Connect with us

Dvgsuddi Kannada | online news portal | Kannada news online

ನಾಳೆ ರಾತ್ರಿಯಿಂದ ಭದ್ರಾ ನಾಲೆಗಳಿಗೆ ನೀರು ಬಿಡುಗಡೆ; ಕಾಲುವೆ ಪಾತ್ರದ ಜನರಿಗೆ ಎಚ್ಚರಿಕೆ

ದಾವಣಗೆರೆ

ನಾಳೆ ರಾತ್ರಿಯಿಂದ ಭದ್ರಾ ನಾಲೆಗಳಿಗೆ ನೀರು ಬಿಡುಗಡೆ; ಕಾಲುವೆ ಪಾತ್ರದ ಜನರಿಗೆ ಎಚ್ಚರಿಕೆ

ದಾವಣಗೆರೆ: 2022-23ನೇ ಸಾಲಿನ ಭದ್ರಾ ಜಲಾಶಯ ಯೋಜನೆ ಅಚ್ಚುಕಟ್ಟು ವ್ಯಾಪ್ತಿಯ ಮುಂಗಾರು ಹಂಗಾಮಿನ ಬೆಳೆಗಳಿಗೆ ಭದ್ರಾ ಬಲದಂಡೆ ನಾಲೆ, ಎಡದಂಡೆ ನಾಲೆ, ಆನವೇರಿ ಶಾಖಾ ನಾಲೆ ದಾವಣಗೆರೆ ಶಾಖಾ ನಾಲೆ, ಮಲೇಬೆನ್ನೂರು ಶಾಖಾ ನಾಲೆ ಮತ್ತು ಹರಿಹರ ಶಾಖಾ ನಾಲೆಗಳಿಗೆ ಜಲಾಶಯದಿಂದ ನಾಳೆ (ಜು.13) ರಾತ್ರಿಯಿಂದ ನೀರನ್ನು ಹರಿಸಲಾಗುವುದು.

ಸಾರ್ವಜನಿಕ ಹಿತದೃಷ್ಠಿಯಿಂದ ಕಾಲುವೆ ಪಾತ್ರಗಳಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನಕರುಗಳನ್ನು ತೊಳೆಯುವುದು ಮತ್ತು ದೈನಂದಿನ ಚಟುವಟಿಕೆಗಳನ್ನು ಮಾಡುವುದು ಇತ್ಯಾದಿಗಳನ್ನು ನಿಷೇಧಿಸಲಾಗಿದೆ ಎಂದು ಕ.ನೀನಿನಿ ಭದ್ರಾ ಯೋಜನೆಯ ಅಧೀಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top