Connect with us

Dvgsuddi Kannada | online news portal | Kannada news online

ಭದ್ರಾ ಜಲಾಶಯ ಒಳಹರಿವು ಮತ್ತಷ್ಟು ಏರಿಕೆ; ಜು.22ರ ನೀರಿನ ಮಟ್ಟ166.6 ಅಡಿ; ಒಳಹರಿವು 25,367 ಕ್ಯೂಸೆಕ್

ದಾವಣಗೆರೆ

ಭದ್ರಾ ಜಲಾಶಯ ಒಳಹರಿವು ಮತ್ತಷ್ಟು ಏರಿಕೆ; ಜು.22ರ ನೀರಿನ ಮಟ್ಟ166.6 ಅಡಿ; ಒಳಹರಿವು 25,367 ಕ್ಯೂಸೆಕ್

ದಾವಣಗೆರೆ: ಭದ್ರಾ ಜಲಾಶಯ ವ್ಯಾಪ್ತಿಯ ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆ ಅಬ್ಬರ ಮತ್ತೆ ಮುಂದುವರೆದಿದೆ. ಇದರಿಂದ ಒಳ ಹರಿವು ಮತ್ತೆ ಏರಿಕೆ ಕಂಡಿದೆ. ಇಂದು (ಜು.22) 25,367 ಕ್ಯೂಸೆಕ್ ಒಳ ಹರಿವಿದ್ದು, ನಿನ್ನೆ (ಜು.21)23,674, ಜು.20ರಂದು 46,876 ಕ್ಯೂಸೆಕ್ ಇತ್ತು. ನಿನ್ನೆಗೆ ಹೋಲಿಸಿದ್ರೆ 2 ಸಾವಿರ ಕ್ಯೂಸೆಕ್ ನಷ್ಟು ಒಳ‌ಹರಿವು ಇಳಿಕೆಯಾಗಿದೆ. ಆದರೆ, ಕಳೆದ 7 ದಿನದಲ್ಲಿ 25.2 ಅಡಿ ನೀರು ಹೆಚ್ಚಳವಾಗಿದೆ. ಜು‌15 ರಂದು 141 ಅಡಿ ಇದ್ದ ನೀರು, ಇಂದು 166.6 ಅಡಿಗೆ ಏರಿಕೆಯಾಗಿದೆ. ಇದೇ ರೀತಿ ಮುಂದುವರೆದ್ರೆ ತಿಂಗಳಾಂತ್ಯಕ್ಕೆ ಡ್ಯಾಂ ಭರ್ತಿ ಸಮೀಪ ಬರಲಿದೆ. ಕಳೆದ ವರ್ಷ ಇದೇ ದಿನ 10351 ಕ್ಯೂಸೆಕ್ ಒಳ‌‌ಹರಿವು ಇತ್ತು. 144’1 ಅಡಿ ಮಾತ್ರ ನೀರು ಸಂಗ್ರಹವಾಗಿತ್ತು.

ಭದ್ರಾ ಡ್ಯಾಂ ಒಳಹರಿವು ಹೆಚ್ಚಳದಿಂದ ಅಚ್ಚುಕಟ್ಟು ವ್ಯಾಪ್ತಿಯ ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ ಜಿಲ್ಲೆಯ ರೈತರಲ್ಲಿ ಸಂತಸ ಮನೆ ಮಾಡಿದೆ. ಅದರಲ್ಲೂ ಭದ್ರಾವತಿ, ಹೊನ್ನಾಳಿ, ಹರಿಹರ, ದಾವಣಗೆರೆ ಭಾಗದ ಭತ್ತ ಬೆಳೆಗಾರಲ್ಲಿ ಕೊನೆ ಗಳಿಗೆಯಲ್ಲಿ ಭತ್ತ ನಾಟಿ ಮಾಡುವ ಭರವಸೆ ಹುಟ್ಟಿದೆ. ತುಂಗಭದ್ರಾ ನದಿ ಸಹ ಉಕ್ಕಿ ಹರಿಯುತ್ತದೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ, ಹರಿಹರ ಭಾಗದಲ್ಲಿ ತುಂಗಭದ್ರಾ ನದಿ ಹಾಯ್ದು ಹೋಗುತ್ತಿದ್ದು, ಈ ಭಾಗದಲ್ಲಿ ಭತ್ತ ನಾಟಿಗೆ ಭರದ ಸಿದ್ಧತೆ ನಡೆಯುತ್ತಿದೆ.

