Connect with us

Dvgsuddi Kannada | online news portal | Kannada news online

ದಾವಣಗೆರೆ: ನೀರಾವರಿ ಸಲಹಾ ಸಮಿತಿ ಸಭೆಯ ನಿರ್ಧಾರದಂತೆ 100 ದಿನ ನೀರು ಹರಿಸದಿದ್ರೆ ಬೀದಿಗಿಳಿದು ಹೋರಾಟ; ಸಂಸದ ಜಿ.ಎಂ. ಸಿದ್ದೇಶ್ವರ

gm siddeshvwara 5

ದಾವಣಗೆರೆ

ದಾವಣಗೆರೆ: ನೀರಾವರಿ ಸಲಹಾ ಸಮಿತಿ ಸಭೆಯ ನಿರ್ಧಾರದಂತೆ 100 ದಿನ ನೀರು ಹರಿಸದಿದ್ರೆ ಬೀದಿಗಿಳಿದು ಹೋರಾಟ; ಸಂಸದ ಜಿ.ಎಂ. ಸಿದ್ದೇಶ್ವರ

ದಾವಣಗೆರೆ: ಯಾವುದೇ ಸಬೂಬು ಹೇಳದೇ ನೀರಾವರಿ ಸಲಹಾ ಸಮಿತಿ ಸಭೆಯ ಆದೇಶದಂತೆ‌ ಭದ್ರಾ ಜಲಾಶಯದಿಂದ ನಾಲೆಗೆ 100 ದಿನ ನೀರು ಹರಿಸಬೇಕು. ಕೊಟ್ಟ ಮಾತಿನಂತೆ ನೀರು ಹರಿಸದಿದ್ರೆ ಬೀದಿಗಿಳಿದು ಹೋರಾಟ ಮಾಡಲಾಗುವುದು ಎಂದು ಸಿದ್ದೇಶ್ವರ ಎಚ್ಚರಿಸಿದ್ದಾರೆ.

ಸರ್ಕಾರ ಕಾವೇರಿ ಮತ್ತು ಭದ್ರಾ ಜಲಾಶಯ ನೀರು ನಿರ್ವಹಣೆಯಲ್ಲಿ ತೋರುತ್ತಿರುವ ಎಡಬಿಡಂಗಿ ನಿಲುವು ತೋರುತ್ತಿದೆ. ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಕೈಗೊಂಡ ತೀರ್ಮಾನದಂತೆ ಭದ್ರಾ ನಾಲೆಗಳಿಗೆ 100 ದಿವಸ ನೀರು ಹರಿಸಬೇಕು. ಸಮಿತಿಯ ಆದೇಶವನ್ನು ಪಾಲಿಸಬೇಕಾಗಿರುವುದು ಅಧಿಕಾರಿಗಳ ಕರ್ತವ್ಯ. 40 ದಿನಗಳ ಕಾಲ ನೀರು ಹರಿಸಿ ನೀರು ನಿಲುಗಡೆ ಮಾಡಿರುವುದು ಖಂಡನೀಯ. ನಾಲೆಗಳಲ್ಲಿ ನೀರು ಹರಿಸಲು ತೀರ್ಮಾನ ಕೈಗೊಳ್ಳುವ ಮುನ್ನವೇ ಯೋಚನೆ ಮಾಡಬೇಕಾಗಿತ್ತು ಎಂದರು.

ರೈತರು ಈಗಾಗಲೇ ಭತ್ತದ ನಾಟಿ ಮಾಡಿ ಗೊಬ್ಬರ‌‌‌ ಹಾಕಿದ್ದಾರೆ.‌ಇದಕ್ಕಾಗಿ ಸಾಕಷ್ಟು ಹಣ ಖರ್ಚು ಮಾಡಿದ್ದಾರೆ. 50 ಸಾವಿರ ಹೆಕ್ಟೇರ್‌ಗೂ ಹೆಚ್ಚು ಪ್ರದೇಶದಲ್ಲಿ ಭತ್ತದ ನಾಟಿ ಮಾಡಿದ್ದು, ಇನ್ನೂ ಒಂದೂವರೆ ತಿಂಗಳು ನೀರು ಹರಿಸಿದರೆ ಭತ್ತದ ಬೆಳೆ ರೈತರ ಕೈಗೆ ಸಿಗಲಿದೆ. ನೀರು ಹರಿಸದೇ ಇದ್ದರೆ ರೈತರ ಸ್ಥಿತಿ ಶೋಚನೀಯವಾಗಲಿದೆ. ಹೀಗಾಗಿ ಸರ್ಕಾರ ರೈತರ ಹಿತ ಕಾಯುವ ಕೆಲಸ ಮಾಡಬೇಕುಎಂದು ತಿಳಿಸಿದ್ದಾರೆ.

 

ದಾವಣಗೆರೆ: ಹೊಸ ರಾಶಿ ಅಡಿಕೆ 1, 200 ರೂ. ಏರಿಕೆ; ಹಳೆಯ ಅಡಿಕೆ 2 ಸಾವಿರ ಕುಸಿತ..!

 

ದಾವಣಗೆರೆ: ಮೂರು ವರ್ಷದ 30ಕ್ಕೂ ಹೆಚ್ಚು ಅಡಿಕೆ ಮರ ಕಡಿದು ಹಾಕಿದ ದುಷ್ಕರ್ಮಿಗಳು

 

ದಾವಣಗೆರೆ: ಸೆ.26ರಂದು ಉಚಿತ ಅಣಬೆ ಬೆಳೆ ತರಬೇತಿ ಶಿಬಿರ

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top