ದಾವಣಗೆರೆ: ದಾವಣಗೆರೆ ಜಿಲ್ಲೆಯ ರೈತರ ಜೀವನಾಡಿ ಭದ್ರಾ ಜಲಾಶಯದ (bhadra dam) ಮಲೆನಾಡು ವ್ಯಾಪ್ತಿಯಲ್ಲಿ ಮತ್ತೆ ಮುಂಗಾರು ಮಳೆ ಚುರುಕಾಗಿದೆ. ಇದರಿಂದ ಜಲಾಶಯ ಒಳಹರಿವು ಇಂದು (ಜೂ.24) ಬೆಳಗ್ಗೆ ಹೊತ್ತಿಗೆ 10,933 ಕ್ಯೂಸೆಕ್ ನಷ್ಟಿದೆ.
ಜೂ.12ರಿಂದ ಮಲೆನಾಡು ಭಾಗದಲ್ಲಿ ಜೋರು ಮಳೆಯಾಗುತ್ತಿದ್ದು, ಜಲಾಶಯ ಒಳ ಹರಿವು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಭದ್ರಾ ಜಲಾಶಯಶದ ಇಂದಿನ ( ಜೂ.24) ನೀರಿನಮಟ್ಟ 153.6 ಅಡಿ ಇದ್ದು, ಒಳ ಹರಿವು 10,933 ಕ್ಯೂಸೆಕ್ ಇದೆ. ಕಳೆದ ವರ್ಷ ಇದೇ ದಿನ 119.5ಅಡಿ ನೀರು ಇತ್ತು. ಈ ವರ್ಷ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಭದ್ರಾ ಜಲಾಶಯ ಬೇಗನೇ ತುಂಬುವ ಆಶಾಭಾವನೆಯನ್ನು ರೈತರು ಹೊಂದಿದ್ದಾರೆ.
ಭದ್ರಾ ಜಲಾಶಯ ಇಂದಿನ ನೀರಿನ ಮಟ್ಟ
- ದಿನಾಂಕ :24-06-2025
- ಒಟ್ಟು ನೀರಿನ ಸಾಮರ್ಥ್ಯ: 71.54 ಟಿಎಂಸಿ
- ಪ್ರಸ್ತುತ ನೀರಿನ ಮಟ್ಟ ; 37,160 ಟಿಎಂಸಿ
- ಗರಿಷ್ಠ ಮಟ್ಟ: 186 ಅಡಿ
- ಇಂದಿನ ಮಟ್ಟ: 153.6 ಅಡಿ
- ಒಳ ಹರಿವು : 10,933 ಕ್ಯೂಸೆಕ್
- ಹೊರ ಹರಿವು : 1,280ಕ್ಯೂಸೆಕ್
- ಎಡ ದಂಡೆ : 00 ಕ್ಯೂಸೆಕ್
- ಬಲ ದಂಡೆ : 00 ಕ್ಯೂಸೆಕ್
- ಕಳೆದ ವರ್ಷ ಈ ದಿನದ ನೀರಿನ ಮಟ್ಟ: 119.5ಅಡಿ
- ಕಳೆದ ವರ್ಷದ ಇದೇ ದಿನ ಒಳಹರಿವು: 782 ಕ್ಯೂಸೆಕ್
ಮುಂಗಾರು ಮಳೆ ಪ್ರಾರಂಭವಾಗಿ 20 ದಿನದಲ್ಲಿಯೇ ಭದ್ರಾ ಜಲಾಶಯ ನೀರಿನ ಮಟ್ಟ 150 ಅಡಿ ದಾಟಿದ್ದು, ರೈತರಲ್ಲಿ ಸಂತಸ ತಂದಿದೆ.