Connect with us

Dvgsuddi Kannada | online news portal | Kannada news online

ಭದ್ರಾ ಡ್ಯಾಂ ನೀರು ನಂಬಿಕೊಂಡು ಭತ್ತ ನಾಟಿ; ನಾಲೆಗೆ ನೀರು‌ ನಿಲ್ಲಿಸದಂತೆ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಮನವಿ

IMG 20230920 072619

ಪ್ರಮುಖ ಸುದ್ದಿ

ಭದ್ರಾ ಡ್ಯಾಂ ನೀರು ನಂಬಿಕೊಂಡು ಭತ್ತ ನಾಟಿ; ನಾಲೆಗೆ ನೀರು‌ ನಿಲ್ಲಿಸದಂತೆ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಮನವಿ

ದಾವಣಗೆರೆ: ಭದ್ರಾ ಡ್ಯಾಂನ ಬಲ ಮತ್ತು ಎಡ ದಂಡೆ ಕಾಲುವೆಗಳಿಗೆ ಸತತ 100 ದಿನನೀರು ಹರಿಸುವ ವಿಚಾರವಾಗಿ ಬೆಂಗಳೂರಿನಲ್ಲಿ ಡಿಸಿಎಂ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ ಗೃಹ ಕಚೇರಿಯಲ್ಲಿ ದಾವಣಗೆರೆ, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರ ಸಭೆ ನಡೆಸಿದರು.

ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ಭದ್ರಾ ಜಲಾಶಯದಿಂದ ಅಚ್ಚುಕಟ್ಟು ಪ್ರದೇಶಕ್ಕೆ ಈ ಹಿಂದೆ ನಿರ್ಧರಿಸಿದ್ದಂತೆ 100 ದಿನ ಸತತವಾಗಿ ನೀರು ಬಿಡಬೇಕು. ಡ್ಯಾಂ ನೀರು ನಂಬಿಕೊಂಡು, ಅಚ್ಚುಕಟ್ಟು ರೈತರು ಭತ್ತ ನಾಟಿ ಮಾಡಿದ್ದು, ಅಚ್ಚುಕಟ್ಟು ರೈತರಿಗೆ ಯಾವುದೇ ಕಾರಣಕ್ಕೂ ತೊಂದರೆ ಆಗಬಾರದು ಎಂದು ದಾವಣಗೆರೆ ಜಿಲ್ಲೆಯ ಎಲ್ಲಾ ಶಾಸಕರ ನೇತೃತ್ವದಲ್ಲಿ ಮನವಿ ಮಾಡಿದರು.

ಸಭೆಯಲ್ಲಿ ಶಿವಮೊಗ್ಗ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಜಿಲ್ಲೆಯ ಶಾಸಕರಾದ ಹೊನ್ನಾಳಿ ಡಿ.ಜಿ.ಶಾಂತನಗೌಡ, ಹರಿಹರಬಿ.ಪಿ.ಹರೀಶ, ಮಾಯಕೊಂಡ ಕೆ.ಎಸ್.ಬಸವಂತಪ್ಪ, ಚನ್ನಗಿರಿ ಶಿವಗಂಗಾ ವಿ.ಬಸವರಾಜ, ಜಗಳೂರು ಬಿ.ದೇವೇಂದ್ರಪ್ಪ, ಹರಪನಹಳ್ಳಿ ಶಾಸಕರು, ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು, ನೀರಾವರಿ ಇಲಾಖೆ, ನಿಗಮದ ಅಧಿಕಾರಿಗಳು ಇದ್ದರು.

 

ದಾವಣಗೆರೆ: ಸೆ. 20 ರಿಂದ ಮುಂದಿನ 3 ತಿಂಗಳ ಡಿಎಲ್ ಸ್ಲಾಟ್ ಓಪನ್; ಬೇಕಾದ ದಿನಾಂಕ ಇಂದೇ ಕಾಯ್ದಿರಿಸಿಕೊಳ್ಳಿ…!

ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ಸೆ.21ರಂದು ಉದ್ಯೋಗ ಮೇಳ

ದಾವಣಗೆರೆ; ಕಾಲೇಜು ಹುಡುಗಿಯರನ್ನು ರೇಗಿಸುತ್ತಿದ್ದ‌ ಯುವಕನಿಗೆ ನಡು ರಸ್ತೆಯಲ್ಲಿ‌ಯೇ ಬಿತ್ತು ಧರ್ಮದೇಟು..!

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top