Connect with us

Dvgsuddi Kannada | online news portal | Kannada news online

ಭದ್ರಾ ಜಲಾಶಯ: ನದಿಗೆ ಬಿಡುವ ನೀರಿನ ಪ್ರಮಾಣ ತಗ್ಗಿಸಲು ರೈತರ ಆಗ್ರಹ- ಇಂದಿನ ಒಳಹವು, ಹೊರ ಹರಿವು ಎಷ್ಟಿದೆ…?

bhadra dam dvgsuddi

ದಾವಣಗೆರೆ

ಭದ್ರಾ ಜಲಾಶಯ: ನದಿಗೆ ಬಿಡುವ ನೀರಿನ ಪ್ರಮಾಣ ತಗ್ಗಿಸಲು ರೈತರ ಆಗ್ರಹ- ಇಂದಿನ ಒಳಹವು, ಹೊರ ಹರಿವು ಎಷ್ಟಿದೆ…?

ದಾವಣಗೆರೆ: ಭದ್ರಾ ಜಲಾಶಯ ವ್ಯಾಪ್ತಿಯ ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಅಬ್ಬರ ತಗ್ಗಿದೆ. ಇಂದು (ಆ.7)7801 ಕ್ಯೂಸೆಕ್ ಒಳ ಹರಿವಿದೆ. ಒಳ ಹರಿವು ಕುಸಿತದಿಂದ ಆತಂಕಕ್ಕೆ ಒಳಗಾದ ರೈತರು ಜಲಾಶಯ ಗೇಟ್ ಗಳ ಮೂಲಕ ನದಿಗೆ ಹೆಚ್ಚಿನ ನೀರು ಬಿಡುವುದನ್ನು ಖಂಡಿಸಿದ್ದು, ನದಿಗೆ ಬಿಡುವ ನೀರು ಪ್ರಮಾಣ ತಗ್ಗಿಸಿ ಬೇಸಿಗೆ ವರೆಗೂ ನೀರು ಉಳಿಸಿಕೊಳ್ಳಲು ಅಚ್ಚುಕಟ್ಟು ರೈತರು ಆಗ್ರಹಿಸಿದ್ದಾರೆ.

ಇಂದಿನ ನೀರಿನ ಮಟ್ಟ 181ಅಡಿ ಇದೆ. ಎಡ ದಂಡೆ ನಾಲೆಗೆ 308 ಕ್ಯೂಸೆಕ್ ಮತ್ತು ಬಲ ದಂಡೆ ನಾಲೆಗೆ 2650 ಕ್ಯೂಸೆಕ್ ನೀರು ಹರಿಸಲಾಗುತ್ತಿದೆ. ಈ ಬಾರಿಯ ಮುಂಗಾರು ಹಂಗಾಮಿನಲ್ಲಿ 120 ದಿನ ನೀರು ಹರಿಸಲು ಕಾಡಾ ಸಭೆ ನಿರ್ಧಾರ ಕೈಗೊಳ್ಳಲಾಗಿದೆ. ಡ್ಯಾಂ ನಿಂದ ಗೇಟ್ ಗಳ ಮೂಲಕ 7223 ಕ್ಯೂಸೆಕ್‌ ನದಿಗೆ ನೀರು ಬಿಡಲಾಗುತ್ತಿದೆ.

ಕಳೆದ ವರ್ಷ ಇದೇ ದಿನ 6975 ಕ್ಯೂಸೆಕ್ ಒಳ‌‌ಹರಿವು ಇತ್ತು. 165’7 ಅಡಿ ಮಾತ್ರ ನೀರು ಸಂಗ್ರಹವಾಗಿತ್ತು. ಭದ್ರಾ ಡ್ಯಾಂ ಭರ್ತಿಯಿಂದ ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ ಜಿಲ್ಲೆಯ ರೈತರಲ್ಲಿ ಸಂತಸ ಮನೆ ಮಾಡಿದೆ. ಕಳೆದ ಬೇಸಿಗೆಯಲ್ಲಿ ನೀರಿಲ್ಲದೆ, ಅನುಭವಿಸಿದ ಕಷ್ಠ ನೆನೆದು ರೈತರು ಈಗಿನಿಂದಲೇ ಅಲರ್ಟ್ ಆದ ರೈತರು ನದಿಗೆ ನೀರು ಹರಿಸಿ ಪೋಲ್ ಮಾಡದಂತೆ ಜಲ ಸಂಪನ್ಮೂಲ ಇಲಾಖೆಗೆ ಮನವಿ ಮಾಡುತ್ತಿದ್ದಾರೆ.

