Connect with us

Dvgsuddi Kannada | online news portal | Kannada news online

ಏ.10ರಿಂದ ದಾವಣಗೆರೆಯಲ್ಲಿ ರಾಜ್ಯ ಮಟ್ಟದ ಬೆಂಚ್ ಪ್ರೆಸ್ ಸ್ಪರ್ಧೆ

ಪ್ರಮುಖ ಸುದ್ದಿ

ಏ.10ರಿಂದ ದಾವಣಗೆರೆಯಲ್ಲಿ ರಾಜ್ಯ ಮಟ್ಟದ ಬೆಂಚ್ ಪ್ರೆಸ್ ಸ್ಪರ್ಧೆ

ದಾವಣಗೆರೆ: ಗ್ರೂಪ್ ಆಫ್ ಐರನ್ ಗೆಮ್ಸ್ ಸಂಸ್ಥೆ  ಏ.10ರಿಂದ ಎರಡು ದಿನಗಳ ಕಾಲ ನಗರದ ಕುವೆಂಪು ಭವನದಲ್ಲಿ ಬೆಂಚ್ ಪ್ರೆಸ್  ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಈ ಸ್ಪರ್ಧೆ ಮೂಲಕ ಗೋವಾದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ  ಸ್ಪರ್ಧೆಗೆ ರಾಜ್ಯ  ತಂಡವನ್ನು ಆಯ್ಕೆ ಮಾಡಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಸ್ಪರ್ಧೆಯ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಅವರು, ಈ ಸ್ಪರ್ಧೆಯಲ್ಲಿ ದಾವಣಗೆರೆ ಸೇರಿದಂತೆ ವಿವಿಧ ಜಿಲ್ಲೆಯ ಸ್ಪರ್ಧಿಗಳು ಭಾಗವಹಿಸಲಿದ್ದಾರೆ. ಇಲ್ಲಿ ಉತ್ತಮ ಸಾಧನೆ ತೋರಿದವರನ್ನು ಜೂನ್ 27ರಿಂದ 30 ವರೆಗೆ ಗೋವಾದಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಸ್ಪರ್ಧೆಗೆ ರಾಜ್ಯ ತಂಡಕ್ಕೆ ಆಯ್ಕೆ ಮಾಡಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಮೀಸಲು ಪಡೆಯ ಡಿವೈಎಸ್ ಪಿ ಪ್ರಕಾಶ್, ಹಿರಿಯ ಕ್ರೀಡಾಪಟುಗಳಾದ ಸಬ್ ಇನ್ಸ್ ಪೆಕ್ಟರ್ ಶೈಲಜಾ, ದಾದಾಪೀರ್, ಮಹೇಶ್ವರಪ್ಪ, ಷಣ್ಮುಖಪ್ಪ, ಅಜ್ಜಯ್ಯ, ಪ್ರಶಾಂತ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top