ದಾವಣಗೆರೆ: ಭದ್ರಾವತಿ, ತರೀಕೆರೆ ತಾಲ್ಲೂಕಿನ ಗಡಿ ಪ್ರದೇಶದಲ್ಲಿರುವ ಲಕ್ಕವಳ್ಳಿ ಲ ಭದ್ರಾ ಜಲಾಶಯ ಭರ್ತಿಯಾಗುದೆ. ಅಪಾಯದ ಮಟ್ಟ ತಲುಪಿರುವ ಹಿನ್ನೆಲೆಯಲ್ಲಿ ಜಲಾಶಯದ 4ಕ್ರೆಸ್ಟ್ ಗೇಟ್ಗಳ ಮೂಲಕ ಸುಮಾರು 6 ಸಾವಿರ ಕ್ಯುಸೆಕ್ ನೀರು ನದಿಗೆ ಬಿಡುಗಡೆಗೊಳಿಸಲಾಗುತ್ತಿದೆ.
ನೀರು ಬಿಟ್ಟ ಹಿನ್ನೆಲೆ ಭದ್ರಾನದಿ ಮೈತುಂಬಿ ಹರಿಯುತ್ತಿದ್ದು, ಜಲಾಶಯದಿಂದ ಹೊರ ಬರುವ ನೀರಿನ ದೃಶ್ಯ ಕಣ್ತುಂಬಿಕೊಳ್ಳಲು ಜನರು ಡ್ಯಾಂ ನತ್ತ ಬರುತ್ತಿದ್ದಾರೆ.ಜಲಾಶಯದ ವ್ಯಾಪ್ತಿಯಲ್ಲಿ ಮಳೆ ಆಗುತ್ತಿರುವ ಹಿನ್ನೆಲೆ ಗರಿಷ್ಠ 186 ಅಡಿ ಸಾಮರ್ಥ್ಯದ ಜಲಾಶಯದಲ್ಲಿ 183.2 ಅಡಿ ನೀರು ಸಂಗ್ರಹವಾಗಿದೆ. ಜಲಾಶಯ ಅಪಾಯದಮಟ್ಟ ತಲುಪಿರುವ ಹಿನ್ನೆಲೆ ಮುನ್ನಚ್ಚರಿಕೆಯಾಗಿ 6 ಸಾವಿರ ಕ್ಯೂಸೆಕ್ ನೀರು ನದಿಗೆ ಬಿಡುಗಡೆಗೊಳಿಸಲಾಗುತ್ತಿದೆ.
ಭದ್ರಾ ಎಡದಂಡೆ ಹಾಗೂ ಬಲದಂಡೆ ನಾಲೆಯಲ್ಲಿ ನೀರು ಹರಿಸಲಾಗುತ್ತಿದೆ. ಇದು ರೈತರಲ್ಲಿ ಖುಷಿ ತಂದಿದೆ. ಭದ್ರಾ ಬಲಡಂದೆ ನಾಲೆಗೆ 358 ಕ್ಯುಸೆಕ್ ಹಾಗೂ ಎಡದಂಡೆ ನಾಲೆಗೆ 73 ಕ್ಯುಸೆಕ್ ಹರಿಸಲಾಗುತ್ತಿದ್ದು, ಇದು ಹೆಚ್ಚಳವಾಗುವ ಸಾಧ್ಯತೆ ಇದೆ. ಜುಲೈ ಅಂತ್ಯದಲ್ಲಿ ಜಲಾಶಯ ಭರ್ತಿ ಆಗಿರುವುದು ಅಚ್ಚುಕಟ್ಟು ಪ್ರದೇಶದ ರೈತರಲ್ಲಿ ಸಂತಸ ಮೂಡಿಸಿದೆ.