ಭದ್ರಾವತಿ, ಚನ್ನಗಿರಿ, ಹೊನ್ನಾಳಿ, ಹರಿಹರ, ದಾವಣಗೆರೆ ಭಾಗದ ಭತ್ತ ಬೆಳೆಗಾರರಲ್ಲಿ ಕೊನೆ ಗಳಿಗೆಯಲ್ಲಿ ಭತ್ತ ನಾಟಿ ಮಾಡುವ ಅವಕಾಶ ಸಿಕ್ಕಂತಾಗಿದೆ. ಜಿಲ್ಲೆಯಲ್ಲಿ ತುಂಗಭದ್ರಾ ನದಿ ಸಹ ಉಕ್ಕಿ ಹರಿಯುತ್ತದೆ. ಜಿಲ್ಲೆಯ ಹೊನ್ನಾಳಿ, ಹರಿಹರ ಭಾಗದಲ್ಲಿ ತುಂಗಭದ್ರಾ ನದಿ ಹಾಯ್ದು ಹೋಗುತ್ತದೆ. ಈ ಭಾಗದಲ್ಲಿ ಭತ್ತ ನಾಟಿ ಕಾರ್ಯ ನಡೆಯುತ್ತಿದೆ.

ಭದ್ರಾ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಗೆ ಬರುವ ದಾವಣಗೆರೆ ಜಿಲ್ಲೆಯಲ್ಲಿ 65,847 ಹೆಕ್ಟೇರ್‌ ಪ್ರದೇಶದಲ್ಲಿ ಭತ್ತ ಬೆಳೆಯಲಾಗುತ್ತಿದೆ. ನಾಲೆಗೆ ನೀರು ಬಿಟ್ಟಿದ್ದರಿಂದ ರೈತರು ಭತ್ತ ನಾಟಿಗೆ ಸಕಲ ಸಿದ್ಧತೆಯಲ್ಲಿ ತೊಡಗಿದ್ದಾರೆ. ಕಳೆದ ವರ್ಷದ ತೀವ್ರ ಬರಗಾಲದಿಂದ ಅತಿ ಕಡಿಮೆ ನೀರು ಸಂಗ್ರಹವಾಗಿತ್ತು. ಈ ಬಾರಿ ಭದ್ರಾ ಜಲಾಶಯವ್ಯಾಪ್ತಿಯಲ್ಲಿ ಮುಂಗಾರು ಪೂರ್ವ ಮಳೆ ಮತ್ತು ಮುಂಗಾರು ಮಳೆಯ ಉತ್ತಮವಾಗಿ ಆಗಿದ್ದರಿಂದ ಕಳೆದ 30 ದಿನದಿಂದ ಭಾರೀ ಮಳೆಯಾಗಿ ಒಂದೇ ತಿಂಗಳಲ್ಲಿ ತುಂಬಿದೆ.

ತರಿಕೇರಿ ಮತ್ತು ಭದ್ರಾವತಿ ಗಡಿ ಭಾಗದಲ್ಲಿರುವ ಲಕ್ಕವಳ್ಳಿಯ ಭದ್ರಾ ಜಲಾಶಯದ ಒಟ್ಟು ನೀರಿನ ಸಾಮರ್ಥ್ಯ 71.54 ಟಿಎಂಸಿ ಇದ್ದು, ಗರಿಷ್ಠ 186 ಅಡಿಯಾಗಿದೆ. ಇಂದಿನ (ಆ. 7) ನೀರಿನ ಮಟ್ಟ 181 ಅಡಿಯಷ್ಟಿದೆ. ಒಳ ಹರಿವು 7801 ಕ್ಯೂಸೆಕ್‌ ನಷ್ಟಿದೆ.

  • ಭದ್ರಾ ಜಲಾಶಯ ನೀರಿನ ವಿವರ
  • ಒಟ್ಟು ನೀರಿನ ಸಾಮರ್ಥ್ಯ 71.54 ಟಿಎಂಸಿ
  • ಪ್ರಸ್ತುತ ನೀರಿನ ಮಟ್ಟ ; 64.279 ಟಿಎಂಸಿ
  • ಗರಿಷ್ಠ ಮಟ್ಟ: 186 ಅಡಿ
  • ಇಂದಿನ ಮಟ್ಟ: 181 ಅಡಿ
  • ಒಳ ಹರಿವು : 7801 ಕ್ಯೂಸೆಕ್
  • ಹೊರ ಹರಿವು : 7223 ಕ್ಯೂಸೆಕ್
  • ಎಡ ದಂಡೆ : 308 ಕ್ಯೂಸೆಕ್
  • ಬಲ ದಂಡೆ : 2650 ಕ್ಯೂಸೆಕ್
  • ಕಳೆದ ವರ್ಷ ಈ ದಿನದ ನೀರಿನ ಮಟ್ಟ: 165.7 ಅಡಿ
  • ಇದೇ ದಿನ ಕಳೆದ ವರ್ಷದ ಒಳಹರಿವು: 6975 ಕ್ಯೂಸೆಕ್

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top