Connect with us

Dvgsuddi Kannada | online news portal | Kannada news online

ಭದ್ರಾ ಜಲಾಶಯ ನೀರಿನ ಕೊರತೆ; ಸೆ. 6ರ ಕಾಡಾ ಸಭೆಗೂ ಮುನ್ನ ನಾಳೆ ದಾವಣಗೆರೆಯಲ್ಲಿ ರೈತರು, ಜನಪ್ರತಿನಿಧಿಗಳ ಸಭೆ

images 87

ದಾವಣಗೆರೆ

ಭದ್ರಾ ಜಲಾಶಯ ನೀರಿನ ಕೊರತೆ; ಸೆ. 6ರ ಕಾಡಾ ಸಭೆಗೂ ಮುನ್ನ ನಾಳೆ ದಾವಣಗೆರೆಯಲ್ಲಿ ರೈತರು, ಜನಪ್ರತಿನಿಧಿಗಳ ಸಭೆ

ದಾವಣಗೆರೆ: ತೀವ್ರ ಮಳೆ ಕೊರತೆ ಹಿನ್ನೆಲೆ ಭದ್ರಾ ಜಲಾಶಯ ನಿರೀಕ್ಷಿತ ಪ್ರಮಾಣದಲ್ಲಿ ತುಂಬಿಲ್ಲ. ಆದರೆ, ಮುಂಗಾರು ಹಂಗಾಮಿಗೆ 100 ದಿನ ನೀರು ಬಿಡುವುದಾಗಿ ಕಾಡಾ ಘೋಷಣೆ ಮಾಡಿದ್ದರಿಂದ ಭದ್ರಾ ಅಚ್ಚುಕಟ್ಟು ರೈತರು ಭತ್ತ ನಾಟಿ ಮಾಡಿದ್ದಾರೆ. ಇದೀಗ ನೀರಿನ ಕೊರತೆ ಉಂಟಾಗಿದ್ದು, ತೋಟಗಾರಿಕೆ ಬೆಳೆ ಬೆಳೆಯುವ ರೈತರು ಬೇಸಿಗೆಗೆ ನೀರು ಅಗತ್ಯವಾಗಿದ್ದು ನಿಲ್ಲಿಸಿ ಒತ್ತಾಯಿಸಿದ್ರೆ, ಭತ್ತ ಬೆಳೆಯ ರೈತರು ಕೊಟ್ಟ ಮಾತಿನಂತೆ ನಿಂತರ 100 ದಿನ ನೀರು ಹರಿಸಿ ಎಂದು ಆಗ್ರಹಿಸುತ್ತಿದ್ದಾರೆ.

ಈ ಬಗ್ಗೆ ಚರ್ಚಿಸಲು ಸೆಪ್ಟಂಬರ್ 6 ರಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಕಾಡಾ ಸಭೆ ಕರೆದಿದ್ದು, ನೀರು ನಿರ್ವಹಣಾ ಸಮಿತಿಯು ಯಾವ ನಿರ್ಧಾರಕ್ಕೆ ಬರುತ್ತದೆ ಎಂಬ ಬಗ್ಗೆ ರೈತರ ಗಮನ ಕೇಂದ್ರಿಕೃತವಾಗಿದೆ. ಭದ್ರಾ ಜಲಾಶಯದಿಂದ ಆಗಸ್ಟ್ 10ರಿಂದ ನೀರು ಹರಿಸಲಾಗುತ್ತಿದೆ. ಇದಕ್ಕೂ ಮೊದಲು ಭಾರತೀಯ ರೈತ ಒಕ್ಕೂಟವು ದಾವಣಗೆರೆಯಲ್ಲಿ ಸೆಪ್ಟೆಂಬರ್‌ 5ಕ್ಕೆ ಸಭೆ ಕರೆದಿದೆ. ಮಾಜಿ ಸಚಿವ ಎ.ರವೀಂದ್ರನಾಥ್ ಅವರ ಅಧ್ಯಕ್ಷತೆಯಲ್ಲಿ ಸಭೆ‌ನಡೆಯಲಿದೆ. ಸೆಪ್ಟೆಂಬರ್‌ 5ರ ಮಧ್ಯಾಹ್ನ 12.30ಕ್ಕೆ ದಾವಣಗೆರೆಯ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ಈ ಸಭೆ ಕರೆಯಲಾಗಿದೆ.

ಶಿವಮೊಗ್ಗ, ಚನ್ನಗಿರಿ ಸೇರಿದಂತೆ ಹಲವೆಡೆ ಈಗಾಗಲೇ ಭದ್ರಾ ಡ್ಯಾಂನಿಂದ ನೀರು ಹರಿಸುವುದಕ್ಕೆ ವಿರೋಧ ವ್ಯಕ್ತವಾಗಿದೆ. ಪ್ರತಿಭಟನೆಗಳೂ ನಡೆಯುತ್ತಿವೆ.ಯಾವುದೇ ಕಾರಣಕ್ಕೂ ಪುನರ್ ಪರಿಶೀಲನೆ ಮಾಡಬಾರದು. ಈಗ ತೆಗೆದುಕೊಂಡಿರುವ ನಿರ್ಧಾರವೇ ಮುಂದುವರೆಸಬೇಕು ಎಂಬುದು ದಾವಣಗೆರೆ, ಹರಿಹರ, ಮಲೇಬೆನ್ನೂರು ಭಾಗದ ರೈತರ ಒತ್ತಾಯವಾಗಿದೆ.

ನೀರಾವರಿ ಇಲಾಖೆಯು ಮುಂಗಾರು ಹಂಗಾಮಿನ ಬೆಳೆಗಳಿಗೆ ಭದ್ರಾ ಜಲಾಶಯದ ಎಡದಂಡೆ ಮತ್ತು ಬಲದಂಡೆ ನಾಲೆ ಆನವೇರಿ ಶಾಖಾನಾಲೆ, ದಾವಣಗೆರೆ ಶಾಖಾ ನಾಲೆ, ಮಲೇಬೆನ್ನೂರು ಶಾಖಾನಾಲೆ ಹರಿಹರ ಮತ್ತು ಗೋಂದಿ ನಾಲೆಗಳಿಗೆ 2023-24ನೇ ಸಾಲಿನ ಭದ್ರಾ ಯೋಜನೆಯ ಅಚ್ಚುಕಟ್ಟು ವ್ಯಾಪ್ತಿಯ ಮುಂಗಾರು ಬೆಳೆಗಳಿಗೆ ಆಗಸ್ಟ್ 10ರಿಂದ 100 ದಿನಗಳ ಕಾಲ ನೀರು ಹರಿಸಲು ತೀರ್ಮಾನಿಸಲಾಗಿತ್ತು. ದಿನದಿಂದ ದಿನಕ್ಕೆ ಭದ್ರಾ ಜಲಾಶಯದಲ್ಲಿನ ನೀರಿನ ಮಟ್ಟ ಕುಸಿಯುತ್ತಿದೆ. ಸದ್ಯಕ್ಕೆ 163.5 ಅಡಿ ಇದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top