ದಾವಣಗೆರೆ: ಧಾರ್ಮಿಕ ದತ್ತಿ ಇಲಾಖೆಯಿಂದ ಕರ್ನಾಟಕ – ಭಾರತ್ ಗೌರವ್ ದ್ವಾರಕಾ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ಅತ್ಯಂತ ಕಡಿಮೆ ವೆಚ್ಚದಲ್ಲಿ ದ್ವಾರಕಾ, ನಾಗೇಶ್ವರ, ಸೋಮನಾಥ ಹಾಗೂ ತ್ರಯಂಬಕೇಶ್ವರ ದೇವಾಲಯಗಳ ಭೇಟಿಗೆ ಅವಕಾಶ ಕಲ್ಪಿಸಲಾಗಿದೆ.
ಈ ಪ್ಯಾಕೇಜ್ಗೆ ಒಟ್ಟು ₹30,000 ತಗುಲಲಿದ್ದು, ಈ ಪೈಕಿ ರಾಜ್ಯ ಸರ್ಕಾರದ ವತಿಯಿಂದ ಅಂದಾಜು ₹15,000 ಮೊತ್ತವನ್ನು ಭರಿಸಲಾಗುತ್ತದೆ. ಯಾತ್ರಾರ್ಥಿಗಳು ಬುಕ್ಕಿಂಗ್ ಮೊತ್ತವಾಗಿ ₹15,000 ಅನ್ನು ಮಾತ್ರ ಪಾವತಿಸಬೇಕಾಗುತ್ತದೆ.
ಸೌಲಭ್ಯಗಳು: ಪ್ಯಾಕೇಜ್ನಲ್ಲಿ 3 ಟೈರ್ ಎ.ಸಿ. ರೈಲಿನಲ್ಲಿ ಪ್ರಯಾಣ, ಊಟ,ವಸತಿ, ಸ್ಥಳೀಯ ಸಾರಿಗೆ ಮತ್ತು ದರ್ಶನದ ವ್ಯವಸ್ಥೆ ಪ್ರಯಾಣಿಸುವಾಗ ಆಧುನಿಕ ಪ್ಯಾಂಟ್ರಿ ಕಾರಿನಲ್ಲಿ ತಯಾರಿಸಿದ ತಾಜಾ ಸ್ಥಳೀಯ ಆಹಾರವನ್ನು ನೀಡಲಾಗುವುದು ಯಾತ್ರಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ವೈದ್ಯಕೀಯ ಸಹಾಯ ವ್ಯವಸ್ಥೆ ಮಾಡಲಾಗಿದೆ
ರೈಲು ಹತ್ತುವ ಹಾಗೂ ಇಳಿಯುವ ಸ್ಥಳಗಳು:
ಬೆಂಗಳೂರು (SMVT), ತುಮಕೂರು, ಅರಸಿಕೆರೆ, ಬೀರೂರು,ದಾವಣಗೆರೆ, ಹಾವೇರಿ, ಬೆಳಗಾವಿ. ರೈಲು ಸೆ.29 ರಂದು ಹೊರಡಲಿದ್ದು, ಅಕ್ಟೋಬರ್ 05ರಂದು ವಾಪಸ್ ಬರಲಿದೆ.ಬುಕ್ಕಿಂಗ್ಗಾಗಿ https://www.irctctourism.com/Karnatakbgaurav?searchKey=&tagType=&travelType=Domestic§or=All&bdar=6 ವೆಬ್ಸೈಟ್ಗೆ ಭೇಟಿ ನೀಡಬಹುದು. ಅಥವಾ 9003140710, 8595931292, 8595931294, 9731641611, 8595931293, 8595931291 ಗೆ ಕರೆ ಮಾಡಿ ಟಿಕೆಟ್ ಬುಕ್ ಮಾಡಿಕೊಳ್ಳಬಹುದು.
ಪ್ರವರ್ಗ ʼಸಿʼ ಅಧಿಸೂಚಿತ ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರು,ನೌಕರರು ಭಾರತ್ ಗೌರವ್ ದ್ವಾರಕಾ ಯಾತ್ರೆ ತೆರಳಲು ಇಚ್ಛಿಸಿದ್ದಲ್ಲಿ ದಾಖಲೆಗಳೊಂದಿಗೆ ಆಯುಕ್ತರ ಕಚೇರಿಗೆ ನೇರವಾಗಿ ಸೆಪ್ಟೆಂಬರ್ 20ರ ಒಳಗಾಗಿ ಮನವಿ ಸಲ್ಲಿಸಬಹುದಾಗಿದೆ.



