ದಾವಣಗೆರೆ: ದಾವಣಗೆರೆ ಜಿಲ್ಲೆಯ ರೈತರ ಜೀವನಾಡಿ ಭದ್ರಾ ಜಲಾಶಯದ (bhadra dam) ಮಲೆನಾಡು ವ್ಯಾಪ್ತಿಯಲ್ಲಿ ಭಾರೀ ಮಳೆ ಅಬ್ಬರ ಮುಂದುವರೆದಿದೆ. ಡ್ಯಾಂ ಭರ್ತಿಗೆ ಕ್ಷಣಗಣನೆ ಆರಂಭವಾಗಿದೆ. ಇಂದು(ಜು.27) ಬೆಳಗ್ಗೆ ಹೊತ್ತಿಗೆ ಒಳ ಹರಿವು 39 ಸಾವಿರ ಕ್ಯೂಸೆಕ್ ನಷ್ಟಿದೆ. ಒಳ ಹರಿವಿನ ಪ್ರಮಾಣದಷ್ಟೇ ನೀರು ಹೊರ ಹರಿವಿದೆ. ಮುಂಗಾರು ಮಳೆ ಪ್ರಾರಂಭವಾಗಿ ಎರಡು ತಿಂಗಳಲ್ಲಿಯೇ ಭದ್ರಾ ಜಲಾಶಯ ನೀರಿನ ಮಟ್ಟ 180.6 ಅಡಿಗೆ ತಲುಪಿದೆ. ಈ ಮೂಲಕ ಭರ್ತಿಗೆ ಕೇವಲ 5 ಅಡಿ ಮಾತ್ರ ಬಾಕಿ ಇದೆ. ಇದು ಅಚ್ಚುಕಟ್ಟು ರೈತರಲ್ಲಿ ಸಂತಸ ತಂದಿದೆ.
ಮುಂಗಾರು ಮಳೆ ಮೇ ತಿಂಗಳ ಕೊನೆ ವಾರದಲ್ಲಿಯೇ ಪ್ರವೇಶ ಪಡೆದರೂ ಜೂ.12ರಿಂದ ಮಲೆನಾಡು ಭಾಗದಲ್ಲಿ ಜೋರು ಮಳೆಯಾಗುತ್ತಿದೆ. ಭದ್ರಾ ಜಲಾಶಯ ಇಂದಿನ ( ಜು.27) ನೀರಿನ ಮಟ್ಟ 180.6 ಅಡಿ ಇದ್ದು, ಒಳ ಹರಿವು 39,017 ಕ್ಯೂಸೆಕ್ ಇದೆ. ಕಳೆದ ವರ್ಷ ಇದೇ ದಿನ 178.0 ಅಡಿ ನೀರು ಇತ್ತು. ಈ ವರ್ಷ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಸೂಚನೆಯಂತೆ ಸಾಕಷ್ಟು ಮಳೆ ಸುದಿದೆ. ಹೀಗಾಗಿ ಈ ವರ್ಷ ಬೇಗನೇ ಡ್ಯಾಂ ತುಂಬಿದೆ.
ಭದ್ರಾ ಜಲಾಶಯ ಇಂದಿನ ನೀರಿನ ಮಟ್ಟ
- ದಿನಾಂಕ :27-7-2025
- ಒಟ್ಟು ನೀರಿನ ಸಾಮರ್ಥ್ಯ: 71.54 ಟಿಎಂಸಿ
- ಪ್ರಸ್ತುತ ನೀರಿನ ಮಟ್ಟ ; 64,777 ಟಿಎಂಸಿ
- ಗರಿಷ್ಠ ಮಟ್ಟ: 186 ಅಡಿ
- ಇಂದಿನ ಮಟ್ಟ: 180.6 ಅಡಿ
- ಒಳ ಹರಿವು :39,017 ಕ್ಯೂಸೆಕ್
- ಹೊರ ಹರಿವು : 39,017 ಕ್ಯೂಸೆಕ್
- ಕ್ರೆಸ್ಟ್ ಗೇಟ್ : 34,306 ಕ್ಯೂಸೆಕ್
- ಎಡ ದಂಡೆ : 00
- ಬಲ ದಂಡೆ : 2000 ಕ್ಯೂಸೆಕ್
- ಕಳೆದ ವರ್ಷ ಈ ದಿನದ ನೀರಿನ ಮಟ್ಟ: 178.0 ಅಡಿ
- ಕಳೆದ ವರ್ಷದ ಇದೇ ದಿನ ಒಳಹರಿವು: 49,801 ಕ್ಯೂಸೆಕ್



