ದಾವಣಗೆರೆ: ದಾವಣಗೆರೆ ಜಿಲ್ಲೆಯ ರೈತರ ಜೀವನಾಡಿ ಭದ್ರಾ ಜಲಾಶಯದ (bhadra dam) ಮಲೆನಾಡು ವ್ಯಾಪ್ತಿಯಲ್ಲಿ ಮಳೆ ಸ್ವಲ್ಪ ತಗ್ಗಿದೆ. ಇಂದು(ಜು.20) ಬೆಳಗ್ಗೆ ಹೊತ್ತಿಗೆ 10,508 ಕ್ಯೂಸೆಕ್ ನಷ್ಟಿದೆ. ಮುಂಗಾರು ಮಳೆ ಪ್ರಾರಂಭವಾಗಿ ಎರಡು ತಿಂಗಳಲ್ಲಿಯೇ ಭದ್ರಾ ಜಲಾಶಯ ನೀರಿನ ಮಟ್ಟ 179.1 ಅಡಿಗೆ ತಲುಪಿದೆ. ಈ ಮೂಲಕ ಭರ್ತಿಗೆ ಕೇವಲ 6.11 ಅಡಿ ಮಾತ್ರ ಬಾಕಿ ಇದೆ. ಇದು ಅಚ್ಚುಕಟ್ಟು ರೈತರಲ್ಲಿ ಸಂತಸ ತಂದಿದೆ.
ಮುಂಗಾರು ಮಳೆ ಮೇ ಕೊನೆ ವಾರದಲ್ಲಿಯೇ ಪ್ರವೇಶ ಪಡೆದರೂ ಜೂ.12ರಿಂದ ಮಲೆನಾಡು ಭಾಗದಲ್ಲಿ ಜೋರು ಮಳೆಯಾಗುತ್ತಿದೆ. ಭದ್ರಾ ಜಲಾಶಯ ಇಂದಿನ ( ಜು.17) ನೀರಿನ ಮಟ್ಟ 179.1 ಅಡಿ ಇದ್ದು, ಒಳ ಹರಿವು 10,508 ಕ್ಯೂಸೆಕ್ ಇದೆ. ಕಳೆದ ವರ್ಷ ಇದೇ ದಿನ 162.3 ಅಡಿ ನೀರು ಇತ್ತು. ಈ ವರ್ಷ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಸೂಚನೆಯಂತೆ ಸಾಕಷ್ಟು ಮಳೆ ಸುದಿದೆ. ಹೀಗಾಗಿ ಈ ವರ್ಷ ಬೇಗನೇ ಡ್ಯಾಂ ತುಂಬಿದೆ.
ಭದ್ರಾ ಜಲಾಶಯ ಇಂದಿನ ನೀರಿನ ಮಟ್ಟ
- ದಿನಾಂಕ :20-7-2025
- ಒಟ್ಟು ನೀರಿನ ಸಾಮರ್ಥ್ಯ: 71.54 ಟಿಎಂಸಿ
- ಪ್ರಸ್ತುತ ನೀರಿನ ಮಟ್ಟ ; 63,094 ಟಿಎಂಸಿ
- ಗರಿಷ್ಠ ಮಟ್ಟ: 186 ಅಡಿ
- ಇಂದಿನ ಮಟ್ಟ: 179.1 ಅಡಿ
- ಒಳ ಹರಿವು :10,508 ಕ್ಯೂಸೆಕ್
- ಹೊರ ಹರಿವು : 5,971 ಕ್ಯೂಸೆಕ್
- ಕ್ರೆಸ್ಟ್ ಗೇಟ್ : 32,62 ಕ್ಯೂಸೆಕ್
- ಎಡ ದಂಡೆ : 00 ಕ್ಯೂಸೆಕ್
- ಬಲ ದಂಡೆ : 00 ಕ್ಯೂಸೆಕ್
- ಕಳೆದ ವರ್ಷ ಈ ದಿನದ ನೀರಿನ ಮಟ್ಟ: 162.3 ಅಡಿ
- ಕಳೆದ ವರ್ಷದ ಇದೇ ದಿನ ಒಳಹರಿವು: 46,876 ಕ್ಯೂಸೆಕ್