ಭದ್ರಾ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಗೆ ಬರುವ ದಾವಣಗೆರೆ ಜಿಲ್ಲೆಯಲ್ಲಿ 65,847 ಹೆಕ್ಟೇರ್‌ ಪ್ರದೇಶದಲ್ಲಿ ಭತ್ತ ಬೆಳೆಯಲಾಗುತ್ತಿದೆ. ಈಗ ಭದ್ರಾ ಜಲಾಶಯದ ನೀರಿನ ಮಟ್ಟ ದಿನದಿಂದ ದಿನಕ್ಕೆ ಏರಿಕೆಯಾಗಿರುವುದರಿಂದ ನಾಲೆಗೆ ನೀರು ಹರಿಸುವ ಸಂಭವ ಇದೆ. ಈ ಹಿನ್ನೆಲೆ ಅಚ್ಚುಕಟ್ಟು ರೈತರು, ಭತ್ತದ ಸಸಿ ಮಡಿ ಮಾಡುವ ಕಾರ್ಯ ಭರದಿಂದ ಸಾಗಿದೆ. ಬೋರ್ ವೆಲ್ ಇರುವವರು ಈಗಾಗಲೇ ಭತ್ತ ನಾಟಿಗೆ ಸಿದ್ಧತೆಯಲ್ಲಿ ತೊಡಗಿದ್ದಾರೆ. ಭದ್ರಾ ನಾಲೆಯ ನೀರು ಅವಲಂಭನೆ ಇರುವವರು ಬೋರ್ ನೀರಿಗೆ ಸಸಿ ಮಡಿ ಮಾಡುತ್ತಿದ್ದಾರೆ. ಭದ್ರಾ ಡ್ಯಾಂ ಭರ್ತಿಯಾಗಿ ಮುಂಗಾರು ಹಂಗಾಮಿನ ಭತ್ತದ ಬೆಳೆಗೆ ನೀರು ಸಿಗುವ ಸಂಭವ ಹೆಚ್ಚಿದೆ.

ಕಳೆದ ವರ್ಷದ ತೀವ್ರ ಬರಗಾಲದಿಂದ ಅತಿ ಕಡಿಮೆ ನೀರು ಸಂಗ್ರಹವಾಗಿತ್ತು. ಈ ಬಾರಿ ಭದ್ರಾ ಜಲಾಯಶ ವ್ಯಾಪ್ತಿಯಲ್ಲಿ ಮುಂಗಾರು ಪೂರ್ವ ಮಳೆ ಮತ್ತು ಮುಂಗಾರು ಮಳೆಯ ಉತ್ತಮ ಆರಂಭ ಪಡೆದಿತ್ತದರೂ, ನಂತರದ 20 ದಿನ ಸಂಪೂರ್ಣ ತಗ್ಗಿತ್ತು. ಈಗ ಕಳೆದ 15 ದಿನದಿಂದ ಭಾರೀ ಮಳೆಯಾಗುತ್ತಿದೆ. ಇದೇ ರೀತಿ ಮಳೆಯಾದರೆ ಈ ತಿಂಗಳಲ್ಲಿಯೇ ಡ್ಯಾಂ ತುಂಬಲಿದೆ.

ತರಿಕೇರಿ ಮತ್ತು ಭದ್ರಾವತಿ ಗಡಿ ಭಾಗದಲ್ಲಿರುವ ಲಕ್ಕವಳ್ಳಿಯ ಭದ್ರಾ ಜಲಾಶಯದ ಒಟ್ಟು ನೀರಿನ ಸಾಮರ್ಥ್ಯ 71.54 ಟಿಎಂಸಿ ಇದ್ದು, ಗರಿಷ್ಠ 186 ಅಡಿಯಾಗಿದೆ. ಇಂದಿನ (ಜು. 22) ನೀರಿನ ಮಟ್ಟ 166.6 ಅಡಿಯಷ್ಟಿದೆ. ಒಳ ಹರಿವು 25,367 ಕ್ಯೂಸೆಕ್‌ ನಷ್ಟಿದೆ.

  • ಭದ್ರಾ ಜಲಾಶಯ ನೀರಿನ ವಿವರ
  • ಒಟ್ಟು ನೀರಿನ ಸಾಮರ್ಥ್ಯ 71.54 ಟಿಎಂಸಿ
  • ಪ್ರಸ್ತುತ ನೀರಿನ ಮಟ್ಟ ; 49.244 ಟಿಎಂಸಿ
  • ಗರಿಷ್ಠ ಮಟ್ಟ: 186 ಅಡಿ
  • ಇಂದಿನ ಮಟ್ಟ: 166.6 ಅಡಿ
  • ಒಳ ಹರಿವು :25,367 ಕ್ಯೂಸೆಕ್ (ಜು.21ರಂದು
    23674 ಕ್ಯೂಸೆಕ್)
  • ಹೊರ ಹರಿವು : 193 ಕ್ಯೂಸೆಕ್
  • ಕಳೆದ ವರ್ಷ ಈ ದಿನದ ನೀರಿನ ಮಟ್ಟ: 144’1 ಅಡಿ
  • ಇದೇ ದಿನ ಕಳೆದ ವರ್ಷದ ಒಳಹರಿವು: 10, 351 ಕ್ಯೂಸೆಕ್

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top