಿ ಪ್ರತಿಭಟನೆ ನಡೆಸುತ್ತಾರೆ. ವಿದ್ಯಾರ್ಥಿಯೊಬ್ಬ ನೀವು ಇಲ್ಲಿರಲು ಮಾಮೂಲಿ ನೀಡಬೇಕು ಎಂದು ಬೆದರಿಕೆ ಹಾಕುತ್ತಾನೆ ಎಂದು ಹಾಸ್ಟೆಲ್ ವಾರ್ಡನ್ ಹೇಳಿದರು.
ವಿದ್ಯಾರ್ಥಿಗಳ ಪ್ರತಿಭಟನೆ ವಿಷಯ ತಿಳಿದು ಕೆಟಿಜೆ ನಗರ ಪೊಲೀಸರು ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ರೇಷ್ಮಾ ಕೌಸರ್ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಆಲಿಸಿದರು. ಕೂಡಲೇ ಸಮಸ್ಯೆ ಬಗೆ ಹರಿಸುವ ಭರವಸೆ ನೀಡಿದರು.



