Connect with us

Dvgsuddi Kannada | online news portal | Kannada news online

ಭದ್ರಾ ಜಲಾಶಯ ‌ಬಲದಂಡೆ ನಾಲೆಯಿಂದ ಚಿಕ್ಕಮಗಳೂರು, ತರೀಕೆರೆ, ಹೊಸದುರ್ಗಕ್ಕೆ ನೀರು; ಯೋಜನೆ ಕೈಬಿಡಿ- ಶಾಸಕ ಆಗ್ರಹ

bhadra dam canal

ದಾವಣಗೆರೆ

ಭದ್ರಾ ಜಲಾಶಯ ‌ಬಲದಂಡೆ ನಾಲೆಯಿಂದ ಚಿಕ್ಕಮಗಳೂರು, ತರೀಕೆರೆ, ಹೊಸದುರ್ಗಕ್ಕೆ ನೀರು; ಯೋಜನೆ ಕೈಬಿಡಿ- ಶಾಸಕ ಆಗ್ರಹ

ದಾವಣಗೆರೆ: ಭದ್ರಾ ಬಲದಂಡೆ ನಾಲೆ ವಿಭಜನೆ ಮಾಡಿ ಚಿಕ್ಕಮಗಳೂರು, ತರೀಕೆರೆ, ಮತ್ತು ಹೊಸದುರ್ಗ ನಗರಕ್ಕೆ ಕುಡಿಯುವ ನೀರಿಗೆ 30 ಕ್ಯೂಸೆಕ್ ನೀರು ಹರಿಸಲು ರಾಜ್ಯ ಸರ್ಕಾರ ಯೋಜನೆ ರೂಪಿಸಿದೆ. ಕೂಡಲೇ ಈ ಯೋಜನೆ ಕೈಬಿಡುವಂತೆ ಹರಿಹರ ಶಾಸಕ ಬಿ.ಪಿ. ಹರೀಶ್ ಆಗ್ರಹಿಸಿದ್ದಾರೆ.

ಈ ಯೋಜನೆ ಕಾಮಗಾರಿಗಳನ್ನು ಸರ್ಕಾರ ಯಾರಿಗೂ ಮಾಹಿತಿ ನೀಡದೇ ಗೌಪ್ಯವಾಗಿ ಆರಂಭಿಸಲು ಸಿದ್ಧತೆ ನಡೆಸುತ್ತಿದೆ. ಜೂನ್ 23 ರಂದು ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಹೊಸದುರ್ಗ ಮತ್ತು ತರೀಕೆರೆ ಶಾಸಕರ ನೇತೃತ್ವದಲ್ಲಿ ಸಭೆ ಕರೆಯಲಾಗಿದೆ. ಇಲ್ಲಿ ಭದ್ರಾ ನಾಲೆ ವ್ಯಾಪ್ತಿಯ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಈ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಯಾವುದೇ ಕುಡಿಯುವ ನೀರಿಗೆ ನಮ್ಮ ವಿರೋಧವಿಲ್ಲ. ಆದರೆ, ಇಂತಹ ಯೋಜನೆಗೆ ನದಿಯಿಂದ ನೀರು ತೆಗೆದುಕೊಂಡು ಹೋಗಿಬೇಕೇ ಹೊರತು, ನೀರಾವರಿಗೆ ಬಳಸುವ ನಾಲೆಯಿಂದ ಹರಿಸುವುದಲ್ಲ ಎಂದರು. ಈ ಯೋಜನೆ ದಾವಣಗೆರೆ ಭಾಗದ ರೈತರ ಪಾಲಿಗೆ ಅಪಾಯ ಆಗಲಿದೆ. ಹರಿಹರ ತಾಲ್ಲೂಕುಗಳ ರೈತರು ಹೋರಾಟಕ್ಕೆ ಸಿದ್ಧರಾಗಿದ್ದು, ರೈತರು ಎಚ್ಚರಿಕೆಯಿಂದ ಇರಬೇಕು. ಈ ಬಗ್ಗೆ ಹೋರಾಟ ರೂಪಿಸಲಾಗುವುದು ಎಂದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top