ಭದ್ರಾ ಜಲಾಶಯ: ಸೆ.13ರ ನೀರಿನ ಮಟ್ಟ 184.1 ಅಡಿ; 7653 ಕ್ಯೂಸೆಕ್ ಒಳ ಹರಿವು; ಹೊರ ಹರಿವು 6449 ಕ್ಯೂಸೆಕ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಭದ್ರಾ ಜಲಾಶಯ ವ್ಯಾಪ್ತಿಯ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ. ಇಂದು (ಸೆ.13) ಭದ್ರಾ ಜಲಾಶಯದ ಒಳವು 7653 ಕ್ಯೂಸೆಕ್ ಇದ್ದು, 6449 ಕ್ಯೂಸೆಕ್ ಹೊರ ಹರಿವಿದೆ. ಇಂದಿನ ನೀರಿನ ಮಟ್ಟ 184.1 ಅಡಿ ಇದೆ. ಎಡ ದಂಡೆ ನಾಲೆಗೆ 380 ಕ್ಯೂಸೆಕ್ ಮತ್ತು ಬಲ ದಂಡೆ ನಾಲೆಗೆ 2650 ಕ್ಯೂಸೆಕ್ ನೀರು ಹರಿಸಲಾಗುತ್ತಿದೆ.

ಈ ಬಾರಿಯ ಮುಂಗಾರು ಹಂಗಾಮಿನಲ್ಲಿ 120 ದಿನ ನೀರು ಹರಿಸಲು ಕಾಡಾ ಸಭೆ ನಿರ್ಧಾರ ಕೈಗೊಳ್ಳಲಾಗಿದೆ. ಭದ್ರಾ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಗೆ ಬರುವ ದಾವಣಗೆರೆ ಜಿಲ್ಲೆಯಲ್ಲಿ 65,847 ಹೆಕ್ಟೇರ್‌ ಪ್ರದೇಶದಲ್ಲಿ ಭತ್ತ ಬೆಳೆಯಲಾಗುತ್ತಿದೆ. ಕಳೆದ ವರ್ಷ (2023) ಇದೇ ದಿನ (ಸೆ.13) 431 ಕ್ಯೂಸೆಕ್ ಒಳ‌‌ಹರಿವು ಇತ್ತು. 161’4¼ ಅಡಿ ಮಾತ್ರ ನೀರು ಸಂಗ್ರಹವಾಗಿತ್ತು.

ಭದ್ರಾ ಡ್ಯಾಂ ಭರ್ತಿಯಿಂದ ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ ಜಿಲ್ಲೆಯ ರೈತರಲ್ಲಿ ಸಂತಸ ಮನೆ ಮಾಡಿದೆ. ಜಿಲ್ಲೆಯಲ್ಲಿ ತುಂಗಭದ್ರಾ ನದಿ ಉಕ್ಕಿ ಹರಿಯುತ್ತದೆ. ಜಿಲ್ಲೆಯ ಹೊನ್ನಾಳಿ, ಹರಿಹರ ಭಾಗದಲ್ಲಿ ತುಂಗಭದ್ರಾ ನದಿ ಹಾಯ್ದು ಹೋಗುತ್ತಿದ್ದು, ಈ ಭಾಗದಲ್ಲಿಯೂ ಸಹ ಭತ್ತ ನಾಟಿ ಮುಗಿದಿದೆ.

ಭದ್ರಾವತಿ ಗಡಿ ಭಾಗದಲ್ಲಿರುವ ಲಕ್ಕವಳ್ಳಿಯ ಭದ್ರಾ ಜಲಾಶಯದ ಒಟ್ಟು ನೀರಿನ ಸಾಮರ್ಥ್ಯ 71.54 ಟಿಎಂಸಿ ಇದ್ದು, ಗರಿಷ್ಠ 186 ಅಡಿಯಾಗಿದೆ. ಇಂದಿನ (ಸೆ.11) ನೀರಿನ ಮಟ್ಟ 183.11 ಅಡಿಯಷ್ಟಿದೆ. ಒಳ ಹರಿವು ಕ್ಯೂಸೆಕ್‌ 7653 ನಷ್ಟಿದೆ.

  • ಭದ್ರಾ ಜಲಾಶಯ ನೀರಿನ ವಿವರ
  • ಒಟ್ಟು ನೀರಿನ ಸಾಮರ್ಥ್ಯ 71.54 ಟಿಎಂಸಿ
  • ಪ್ರಸ್ತುತ ನೀರಿನ ಮಟ್ಟ ; 69.139 ಟಿಎಂಸಿ
  • ಗರಿಷ್ಠ ಮಟ್ಟ: 186 ಅಡಿ
  • ಇಂದಿನ ಮಟ್ಟ: 184.1ಅಡಿ
  • ಒಳ ಹರಿವು : 7653 ಕ್ಯೂಸೆಕ್
  • ಹೊರ ಹರಿವು : 6449 ಕ್ಯೂಸೆಕ್
  • ಎಡ ದಂಡೆ : 308 ಕ್ಯೂಸೆಕ್
  • ಬಲ ದಂಡೆ : 2650 ಕ್ಯೂಸೆಕ್
  • ಕಳೆದ ವರ್ಷ ಈ ದಿನದ ನೀರಿನ ಮಟ್ಟ: 161’4¼ ಅಡಿ
  • ಇದೇ ದಿನ ಕಳೆದ ವರ್ಷದ ಒಳಹರಿವು: 431 ಕ್ಯೂಸೆಕ್
Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *