ಭದ್ರಾ ಡ್ಯಾಂ ; ನದಿಗೆ 6 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಭದ್ರಾವತಿ, ತರೀಕೆರೆ ತಾಲ್ಲೂಕಿನ ಗಡಿ ಪ್ರದೇಶದಲ್ಲಿರುವ ಲಕ್ಕವಳ್ಳಿ ಲ ಭದ್ರಾ ಜಲಾಶಯ ಭರ್ತಿಯಾಗುದೆ. ಅಪಾಯದ ಮಟ್ಟ ತಲುಪಿರುವ ಹಿನ್ನೆಲೆಯಲ್ಲಿ ಜಲಾಶಯದ 4ಕ್ರೆಸ್ಟ್ ಗೇಟ್‌ಗಳ ಮೂಲಕ ಸುಮಾರು 6 ಸಾವಿರ ಕ್ಯುಸೆಕ್ ನೀರು ನದಿಗೆ ಬಿಡುಗಡೆಗೊಳಿಸಲಾಗುತ್ತಿದೆ.

ನೀರು ಬಿಟ್ಟ ಹಿನ್ನೆಲೆ ಭದ್ರಾನದಿ ಮೈತುಂಬಿ ಹರಿಯುತ್ತಿದ್ದು, ಜಲಾಶಯದಿಂದ ಹೊರ ಬರುವ ನೀರಿನ ದೃಶ್ಯ ಕಣ್ತುಂಬಿಕೊಳ್ಳಲು ಜನರು ಡ್ಯಾಂ ನತ್ತ ಬರುತ್ತಿದ್ದಾರೆ.ಜಲಾಶಯದ ವ್ಯಾಪ್ತಿಯಲ್ಲಿ ಮಳೆ ಆಗುತ್ತಿರುವ ಹಿನ್ನೆಲೆ ಗರಿಷ್ಠ 186 ಅಡಿ ಸಾಮರ್ಥ್ಯದ ಜಲಾಶಯದಲ್ಲಿ 183.2 ಅಡಿ ನೀರು ಸಂಗ್ರಹವಾಗಿದೆ. ಜಲಾಶಯ ಅಪಾಯದಮಟ್ಟ ತಲುಪಿರುವ ಹಿನ್ನೆಲೆ ಮುನ್ನಚ್ಚರಿಕೆಯಾಗಿ 6 ಸಾವಿರ ಕ್ಯೂಸೆಕ್ ನೀರು ನದಿಗೆ ಬಿಡುಗಡೆಗೊಳಿಸಲಾಗುತ್ತಿದೆ.

ಭದ್ರಾ ಎಡದಂಡೆ ಹಾಗೂ ಬಲದಂಡೆ ನಾಲೆಯಲ್ಲಿ ನೀರು ಹರಿಸಲಾಗುತ್ತಿದೆ. ಇದು ರೈತರಲ್ಲಿ ಖುಷಿ ತಂದಿದೆ. ಭದ್ರಾ ಬಲಡಂದೆ ನಾಲೆಗೆ 358 ಕ್ಯುಸೆಕ್ ಹಾಗೂ ಎಡದಂಡೆ ನಾಲೆಗೆ 73 ಕ್ಯುಸೆಕ್ ಹರಿಸಲಾಗುತ್ತಿದ್ದು, ಇದು ಹೆಚ್ಚಳವಾಗುವ ಸಾಧ್ಯತೆ ಇದೆ. ಜುಲೈ ಅಂತ್ಯದಲ್ಲಿ ಜಲಾಶಯ ಭರ್ತಿ ಆಗಿರುವುದು ಅಚ್ಚುಕಟ್ಟು ಪ್ರದೇಶದ ರೈತರಲ್ಲಿ ಸಂತಸ ಮೂಡಿಸಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *