ಭದ್ರಾ ಜಲಾಶಯ; ಈ ಬಾರಿ ಎರಡೂ ಬೆಳೆಗೆ ನೀರು ಸಿಗಲಿದೆ; ಜಿಲ್ಲಾ ಉಸ್ತುವಾರಿ ಸಚಿವ ಎಸ್.‌ಎಸ್. ಮಲ್ಲಿಕಾರ್ಜುನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಈ ಬಾರಿ ಉತ್ತಮ ಮಳೆಯಾಗಿದ್ದು, ಭದ್ರಾ ಜಲಾಶಯ ಭರ್ತಿಯಾಗಿದೆ. ಹೀಗಾಗಿ ಈ ವರ್ಷ ಎರಡು ಬೆಳೆಗೆ( ಮಳೆಗಾಲ-ಬೇಸಿಗೆ) ನೀರು ಸಿಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ತಿಳಿಸಿದರು.

ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ಮಲವಗೊಪ್ಪದಲ್ಲಿ ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಿ ಮಾತನಾಡಿದರು. ಕಳೆದ ವರ್ಷ ನೀರಿನ ಸಂಗ್ರಹ ಕೊರತೆ ಇತ್ತು. ಮುಂಗಾರು ಬೆಳೆಗೆ ನೀರು ಹರಿಸಲಾಗಿತ್ತು. ಈ ಬಾರಿ ನೀರಿನ ಸಂಗ್ರಹ ಹೆಚ್ಚಿದ್ದು, ಜಿಲ್ಲೆಯ ರೈತರು ಆತಂಕಪಡಬೇಕಿಲ್ಲ ಎಣಮದರು.

ಶಿವಮೊಗ್ಗ, ದಾವಣಗೆರೆ ಜಿಲ್ಲೆ ರೈತರ ನೀರಿನ ಮೂಲವಾಗಿರುವ ಭದ್ರಾ ನೀರರು, ರೈತರಿಗೆ ಒಳಿತಾಗಲಿ. ಈ ವರ್ಷ ಉತ್ತಮ ಇಳುವರಿಯಾಗಿ ಯೋಗ್ಯ ಬೆಳೆ ಕಾಣುವಂತಾಗಲಿ ಎಂದರು.

ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಮಾತನಾಡಿ , ಪ್ರತಿ ವರ್ಷವೂ ಜಲಾಶಯಗಳು ಇದೇ ರೀತಿಯ ಸಮೃದ್ಧತೆ ಕಾಣುವಂತಾಗಲಿ. ಅನ್ನದಾತರು ಸುಖ,ಸಂತೋಷದಿಂದ ಇರಲಿ ಎಂದರು.

ಶಾಸಕರಾದ ಡಿ.ಜಿ.ಶಾಂತನಗೌಡ, ಕೆ.ಎಸ್.ಬಸವಂತಪ್ಪ, ಬಸವರಾಜ್ ವಿ.ಶಿವಗಂಗಾ, ಲತಾ ಮಲ್ಲಿಕಾರ್ಜುನ್, ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್, ಜಿಪಂ ಸಿಇಒ ಸುರೇಶ್ ಬಿ.ಇಟ್ನಾಳ್, ಭದ್ರಾ ಅಧೀಕ್ಷಕ ಇಂಜಿನಿಯರ್ ಸುಜಾತಾ ಭಾಗಿಯಾಗಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *