ದಾವಣಗೆರೆ: ಬೈಕ್ ಸವಾರನ ಮೇಲೆ ಟಿಪ್ಪರ್ಲಾರಿಯೊಂದು ಹರಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಬಂಬೂಬಜಾರ್ ರಸ್ತೆಯ ಎಚ್.ಪಿ. ಪೆಟ್ರೋಲ್ ಬಂಕ್ ಬಳಿ ನಡೆದಿದೆ.
ಸರಸ್ವತಿ ನಗರದ ನಿವಾಸಿ ಜಿ.ಬಿ. ಮಂಜನಾಥ್ ಕಡಕೊಳ (55) ಸಾವು ಕಂಡ ದುರ್ದೈವಿ. ಮಂಜುನಾಥ್ ಹಮಾಲಿ ಕೆಲಸ ಮಾಡುತ್ತಿದ್ದರು. ಕೆಲಸಕ್ಕೆಂದು ಬೈಕ್ನಲ್ಲಿ ಹೋಗುತ್ತಿದ್ದರು. ಈ ವೇಳೆ ಏಕಾಏಕಿ ಹಿಂಬದಿಯಿಂದ ಬಂದ ಟಿಪ್ಪರ್ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಕೆಳಗಡೆ ಬಿದ್ದ ಮಂಜುನಾಥ್ ಮೇಲೆ ಲಾರಿ ಚಕ್ರ ಹರಿದಿದೆ.ತೀವ್ರ ರಕ್ತಸ್ರಾವಗೊಂಡು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.ಘಟನಾ ಸ್ಥಳಕ್ಕೆ ಆರ್ಎಂಸಿ ಪೊಲೀಸ್ ಠಾಣಾ ಪೊಲೀಸರು ಭೇಟಿ
ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಪ್ರಕರಣ ದಾಖಲಾಗಿದೆ.


