ದಾವಣಗೆರೆ: ರಾಜ್ಯದಲ್ಲಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಬಲಗೊಳಿಸಲು ದಾವಣಗೆರೆಯಲ್ಲಿ ಮಾ.1ರಂದು ಚಿತ್ರದುರ್ಗ, ಹಾವೇರಿ, ದಾವಣಗೆರೆ ಜಿಲ್ಲೆಗಳ ವೀರಶೈವ ಲಿಂಗಾಯತ ಸಮಾಜದ ಪ್ರಮುಖರ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಮುಖಂಡ ಲೋಕಿಕೆರೆ ನಾಗರಾಜ ಹೇಳಿದರು.
ದಾವಣಗೆರೆ: ಮಾಗನೂರು ಬಸಪ್ಪ ಪ್ರತಿಷ್ಠಾನದಿಂದ ವೈದ್ಯಕೀಯ ಮತ್ತು ದಂತ ವೈದ್ಯಕೀಯ ವಿದ್ಯಾರ್ಥಿಗಳಿಗೆ ಅರ್ಥಿಕ ನೆರವು
ಮೂರು ಜಿಲ್ಲೆಗಳ ವೀರಶೈವ ಲಿಂಗಾಯತ ಸಮಾಜದ ಎಲ್ಲ ಒಳಪಂಗಡಗಳ ಪ್ರಮುಖರ ಸಭೆಯನ್ನು ಅಂದು ಬೆಳಗ್ಗೆ 11.30ಕ್ಕೆ ವಿದ್ಯಾನಗರದ ರಾಷ್ಟ್ರೀಯ ಹೆದ್ದಾರಿ ಸರ್ವೀಸ್ ರಸ್ತೆಯ ಸಮೃದ್ಧಿ ಬ್ಯಾಂಕ್ ವೆಟ್ ಹಾಲ್ನಲ್ಲಿ ಸಭೆ ನಡೆಸಲು ನಿರ್ಧರಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಈ ಸಭೆಯಲ್ಲಿ ವೀರಶೈವ ಲಿಂಗಾಯತ ಸಮಾಜದ ಪ್ರಮುಖರು, ಹಾಲಿ-ಮಾಜಿ ಶಾಸಕರು, ಹಾಲಿ-ಮಾಜಿ ಸಂಸದರು, ಮಾಜಿ ಸಚಿವರು ಭಾಗವಹಿಸುವರು. ಮುಂಬರುವ ದಿನಗಳಲ್ಲಿ ಬೆಂಗಳೂರು ಅಥವಾ ದಾವಣಗೆರೆಯಲ್ಲಿ ರಾಜ್ಯಮಟ್ಟದ ಸಭೆ ನಡೆಸಿ, ಪಕ್ಷವನ್ನು ಸಂಘಟಿಸುವ ಬಗ್ಗೆ ಸಭೆ ಚರ್ಚಿಸಲಾಗುವುದು ಎಂದರು.
ಸಮಾಜದ ಮಾಸ್ ಲೀಡರ್ ಮಾಜಿ ಮುಖ್ಯಮಂತ್ರಿ, ಪಕ್ಷದ ಹಿರಿಯರಾದ ಬಿ.ಎಸ್.ಯಡಿಯೂರಪ್ಪ ಮಾತ್ರ. ಯಾವುದೇ ಒಳಪಂಗಡಗಳ ಬೇಧವಿಲ್ಲದೇ ಎಲ್ಲ ಒಳಪಂಗಡಗಳು ಸಾಮೂಹಿಕ ನಾಯಕನೆಂದು ಒಪ್ಪಿದ್ದಾರೆ. ಈಗ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೂ ಮಾಸ್ ಲೀಡರ್ ಅಂತಾ ಒಪ್ಪಿ, ಬೆಂಬಲಕ್ಕೆ ನಿಂತಿದ್ದಾರೆ.
ವಿಜಯೇಂದ್ರ ಬಗ್ಗೆ ಪಕ್ಷದ ದಾವಣಗೆರೆ ಜಿಲ್ಲಾ ನಿಕಟಪೂರ್ವ ಜಿಲ್ಲಾಧ್ಯಕ್ಷರೊಬ್ಬರು ಬಿ.ವೈ.ವಿಜಯೇಂದ್ರ ಹಠಾವೋ, ಬಿಜೆಪಿ ಬಚಾವೋ ಅಂತಾ ಬೆಂಗಳೂರಿನಲ್ಲಿ ಹೇಳಿಕೆ ನೀಡಿದ್ದಾರೆ. ಅದೇ ವ್ಯಕ್ತಿ ಪಕ್ಷದಲ್ಲಿ ಈ ಮಟ್ಟಕ್ಕೆ ಬೆಳೆಯಲು ಯಡಿಯೂರಪ್ಪ ಕಾರಣ. ಬಿಎಸ್ವೈ ಹೆಸರು ಹೇಳಿಕೊಂಡು, ಪಕ್ಷದಲ್ಲಿ ಬೆಳೆದು ಜಿಲ್ಲಾಧ್ಯಕ್ಷರಾಗಿ, ಹರಿಹರ ಕ್ಷೇತ್ರದ ಟಿಕೆಟ್ ಪಡೆದು, ಕಳೆದ ಲೋಕಸಭೆ ಚುನಾವಣೆಯಲ್ಲಿ ಜಿಲ್ಲಾ ಉಸ್ತುವಾರಿ ವಹಿಸಿದ್ದ ವ್ಯಕ್ತಿಯೇ ಈಗ ಭಿನ್ನರ ಜೊತೆಗೂಡಿ ಬಾಯಿಗೆ ಬಂದಂತೆ ಮಾತನಾಡುತ್ತದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಯಡಿಯೂರಪ್ಪ 2021ರಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆರಾಜೀನಾಮೆ ನಙತರ ಸಮಾಜದ ಮುಖಂಡರು, ಕಾರ್ಯಕರ್ತರಿಗೆ ಬೇಸರವಾಗಿ ಪಕ್ಷದಲ್ಲಿ ಸಕ್ರಿಯವಾಗಿಲ್ಲ. ಅಂತಹವರನ್ನೆಲ್ಲಾ ಮತ್ತೆ ಒಗ್ಗೂಡಿಸಿ, ಪಕ್ಷಕ್ಕೆ ಬಲ ತುಂಬಿಸುವ ನಿಟ್ಟಿನಲ್ಲಿ ಮೂರೂ ಜಿಲ್ಲೆಗಳ ಸಭೆ ಆಯೋಜಿಸಲಾಗಿದೆ. ಇದರಿಂದ ಪಕ್ಷಕ್ಕೆ ಬಲ ತುಂಬುವ ಪ್ರಯತ್ನ ನಡೆಯಲಿದೆ ಎಂದರು.
ಪಕ್ಷದ ಜಿಲ್ಲಾಧ್ಯಕ್ಷ ಎನ್.ರಾಜಶೇಖರ ನಾಗಪ್ಪ, ಪ್ರಧಾನ ಕಾರ್ಯದರ್ಶಿ ಧನಂಜಯ ಕಡ್ಲೇಬಾಳು, ಚಂದ್ರಶೇಖರ ಪೂಜಾರ, ರಾಜು ವೀರಣ್ಣ, ಜಯಣ್ಣ, ಬಾತಿ ಶಿವಕುಮಾರ, ತೋಟಪ್ಪ ಇತರರು ಇದ್ದರು.



