ದಾವಣಗೆರೆ: BIET ಕಾಲೇಜಿನಲ್ಲಿ ನಾಳೆಯಿಂದ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಎರಡು ದಿನ ಕಾರ್ಯಾಗಾರ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ದಾವಣಗೆರೆ: ಬಾಪೂಜಿ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯ ಹಾಗೂ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ನಾಳೆ (BIET )  ನಾಳೆಯಿಂದ (ಡಿ.10) ಎರಡು ದಿನ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಲೇಜಿನ ಸಾರ್ವಜನಿಕ ಸಂಪರ್ಕ ಡೀನ್ ಡಾ
ಜಿ.ಪಿ.ದೇಸಾಯಿ, ರಾಷ್ಟ್ರೀಯ ಶಿಕ್ಷಣ ನೀತಿ -2020 ಕುರಿತು ನಾಳೆ ಬೆಳಿಗ್ಗೆ 10 ಗಂಟೆಗೆ ಬಿಐಇಟಿ ಆವರಣದಲ್ಲಿರುವ ಎಸ್.ಎಸ್ . ಮಲ್ಲಿಕಾರ್ಜುನ ಸಾಂಸ್ಕೃತಿಕ ಕೇಂದ್ರದಲ್ಲಿ ಕಾರ್ಯಾಗಾರ ನಡೆಯಲಿದೆ. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ . ಕರಿಸಿದ್ದಪ್ಪ , ಕುಲಸಚಿವರಾದ ಡಾ. ಎ.ಎಸ್.ದೇಶಪಾಂಡೆ , ಬೆಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಡಾ. ಕೆ . ಸಿದ್ಧಪ್ಪ ಮತ್ತು ಬಿ.ಐ.ಇ.ಟಿ. ಕಾಲೇಜಿನ ನಿರ್ದೇಶಕರಾದ ಪ್ರೊ . ವೈ . ವೃಷಭೇಂದ್ರಪ್ಪ ಮುಖ್ಯ ಅತಿಥಿಗಳಾಗಿ ಭಾಗಿಯಾಗಲಿದ್ದಾರೆ.

ಬಿ.ಐ.ಇ.ಟಿ. ಪ್ರಾಂಶುಪಾಲರಾದ ಎಚ್.ಬಿ.ಅರವಿಂದ  ಸಮಾರಂಭದ ಅಧ್ಯಕ್ಷತೆ ವಹಿಸುವರು. ಶಿಕ್ಷಣವು ಪ್ರತಿಯೊಬ್ಬ ವ್ಯಕ್ತಿಯ ಹಕ್ಕಾಗಿದ್ದು , ಅವರ ಜೀವನವನ್ನು ರೂಪಿಸುವುದರಲ್ಲಿ ಮಹತ್ತರ ಪಾತ್ರವನ್ನು ವಹಿಸುತ್ತದೆ. ಶಿಕ್ಷಣ ವ್ಯವಸ್ಥೆ ಮತ್ತು ನೀತಿಗಳು ಕಾಲಕ್ಕೆ ಅನುಗುಣವಾಗಿದ್ದು ನವೀನ ಪದ್ಧತಿಗಳನ್ನು ಅಳವಡಿಸಿಕೊಳ್ಳಬೇಕಾಗುತ್ತದೆ. ಈ ನಿಟ್ಟಿನಲ್ಲಿ ಶಿಕ್ಷಣ ವ್ಯವಸ್ಥೆಯಲ್ಲಿ ಸಮಗ್ರ ಬದಲಾವಣೆ ತಂದು ಆಧುನೀಕರಣಗೊಳಿಸಲು ರಾಷ್ಟ್ರೀಯ ಶಿಕ್ಷಣ ನೀತಿ -2020 ನ್ನು ರೂಪಿಸಲಾಗಿದೆ ಎಂದರು.

ಈ ಕಾರ್ಯಾಗಾರದಲ್ಲಿ ರಾಜ್ಯದ ವಿವಿಧ ತಾಂತ್ರಿಕ ಮಹಾವಿದ್ಯಾಲಯಗಳ ಸುಮಾರು 400 ಜನ ಉಪನ್ಯಾಸಕರು ಈ ಕಾರ್ಯಾಗಾರದಲ್ಲಿ ಭಾಗವಹಿಸಲಿದ್ದಾರೆ. ಕೋವಿಡ್ -19 ರ ನಿಯಮಾವಳಿಗಳಂತೆ , ಈ ಕಾರ್ಯಾಗಾರವನ್ನು ಆನ್ ಲೈನ್ ಮತ್ತು ಆಫ್ ಲೈನ್ ಎರಡೂ ರೀತಿಯಲ್ಲಿ ಆಯೋಜಿಸಲಾಗಿದೆ . ಈ ಕಾರ್ಯಾಗಾರದ ಉದ್ದೇಶ  ಹೊಸ ಶಿಕ್ಷಣ ನೀತಿ 2020 ನ್ನು ಅರ್ಥೈಸುವುದು ಮತ್ತು ವಿಶ್ಲೇಷಿಸುವುದು , ಕೌಶಲ್ಯ ತರಬೇತಿ , ಉದ್ಯಮ ಮತ್ತು ಶಿಕ್ಷಣ ಕ್ಷೇತ್ರದ ನಡುವಿನ ಅಂತರ ಕಡಿಮೆ ಮಾಡುವುದು , ನೀತಿಯ ಅನುಷ್ಠಾನದಲ್ಲಿ ವಿದ್ಯಾರ್ಥಿಗಳ , ಶಿಕ್ಷಕರ ಮತ್ತು ಸಮಾಜದ ಪಾತ್ರದ ಬಗ್ಗೆ ಚರ್ಚೆ ನಡೆಯಲಿದೆ.  ಈ ಸಂದರ್ಭದಲ್ಲಿ ಪ್ರಾಂಶುಪಾಲ ಡಾ.ಹೆಚ್.ಬಿ ಅರವಿಂದ್, ಪ್ರೋ.ವೈ.ವೃಷಬೇಂದ್ರಪ್ಪ,ಸಿ.ಆರ್ ನಿರ್ಮಲ, ಕಲ್ಲೇಶಪ್ಪ ಉಪಸ್ಥಿತರಿದ್ದರು.

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *