Connect with us

Dvgsuddi Kannada | online news portal | Kannada news online

ದಾವಣಗೆರೆ; ತುಂಗಭದ್ರಾ ನದಿಗೆ 1 ಟಿಎಂಸಿ ನೀರು ಬಿಡುಗಡೆ; ನದಿ ಪಾತ್ರದ ಜನರಿಗೆ ಎಚ್ಚರಿಕೆ

ದಾವಣಗೆರೆ

ದಾವಣಗೆರೆ; ತುಂಗಭದ್ರಾ ನದಿಗೆ 1 ಟಿಎಂಸಿ ನೀರು ಬಿಡುಗಡೆ; ನದಿ ಪಾತ್ರದ ಜನರಿಗೆ ಎಚ್ಚರಿಕೆ

ದಾವಣಗೆರೆ: ರಾಣೇಬೆನ್ನೂರು, ಬ್ಯಾಡಗಿ ಮತ್ತು ಹಿರೇಕೆರೂರು ಪಟ್ಟಣಗಳಿಗೆ ಮತ್ತು ಸುತ್ತಮುತ್ತಲಿನ ಗ್ರಾಮಗಳಿಗೆ ಕುಡಿಯುವ ನೀರಿಗಾಗಿ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ 1ಟಿ.ಎಂ.ಸಿ ನೀರನ್ನು ನಾಡಿದ್ದು ಏ..27 ರ ಬೆಳಿಗ್ಗೆ 6 ರಿಂದ ಬರುವ ಮೇ 9 ರ ಬೆಳಿಗ್ಗೆ 6 ಗಂಟೆಯವರೆಗೆ ಪ್ರತಿ ದಿನ ಸಾವಿರ‌ ಕ್ಯೂಸೆಕ್ ನಂತೆ ಬಿಡಲಾಗುವುದು.‌

ಈ ಅವಧಿಯಲ್ಲಿ ನದಿ ಪಾತ್ರದಲ್ಲಿ ಪ್ರಗತಿಯಲ್ಲಿರುವ ಕಾಮಗಾರಿ ಮಾಡುವುದನ್ನು, ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನಕರುಗಳನ್ನು ಮೇಯಿಸುವುದು ಮತ್ತು ತೋಟಗಾರಿಕೆಗೆ ಸಂಬಂಧಿಸಿದ ಕೆಲಸ ಮಾಡುವುದು ಇತ್ಯಾದಿಗಳನ್ನು ನಿಷೇಧಿಸಲಾಗಿದೆ.

ಸಾರ್ವಜನಿಕರು ಮತ್ತು ರೈತರು ನದಿ ದಂಡೆಯಲ್ಲಿ ಪಂಪ್ಸೆಟ್ ಅಳವಡಿಸುವುದು ಮತ್ತು ಅನಧಿಕೃತವಾಗಿ ನೀರೆತ್ತುವುದನ್ನು ನಿಷೇಧಿಸಲಾಗಿದೆ ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ಅಧೀಕ್ಷಕ ಇಂಜಿನಿಯರ್ ಎನ್. ಸುಜಾತ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top