ದಾವಣಗೆರೆ: ದಾವಣಗೆರೆ ಜಿಲ್ಲೆಯ ರೈತರ ಜೀವನಾಡಿ ಭದ್ರಾ ಜಲಾಶಯದ (bhadra dam) ಮಲೆನಾಡು ವ್ಯಾಪ್ತಿಯಲ್ಲಿ ಮಳ ಪ್ರಮಾಣ ಸ್ವಲ್ಪ ತಗ್ಗಿದೆ. ನಿನ್ನೆ (ಜು.5) 21 ಸಾವಿರ ಕ್ಯೂಸೆಕ್ ನಷ್ಟಿದ್ದ ಒಳಹರಿವು, ಇಂದು (ಜು.6) 18,391 ಕ್ಯೂಸೆಕ್ ನಷ್ಟಿದೆ. ಮುಂಗಾರು ಮಳೆ ಪ್ರಾರಂಭವಾಗಿ ಒಂದುವರೆ ತಿಂಗಳಲ್ಲಿಯೇ ಭದ್ರಾ ಜಲಾಶಯ ನೀರಿನ ಮಟ್ಟ 170 ಅಡಿಗೆ ತಲುಪಿದೆ. ಈ ಮೂಲಕ ಭರ್ತಿಗೆ ಕೇವಲ 16 ಅಡಿ ಮಾತ್ರ ಬಾಕಿ ಇದೆ. ಇದು ರೈತರಲ್ಲಿ ಸಂತಸ ತಂದಿದೆ.
ಮುಂಗಾರು ಮಳೆ ಮೇ ಕೊನೆ ವಾರದಲ್ಲಿಯೇ ಪ್ರವೇಶ ಪಡೆದರೂ ಜೂ.12ರಿಂದ ಮಲೆನಾಡು ಭಾಗದಲ್ಲಿ ಜೋರು ಮಳೆಯಾಗುತ್ತಿದೆ. ಭದ್ರಾ ಜಲಾಶಯ ಇಂದಿನ ( ಜು.6) ನೀರಿನಮಟ್ಟ 169.6 ಅಡಿ ಇದ್ದು, ಒಳ ಹರಿವು 18,391 ಕ್ಯೂಸೆಕ್ ಇದೆ. ಕಳೆದ ವರ್ಷ ಇದೇ ದಿನ 130.7 ಅಡಿ ನೀರು ಇತ್ತು. ಈ ವರ್ಷ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಭದ್ರಾ ಜಲಾಶಯ ಬೇಗನೇ ತುಂಬುವ ಆಶಾಭಾವನೆಯನ್ನು ರೈತರು ಹೊಂದಿದ್ದಾರೆ.
ಭದ್ರಾ ಜಲಾಶಯ ಇಂದಿನ ನೀರಿನ ಮಟ್ಟ
- ದಿನಾಂಕ :06-07-2025
- ಒಟ್ಟು ನೀರಿನ ಸಾಮರ್ಥ್ಯ: 71.54 ಟಿಎಂಸಿ
- ಪ್ರಸ್ತುತ ನೀರಿನ ಮಟ್ಟ ; 52,360 ಟಿಎಂಸಿ
- ಗರಿಷ್ಠ ಮಟ್ಟ: 186 ಅಡಿ
- ಇಂದಿನ ಮಟ್ಟ: 169.6 ಅಡಿ
- ಒಳ ಹರಿವು :18,391 ಕ್ಯೂಸೆಕ್
- ಹೊರ ಹರಿವು : 5,197 ಕ್ಯೂಸೆಕ್
- ಎಡ ದಂಡೆ : 00 ಕ್ಯೂಸೆಕ್
- ಬಲ ದಂಡೆ : 00 ಕ್ಯೂಸೆಕ್
- ಕಳೆದ ವರ್ಷ ಈ ದಿನದ ನೀರಿನ ಮಟ್ಟ: 130.7 ಅಡಿ
- ಕಳೆದ ವರ್ಷದ ಇದೇ ದಿನ ಒಳಹರಿವು: 7, 736 ಕ್ಯೂಸೆಕ್