ಭದ್ರಾ ಜಲಾಶಯ: 7 ಸಾವಿರ ಕ್ಯೂಸೆಕ್ ಗಡಿದಾಟಿದ ಒಳ ಹರಿವು; ಭತ್ತ ಬೆಳೆಗಾರರಲ್ಲಿ ಸಂತಸ- ಇಂದಿನ ನೀರಿನ ಮಟ್ಟ ಎಷ್ಟಿದೆ..?

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ದಾವಣಗೆರೆ: ಭದ್ರಾ ಜಲಾಶಯ ವ್ಯಾಪ್ತಿಯ ಚಿಕ್ಕಮಗಳೂರು, ಶಿವಮೊಗ್ಗ ತೀರ್ಥಹಳ್ಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಒಂದೇ ದಿನದಲ್ಲಿ ಒಳ ಹರಿವು 7ಸಾವಿರ ಕ್ಯೂಸೆಕ್ ಗಡಿದಾಟಿದೆ. ಇಂದು ( ಜು.6) 7,736 ಕ್ಯೂಸೆಕ್ ಒಳ ಹರಿವಿದ್ದು, ನಿನ್ನೆಗೆ ಹೋಲಿಸಿದರೆ ಇಂದು 9 ಸಾವಿರ ಕ್ಯೂಸೆಕ್ ಕುಸಿತ ಕಂಡಿದೆ.

ಏಕಾಏಕಿ ಒಳ ಹರಿವು ಹೆಚ್ಚಳದಿಂದ ಭದ್ರಾ ಅಚ್ಚುಕಟ್ಟು ವ್ಯಾಪ್ತಿಯ ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ ಜಿಲ್ಲೆಯ ರೈತರಲ್ಲಿ ತುಸು ಸಂತಸ ಮನೆ ಮಾಡಿದೆ. ಅದರಲ್ಲೂ ಭದ್ರಾವತಿ, ಹೊನ್ನಾಳಿ, ಹರಿಹರ, ದಾವಣಗೆರೆ ಭಾಗದ ಭತ್ತದ ಬೆಳೆಗಾರಲ್ಲಿ ಕೊನೆ ಗಳಿಗೆಯಲ್ಲಿ ಭತ್ತ ನಾಟಿ ಮಾಡುವ ಭರವಸೆ ಹುಟ್ಟಿದೆ.

ಭದ್ರಾ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಗೆ ಬರುವ ದಾವಣಗೆರೆ ಜಿಲ್ಲೆಯಲ್ಲಿ 65,847 ಹೆಕ್ಟೇರ್‌ ಪ್ರದೇಶದಲ್ಲಿ ಭತ್ತ ಬೆಳೆಯಲಾಗುತ್ತಿದೆ. ಸಸಿ ಮಡಿ ಮಾಡಿಕೊಳ್ಳುವ ಕಾರ್ಯ ಜೂನ್‌ ಕೊನೆಯ ವಾರದಿಂದ ಆರಂಭವಾಗುವುದು ಸಾಮಾನ್ಯ. ಆದರೆ,‌ ಜುಲೈ ಮೊದಲ ವಾರ ಕಳೆದರೂ ಭತ್ತ ಸಸಿ ‌ಮಡಿ ಕಾರ್ಯ ಶುರುವಾಗಿಲ್ಲ. ಈಗ ಭದ್ರಾ ಜಲಾಶಯದ ನೀರಿನ ಮಟ್ಟ ದಿನದಿಂದ ದಿನಕ್ಕೆ ಏರಿಕೆಯಾಗಿರುವುದರಿಂದ ಸಸಿ ಮಡಿ ಮಾಡುವ ಶುರುವಾಗುವ ಸಾಧ್ಯತೆ ಇದೆ. ಇದೇ ರೀತಿ ಮಳೆಯಾದರೆ ಡ್ಯಾಂ ಭರ್ತಿಯಾಗಿ ಬೆಳೆಗೆ ನೀರು ಸಿಗುವ ಸಂಭವವಿದೆ.

ಕಳೆದ ವರ್ಷದ ತೀವ್ರ ಬರಗಾಲದಿಂದ 68 ವರ್ಷದಲ್ಲಿಯೇ ಅತಿ ಕಡಿಮೆ ನೀರು ಸಂಗ್ರಹವಾಗಿದ್ದ ಭದ್ರಾ ಜಲಾಯಶ ವ್ಯಾಪ್ತಿಯಲ್ಲಿ ಮುಂಗಾರು ಪೂರ್ವ ಮಳೆ ಮತ್ತು ಮುಂಗಾರು ಮಳೆಯ ಉತ್ತಮ ಆರಂಭ ಪಡೆದಿತ್ತದರೂ, ನಂತರದ 20 ದಿನದಿಂದ ಸಂಪೂರ್ಣ ತಗ್ಗಿತ್ತು. ಇದರ ನಡುವೆ ಈಗ ಎರಡ್ಮೂರು ದಿನ ಉತ್ತಮ ಮಳೆಯಾಗಿದೆ‌‌. ಮುಂದೆ ಇದೇ ರೀತಿ ಮಳೆಯಾಗಿ ಬೇಗ ಡ್ಯಾಂ ತುಂಬಲಿ ಎಂಬುದು ಭದ್ರಾ ಅಚ್ಚುಕಟ್ಟು ಭಾಗದ ರೈತರ ಅಶಯವಾಗಿದೆ.

ತರಿಕೇರಿ ಮತ್ತು ಭದ್ರಾವತಿ ಗಡಿ ಭಾಗದಲ್ಲಿರುವ ಲಕ್ಕವಳ್ಳಿಯ ಭದ್ರಾ ಜಲಾಶಯದ ಒಟ್ಟು ನೀರಿನ ಸಾಮರ್ಥ್ಯ 71.54 ಟಿಎಂಸಿ ಇದ್ದು, ಗರಿಷ್ಠ 186 ಅಡಿಯಾಗಿದೆ. ಇಂದಿನ (ಜು.6) ನೀರಿನ ಮಟ್ಟ 130.7 ಅಡಿಯಷ್ಟಿದೆ. ಒಳ ಹರಿವು 7,736 ಕ್ಯೂಸೆಕ್‌ ನಷ್ಟಿದೆ.

  • ಭದ್ರಾ ಜಲಾಶಯ ನೀರಿನ ವಿವರ
  • ಒಟ್ಟು ನೀರಿನ ಸಾಮರ್ಥ್ಯ 71.54 ಟಿಎಂಸಿ
  • ಗರಿಷ್ಠ : 186 ಅಡಿ
  • ಇಂದಿನ ಮಟ್ಟ: 130.7 ಅಡಿ
  • ಒಳ ಹರಿವು : 7,736 ಕ್ಯೂಸೆಕ್ (ಜು.5ರಂದು: 16,171 ಕ್ಯೂಸೆಕ್)
  • ಹೊರ ಹರಿವು : 352 ಕ್ಯೂಸೆಕ್
  • ಕಳೆದ ವರ್ಷ ಈ ದಿನದ ನೀರಿನ ಮಟ್ಟ: 138 ಅಡಿ
Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *