Connect with us

Dvgsuddi Kannada | online news portal | Kannada news online

ಭದ್ರಾ ಜಲಾಶಯ; ಬಲದಂಡೆ ನಾಲೆ ನೀರು ಹರಿವಿನ ಪ್ರಮಾಣ ಹೆಚ್ಚಳ

images 2024 01 03T190702.490

ದಾವಣಗೆರೆ

ಭದ್ರಾ ಜಲಾಶಯ; ಬಲದಂಡೆ ನಾಲೆ ನೀರು ಹರಿವಿನ ಪ್ರಮಾಣ ಹೆಚ್ಚಳ

ದಾವಣಗೆರೆ:  ಭದ್ರಾ ಜಲಾಶಯದಿಂದ ಬಲದಂಡೆ ನಾಲೆಗೆ ವೇಳಾಪಟ್ಟಿ ಪ್ರಕಾರ ಸೋಮವಾರ ತಡ ರಾತ್ರಿಯಿಂದಲೇ ನೀರು ಬಿಡುಗಡೆ ಮಾಡಲಾಗಿದೆ.‌ ನಿನ್ನೆ (ಜ‌.16) 700 ಕ್ಯೂಸೆಕ್ಸ್ ನೀರು ಹರಿ ಬಿಟ್ಟಿದ್ದು, ಇಂದು 1500 ಕ್ಯೂಸೆಕ್ಸ್‌ ನಷ್ಟು ನೀರಿನ ಹರಿವು ಹೆಚ್ಚಿಸಲಾಗಿದೆ.

ಜ.6 ರಂದು ನಡೆದ ಭದ್ರಾ ಕಾಡಾ ಸಭೆಯಲ್ಲಿ ಜ. 20 ರಿಂದಆಫ್ ಅಂಡ್ ಆನ್ ಪದ್ದತಿಯಲ್ಲಿ ನೀರು ಹರಿಸಲು ತೀರ್ಮಾನಿಸಲಾಗಿತ್ತು. ನಂತರ ವೇಳಾಪಟ್ಟಿಯನ್ನು ಬದಲಾವಣೆ ಮಾಡಿದ್ದು, ಜ. 15 ರಿಂದ 12‌ದಿನ ನಾಲೆಯಲ್ಲಿ ನೀರು ಹರಿಸಲು ಸೂಚನೆ ನೀಡಲಾಗಿತ್ತು.

ವೇಳಾಪಟ್ಟಿ ಪ್ರಕಾರ ಭದ್ರಾ ಬಲದಂಡೆ (ದಾವಣಗೆರೆ-ಮಲೆಬೆನ್ನೂರು)  ವಿಭಾಗಕ್ಕೆ ಜನವರಿ 20ರ ಬದಲು ಜನವರಿ 15 ರಿಂದಲೇ 12 ದಿನ ನೀರು ಹರಿಸಿ, 20 ದಿನ ನಿಲ್ಲಿಸಿ ಒಟ್ಟು 53 ದಿನಗಳ ಕಾಲ ನೀರು ಹರಿಸುವುದು. ಎಡದಂಡೆಗೆ 70 ದಿನ ಬಲದಂಡೆಗೆ ಕೇವಲ 53 ದಿನ ನೀರು ಹರಿಸಲು ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top