ದಾವಣಗೆರೆ: ಭದ್ರಾ ಜಲಾಶಯ ರೈತರು ಬೇಸಿಗೆ ಹಂಗಾಮಿನಲ್ಲಿ ತೋಟ ಬೆಳೆ ಹೊರತುಪಡಿಸಿ, ಇತರೆ ಬೆಳೆ ಬೆಳೆಯದಂತೆ ನೀರಾವರಿ ಇಲಾಖೆ ಸೂಚನೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಕರ್ನಾಟಕ ನೀರಾವರಿ ನಿಗಮದ ಭದ್ರಾ ನಾಲಾ ದಾವಣಗೆರೆ ವ್ಯಾಪ್ತಿಗೆ ಒಳಪಡುವ ರೈತರು ಬೇಸಿಗೆ ಹಂಗಾಮಿನಲ್ಲಿ ತೋಟವನ್ನು ಹೊರತುಪಡಿಸಿ ಇತರೆ ಬೆಳೆ ಬೆಳೆಯದಂತೆ ನೀರಾವರಿ ಇಲಾಖೆ ಸಲಹೆ ನೀಡಿದೆ.

ಪ್ರಸ್ತುತ ಭದ್ರಾ ಜಲಾಶಯದಲ್ಲಿ ಲಭ್ಯವಿರುವ ನೀರಿನ ಪ್ರಮಾಣವನ್ನು ಗಣನೆಗೆ ತೆಗೆದುಕೊಂಡು ಜಲಾಶಯದ ಎಡದಂಡೆ ಮತ್ತು ಬ¯ದಂಡೆ ನಾಲೆಗಳಿಗೆ 2023-24 ನೇ ಸಾಲಿನ ಬೇಸಿಗೆ ಹಂಗಾಮಿನ ಬೆಳೆಗಳಿಗೆ ಭದ್ರಜಲಾಶಯದಿಂದ ನೀರನ್ನು ಹರಿಸಲಾಗುವುದು. ಈಗಾಗಲೇ ಬಲದಂಡೆ ಕಾಲುವೆಗೆ ಜನವರಿ 15 ರಿಂದ ನೀರನ್ನು ಹರಿಸಲಾಗಿದೆ.

ಬೆಳೆದು ನಿಂತಿರುವ ಬೆಳೆಗಳಿಗೆ ಮತ್ತು ಜನ ಜಾನುವಾರುಗಳಿಗೆ ಕುಡಿಯಲು ಹಾಗೂ ಬೆಳೆದು ನಿಂತ ತೋಟಗಳಿಗೆ ಮಾತ್ರ ನೀರನ್ನು ಹರಿಸಲಾಗುವುದು. ಅಚ್ಚುಕಟ್ಟಿನ ಪ್ರದೇಶದಲ್ಲಿ ಬೆಳೆದು ನಿಂತಿರುವ ತೋಟಗಾರಿಕೆ ಬೆಳೆಗಳನ್ನು ಹೊರತುಪಡಿಸಿ. ಭತ್ತ ಅಥವಾ ಇತರೆ ಯಾವುದೇ ಬೆಳೆಯನ್ನು ಈ ಹಂಗಾಮಿನಲ್ಲಿ ಬೆಳೆಯದಿರಲು ಭದ್ರಾ ನಾಲಾ ಕಾರ್ಯಪಾಲಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *