ನವೆಂಬರ್ ಅಂತ್ಯದ‌ವರೆಗೆ ಭದ್ರಾ ನೀರು ಹರಿಸುವಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ ಮಾಡಿ ಮನವಿ ಸಲ್ಲಿಸಿದ ಶಾಸಕ ಬಿ.ಪಿ. ಹರೀಶ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಭದ್ರಾ ಜಲಾಶಯದ ಬಲದಂಡೆ ನಾಲೆಗೆ ನವೆಂಬರ್‌ ತಿಂಗಳು ಅಂತ್ಯದವರೆಗೆ ನೀರು ಹರಿಸುವಂತೆ ಶಾಸಕ ಬಿ.ಪಿ.ಹರೀಶ್ ಅವರು, ಬೆಂಗಳೂರಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

ಪ್ರಸ್ತುತ ವರ್ಷದಲ್ಲಿ ಮುಂಗಾರು ಮಳೆ ಸಂಪೂರ್ಣ ವಿಫಲ ವಾಗಿದ್ದು, ಹಿಂಗಾರು ಮಳೆಯೂ ಬಾರದೇ ರೈತರು ಕಂಗಾಲಾಗಿದ್ದಾರೆ. ದಾವಣಗೆರೆ ಜಿಲ್ಲೆಯ ಹಲವಾರು ಗ್ರಾಮದ ರೈತರು ಭತ್ತದ ಬೆಳೆ ನಾಟಿ ಮಾಡಿದ್ದು, ರೈತರಿಗೆ ನೀರಿನ ಅಭಾವ ಉಂಟಾಗಿದೆ‌. ಹೀಗಾಗಿ ಇನ್ನೂ 15 ದಿನಗಳ ಕಾಲ ನೀರು ಹರಿಸುವಂತೆ ಮನವಿ ಮಾಡಿದ್ದಾರೆ.

ಭದ್ರ ಅಚ್ಚುಕಟ್ಟು ಪ್ರದೇಶದ ರೈತರ ಹಿತದೃಷ್ಟಿಯಿಂದ ಈ ಮನವಿಸಸಲ್ಲಿಸಿದ್ದಾರೆ. ದಾವಣಗೆರೆ, ಹರಿಹರ, ಹಾಗೂ
ಮಲೇಬೆನ್ನೂರು ಭದ್ರ ಅಚ್ಚುಕಟ್ಟು ಪ್ರದೇಶದ‌ ರೈತರು ಈಗಾಗಲೇ ಭತ್ತ ನಾಟಿ ಮಾಡಿ ಇನ್ನು 15 ದಿನಗಳಲ್ಲಿ ಕಟಾವು ಮಾಡುತ್ತಾರೆ. ಈ ಹಂತದಲ್ಲಿ ಕಾಳುಕಟ್ಟುವ ಸ೦ದರ್ಭ ವಾಗಿರುವುದರಿಂದ ಈ ಭಾಗದ ನಾಲಾ ವ್ಯಾಪ್ತಿಯ ರೈತರಿಗೆ 15 ದಿನಗಳ ನೀರಿನ ಅಗತ್ಯವಿರುತ್ತದೆ. ಹೀಗಾಗಿ ಈ ಭಾಗದ ರೈತರ ಹಿತದೃಷ್ಟಿಯಿಂದ ನವೆಂಬರ್ ತಿಂಗಳ ಅಂತ್ಯದವರೆಗೆ ಭದ್ರಾ ಜಲಾಶಯ ದಿಂದ ನೀರು ಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲು ಒತ್ತಾಯಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *