Connect with us

Dvgsuddi Kannada | online news portal | Kannada news online

ಭದ್ರಾ ಜಲಾಶಯ; ಪ್ರತಿ‌ದಿನ 2 ಸಾವಿರ ಕ್ಯೂಸೆಕ್ಸ್ ತುಂಗಭದ್ರಾ ನದಿಗೆ ನೀರು ಬಿಡುಗಡೆ; ನದಿ ಪಾತ್ರದ ಸಾರ್ವಜನಿಕರು ಎಚ್ಚರದಿಂದಿರಲು ಸೂಚನೆ

brp dam

ದಾವಣಗೆರೆ

ಭದ್ರಾ ಜಲಾಶಯ; ಪ್ರತಿ‌ದಿನ 2 ಸಾವಿರ ಕ್ಯೂಸೆಕ್ಸ್ ತುಂಗಭದ್ರಾ ನದಿಗೆ ನೀರು ಬಿಡುಗಡೆ; ನದಿ ಪಾತ್ರದ ಸಾರ್ವಜನಿಕರು ಎಚ್ಚರದಿಂದಿರಲು ಸೂಚನೆ

ದಾವಣಗೆರೆ: ಬಹುಗ್ರಾಮ ಕುಡಿಯುವ ನೀರು ಯೋಜನೆ, ಮೈಲಾರಲಿಂಗೇಶ್ವರ ಜಾತ್ರಾ ಮಹೋತ್ಸವದ ಉದ್ದೇಶದಿಂದ ಜಲಾಶಯದಿಂದ ತುಂಗಭದ್ರಾ ನದಿಗೆ ನೀರು ಹರಿಸಲಾಗುತ್ತಿದ್ದು, ಸಾರ್ವಜನಿಕರು ನದಿ ದಂಡೆಗೆ ಬಾರದಂತೆ, ದಾಟದಂತೆ ಎಚ್ಚರಿಕೆ ವಹಿಸಬೇಕೆಂದು ಭದ್ರಾ ಜಲಾಶಯದ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ಅಧೀಕ್ಷಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನದಿಗೆ ಫೆಬ್ರವರಿ 5 ರಿಂದ 10 ರ ವರೆಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ಸ್ ಮತ್ತು ಫೆ.18 ರಿಂದ 23 ರ ವರೆಗೆ ಪ್ರತಿದಿನ 500 ಕ್ಯೂಸೆಕ್ಸ್ ನೀರನ್ನು ಹರಿಸಲಾಗುತ್ತದೆ. ಹಾವೇರಿ, ಗದಗ, ಮತ್ತು ಬೆಟಗೇರಿ, ರಾಣಿಬೆನ್ನೂರು, ಬ್ಯಾಡಗಿ, ಕೂಡ್ಲಗಿ, ಕೊಟ್ಟೂರು, ಹಗರಿಬೊಮ್ಮನಹಳ್ಳಿ ಮತ್ತು ಹಿರೇಕೆರೂರು ಪಟ್ಟಣಗಳಿಗೆ ಅಲ್ಲದೇ ನದಿಯ ಪಕ್ಕದಲ್ಲಿ ಬರುವ ಗ್ರಾಮಗಳಿಗೆ ಹೂವಿನಹಡಗಲಿ ತಾಲ್ಲೂಕಿನ ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿಯ ವಾರ್ಷಿಕ ಕಾರ್ಣಿಕೋತ್ಸವದ ಪ್ರಯುಕ್ತ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ಕುಡಿಯುವ ನೀರಿಗಾಗಿ ಹರಿಸಲಾಗುವುದು. ಆದರೆ ಅನಧಿಕೃತ ಪಂಪ್‍ಸೆಟ್‍ಗಳ ಮೂಲಕ ನೀರೆತ್ತುವುದನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top