ದಾವಣಗೆರೆ: ದಾವಣಗೆರೆ ಜಿಲ್ಲೆಯ ರೈತರ ಜೀವನಾಡಿ ಭದ್ರಾ ಜಲಾಶಯದ (bhadra dam) ಮಲೆನಾಡು ವ್ಯಾಪ್ತಿಯಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಡ್ಯಾಂ ಭರ್ತಿಗೆ ಕ್ಷಣಗಣನೆ ಆರಂಭವಾಗಿದೆ. ಇಂದು(ಅ.4) ಬೆಳಗ್ಗೆ ಹೊತ್ತಿಗೆ ಒಳ ಹರಿವು 11 ಸಾವಿರ ಕ್ಯೂಸೆಕ್ ನಷ್ಟಿದೆ. ನೀರಿನ ಮಟ್ಟ 181.3 ಅಡಿಗೆ ತಲುಪಿದೆ. ಈ ಮೂಲಕ ಭರ್ತಿಗೆ ಕೇವಲ 4.8 ಅಡಿ ಮಾತ್ರ ಬಾಕಿ ಇದ್ದು, ಅಚ್ಚುಕಟ್ಟು ರೈತರಲ್ಲಿ ಸಂತಸ ತಂದಿದೆ.
ಮುಂಗಾರು ಮಳೆ ಮೇ ತಿಂಗಳ ಕೊನೆ ವಾರದಲ್ಲಿಯೇ ಪ್ರವೇಶ ಪಡೆದರೂ ಜೂ.12ರಿಂದ ಮಲೆನಾಡು ಭಾಗದಲ್ಲಿ ಜೋರು ಮಳೆಯಾಗುತ್ತಿದೆ. ಭದ್ರಾ ಜಲಾಶಯ ಇಂದಿನ ( ಅ.4) ಒಳ ಹರಿವು 10,918 ಕ್ಯೂಸೆಕ್ ಇದೆ. ಕಳೆದ ವರ್ಷ ಇದೇ ದಿನ 180.0 ಅಡಿ ನೀರು ಇತ್ತು. ಈ ವರ್ಷ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಸೂಚನೆಯಂತೆ ಸಾಕಷ್ಟು ಮಳೆ ಸುದಿದೆ. ಹೀಗಾಗಿ ಈ ವರ್ಷ ಬೇಗನೇ ಡ್ಯಾಂ ತುಂಬಿದೆ.
ಭದ್ರಾ ಜಲಾಶಯ ಇಂದಿನ ನೀರಿನ ಮಟ್ಟ
- ದಿನಾಂಕ :04-8-2025
- ಒಟ್ಟು ನೀರಿನ ಸಾಮರ್ಥ್ಯ: 71.54 ಟಿಎಂಸಿ
- ಪ್ರಸ್ತುತ ನೀರಿನ ಮಟ್ಟ ; 65.677 ಟಿಎಂಸಿ
- ಗರಿಷ್ಠ ಮಟ್ಟ: 186 ಅಡಿ
- ಇಂದಿನ ಮಟ್ಟ: 181.0 ಅಡಿ
- ಒಳ ಹರಿವು :10,918 ಕ್ಯೂಸೆಕ್
- ಹೊರ ಹರಿವು : 3,962 ಕ್ಯೂಸೆಕ್
- ಕ್ರೆಸ್ಟ್ ಗೇಟ್ : 00 ಕ್ಯೂಸೆಕ್
- ಎಡ ದಂಡೆ : 00
- ಬಲ ದಂಡೆ : 2,650 ಕ್ಯೂಸೆಕ್
- ಕಳೆದ ವರ್ಷ ಈ ದಿನದ ನೀರಿನ ಮಟ್ಟ: 180.0 ಅಡಿ
- ಕಳೆದ ವರ್ಷದ ಇದೇ ದಿನ ಒಳಹರಿವು: 19,512 ಕ್ಯೂಸೆಕ್



