Connect with us

Dvgsuddi Kannada | online news portal | Kannada news online

ದಾವಣಗೆರೆ: ಕಾಂಗ್ರೆಸ್ ಪಕ್ಷದಿಂದ ಸೀರೆ, ಕುಕ್ಕರ್ ಹಂಚಿಕೆ; ಬಿಜೆಪಿ ಆರೋಪ

ದಾವಣಗೆರೆ

ದಾವಣಗೆರೆ: ಕಾಂಗ್ರೆಸ್ ಪಕ್ಷದಿಂದ ಸೀರೆ, ಕುಕ್ಕರ್ ಹಂಚಿಕೆ; ಬಿಜೆಪಿ ಆರೋಪ

ದಾವಣಗೆರೆ: ಕಾಂಗ್ರೆಸ್ ಪಕ್ಷ‌‌ ಮತದಾರನ್ನು ಸೆಳೆಯಲು ಸೀರೆ, ಕುಕ್ಕರ್ ಹಂಚಿಕೆ ಮಾಡುತ್ತಿದೆ ಎಂದು ಆರೋಪಿಸಿದ ಬಿಜೆಪಿ ನಾಯಕರರು, ಹಂಚಿದ ಸೀರೆ, ಕುಕ್ಕರ್ ಪ್ರದರ್ಶನ ಮಾಡಿದರು.

ನಾವು ಮಾಡಿರುವ ಅಭಿವೃದ್ಧಿ ಕಾರ್ಯಗಳೇ ನಮ್ಮ ಗೆಲುವಿಗೆ ಶ್ರೀರಕ್ಷೆ ಎನ್ನುವ ಶಾಮನೂರು ಶಿವಶಂಕರಪ್ಪ ಹಾಗೂ ಮಲ್ಲಿಕಾರ್ಜುನ್ ಅವರು, ಮತದಾರರಿಗೆ ಆಮಿಷ ಒಡ್ಡುವ ನಿಟ್ಟಿನಲ್ಲಿ ಸೀರೆ, ಕುಕ್ಕರ್ ಗಳನ್ನು ಯಾಕೆ ಹಂಚುತ್ತಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಯಶವಂತ್ ರಾವ್ ಜಾಧವ್ ಪ್ರಶ್ನಿಸಿದರು.

ಹಗಲು ದರೋಡೆ ಮಾಡುವವರು ಕಾಂಗ್ರೆಸ್ ನವರು, ಬಿಜೆಪಿ ಮೇಲೆ ಏಕೆ ಗೂಬೆ ಕೂರಿಸುವುದು? ಮೊದಲು ಇವರ ಆಸ್ತಿ ಎಷ್ಟಿತ್ತು, ಈಗ ಎಷ್ಟಿದೆ ಎಲ್ಲರಿಗೂ ಗೊತ್ತಿದೆ. ಇವರಿಗೆ ಅಕ್ರಮ ಆಸ್ತಿ ನಿರ್ವಹಣೆ ಮಾಡಲು ಅಧಿಕಾರ ಬೇಕು. ಹಾಗಾಗಿ ಅಪ್ಪ, ಮಗ ಇಬ್ಬರೂ ಚುನಾವಣೆಗೆ ನಿಲ್ಲುತ್ತಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಅಲ್ಪಸಂಖ್ಯಾತ ಮತದಾರರು ಈಗಲಾದರೂ ಎಚ್ಚೆತ್ತುಕೊಳ್ಳಬೇಕು.ಇದುವರೆಗೂ ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ದಾರಿ ತಪ್ಪಿಸುತ್ತಿದ್ದರು. ಆದರೆ, ಈಗ ಅವರು ಸಹ ಪ್ರಬುದ್ಧರಾಗಿದ್ದು, ಈಗಾಗಲೇ ಸಾವಿರಾರು ಅಲ್ಪಸಂಖ್ಯಾತರು ಬಿಜೆಪಿಗೆ ಸೇರಿದ್ದಾರೆ‌ ಎಂದರು.

ದಾವಣಗೆರೆ ದಕ್ಷಿಣದಲ್ಲಿ ಉತ್ತಮ ರಸ್ತೆ, ಪಾರ್ಕ್, ಆಸ್ಪತ್ರೆ. ಇಲ್ಲ. ಜನರಿಗೆ ಎಲ್ಲ ವಿಷಯಗಳು ಅರ್ಥವಾಗಿದ್ದು, ಈ ಬಾರಿ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದರು. ಈ ಸಂದರ್ಭದಲ್ಲಿ ಲೋಕಿಕೆರೆ ನಾಗರಾಜ್, ರಾಜನಹಳ್ಳಿ ಶಿವಕುಮಾರ್, ಸೋಗಿ ಶಾಂತಕುಮಾರ್, ಶ್ರೀನಿವಾಸ್, ಎಲ್.ಡಿ. ಗೋಣೆಪ್ಪ, ಟಿಂಕರ್ ಮಂಜಣ್ಣ, ಗೋಪಾಲ್ ರಾವ್ ಮಾನೆ, ಶಿವನಗೌಡ ಪಾಟೀಲ್, ಹನುಮಂತಪ್ಪ, ಪವನ್, ಸುರೇಶ ಮತ್ತಿತರರು ಇದ್ದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top